ಚಾಮುಂಡಿ ಬೆಟ್ಟದಲ್ಲಿ ಅಹಿತಕರ ಘಟನೆ ಜರುಗದಂತೆ ಮುನ್ನೆಚ್ಚರಿಕೆ ಕ್ರಮ ತೆಗೆದುಕೊಳ್ಳಲಾಗಿದೆ: ಪೊಲೀಸ್ ಕಮೀಷನರ್

ಚಾಮುಂಡಿ ಬೆಟ್ಟದಲ್ಲಿ ಅಹಿತಕರ ಘಟನೆ ಜರುಗದಂತೆ ಮುನ್ನೆಚ್ಚರಿಕೆ ಕ್ರಮ ತೆಗೆದುಕೊಳ್ಳಲಾಗಿದೆ: ಪೊಲೀಸ್ ಕಮೀಷನರ್


ಮೈಸೂರು, ಜೂನ್ 27: ಇಂದು ಆಷಾಢಮಾಸದ ಮೊದಲ ಶುಕ್ರವಾರ (first Friday), ಹಾಗಾಗಿ ನಗರದ ಜಗತ್ಪ್ರಸಿದ್ಧ ಚಾಮುಂಡಿದೇವಿ ದೇವಸ್ಥಾನದ ಅವರಣದಲ್ಲಿ ಭಕ್ತರು ಜಾತ್ರೆಯಂತೆ ನೆರೆದಿದ್ದಾರೆ. ಬೆಂಗಳೂರು ಕಾಲ್ತುಳಿತ ಪ್ರಕರಣ ಹಿನ್ನೆಲೆಯಲ್ಲಿ ಚಾಮುಂಡಿ ಬೆಟ್ಟದ ಮೇಲೆ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಾಟು ಮಾಡಲಾಗಿದೆ ಮತ್ತು ನಗರ ಪೊಲೀಸ್ ಕಮೀಷನರ್ ಸೀಮಾ ಲಾಟ್ಕರ್ ನಮ್ಮ ಪ್ರತಿನಿಧಿಗೆ ವಿವರಗಳನ್ನು ನೀಡಿದ್ದಾರೆ. ಯಾವುದೇ ಅಹಿತಕರ ಘಟನೆ ಜರುಗದಂತೆ ನಿಗಾ ವಹಿಸಲು ಇಬ್ಬರು ಡಿಸಿಪಿ, ಒಬ್ಬ ಹೆಚ್ಚುವರಿ ಎಸ್​ಪಿ, 1,000 ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿ, 100 ಹೋಮ್ ಗಾರ್ಡ್ ಮತ್ತು ಮಹಿಳಾ ತಂಡವೂ ಸೇರಿದಂತೆ 4 ಕೆಎಸ್​ಅರ್​​ಪಿ ತುಕಡಿಗಳನ್ನು ನಿಯೋಜಿಸಲಾಗಿದೆ ಎಂದು ಸೀಮಾ ಲಾಟ್ಕರ್ ಹೇಳಿದರು.

ಇದನ್ನೂ ಓದಿ: Aashada Month: ಜೂನ್​ 26ರಿಂದ ಆಷಾಢ ಮಾಸ ಆರಂಭ, ಈ ಕೆಲಸಗಳನ್ನು ತಪ್ಪಾಗಿ ಕೂಡ ಮಾಡಬೇಡಿ

ವಿಡಿಯೋ ಸುದ್ದಿಗಳಿಗಾಗಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *