
ವರಮಹಾಲಕ್ಷ್ಮಿ ಹಬ್ಬದ ಸಡಗರದ ನಡುವೆ ಗೃಹಿಣಿಯೊಬ್ಬರು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಗಂಡು ಮಗುವಿನ ದುರಾಸೆಗೆ ಪತಿ ಕಿರುಕುಳ ನೀಡುತ್ತಿದ್ದ ಎಂಬ ಆರೋಪ ಕೇಳಿಬಂದಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ.<img><p><strong>ಬೆಂಗಳೂರು ಗ್ರಾಮಾಂತರ (ಆ.08): </strong>ವರಮಹಾಲಕ್ಷ್ಮಿ ಹಬ್ಬದ ಸಡಗರ ಮನೆಮಾಡಬೇಕಿದ್ದ ಮನೆಯಲ್ಲಿ ಸೂತಕದ ಛಾಯೆ ಆವರಿಸಿದೆ. ಹಬ್ಬ ಮಾಡಬೇಕಿದ್ದ ಗೃಹಿಣಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಇದು ಕೊಲೆಯೋ ಅಥವಾ ಆತ್ಮಹ*ತ್ಯೆಯೋ ಎಂಬ ಸಂಶಯಕ್ಕೆ ಕಾರಣವಾಗಿದೆ. ಗಂಡು ಮಗುವಿನ ದುರಾಸೆಗೆ ಪತಿ ಕಿರುಕುಳ ನೀಡಿ ಕೊಲೆ ಮಾಡಿದ್ದಾನೆ ಎಂದು ಮೃತ ಮಹಿಳೆಯ ಕುಟುಂಬಸ್ಥರು ಆರೋಪಿಸಿದ್ದು, ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p><img><p>ಮೃತೆ ರೇಣುಕಾ (32), ಭೀಮೇಶ್ವರ ಕಾಲೋನಿಯ ನಿವಾಸಿ. 17 ವರ್ಷಗಳ ಹಿಂದೆ ಶಿವನಂಜಪ್ಪ (40) ಎಂಬುವವರ ಜೊತೆ ಇವರ ವಿವಾಹವಾಗಿತ್ತು. ಈ ದಂಪತಿಗೆ ಮೂವರು ಹೆಣ್ಣು ಮಕ್ಕಳಿದ್ದಾರೆ. ಆದರೆ, ಗಂಡು ಮಗುವಿನ ಆಸೆಯಿಂದ ಶಿವನಂಜಪ್ಪ ರೇಣುಕಾ ಅವರಿಗೆ ನಿರಂತರವಾಗಿ ಕಿರುಕುಳ ನೀಡುತ್ತಿದ್ದರು ಎಂದು ತಿಳಿದುಬಂದಿದೆ.</p><img><p>ನಿನ್ನೆ ರಾತ್ರಿ (ವರಮಹಾಲಕ್ಷ್ಮಿ ಹಬ್ಬದ ಹಿಂದಿನ ದಿನ) ಇದೇ ವಿಚಾರಕ್ಕೆ ದಂಪತಿ ನಡುವೆ ತೀವ್ರ ಗಲಾಟೆ ನಡೆದಿದೆ. ಈ ವೇಳೆ ಶಿವನಂಜಪ್ಪ ರೇಣುಕಾ ಮೇಲೆ ಹಲ್ಲೆ ಮಾಡಿದ್ದಾನೆ ಎಂದು ಹೇಳಲಾಗುತ್ತಿದೆ. ಹಲ್ಲೆ ನಂತರ ರೇಣುಕಾ ಆತ್ಮಹ*ತ್ಯೆ ಮಾಡಿಕೊಂಡಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದ್ದು, ಆದರೆ ಗಂಡನೇ ಹೊಡೆದು ನೇಣು ಹಾಕಿ ಕೊಲೆ ಮಾಡಿದ್ದಾನೆ ಎಂದು ಮೃತ ಮಹಿಳೆಯ ಕುಟುಂಬದವರು ಗಂಭೀರ ಆರೋಪ ಮಾಡಿದ್ದಾರೆ.</p><img><p>ಈ ಘಟನೆ ಕುರಿತು ಮಾಹಿತಿ ಪಡೆದ ಪೊಲೀಸರು ತಕ್ಷಣ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ನೆಲಮಂಗಲ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ವರದಿ ಬಂದ ನಂತರವೇ ಸಾವಿಗೆ ನಿಖರ ಕಾರಣ ತಿಳಿಯಲಿದೆ. </p><p>ಘಟನೆ ಸಂಬಂಧ ಮಾದನಾಯಕನಹಳ್ಳಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ. ಮೃತ ರೇಣುಕಾ ಅವರ ಪತಿ ಶಿವನಂಜಪ್ಪನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.</p><img><p>ಗಂಡು ಮಗುವಿನ ಆಸೆಯಿಂದ ಸೃಷ್ಟಿಯಾದ ಈ ದುರಂತವು ಸಮಾಜದ ಕರಾಳ ಮುಖವನ್ನು ಮತ್ತೊಮ್ಮೆ ತೋರಿಸಿದೆ. ಹಬ್ಬದ ದಿನವೇ ಸಂಭವಿಸಿದ ಈ ಘಟನೆ ಇಡೀ ಪ್ರದೇಶದಲ್ಲಿ ದುಃಖ ಮತ್ತು ಆಕ್ರೋಶಕ್ಕೆ ಕಾರಣವಾಗಿದೆ.</p>
Source link
ವರಮಹಾಲಕ್ಷ್ಮೀ ಹಬ್ಬದ ಪೂಜೆ ಮಾಡುವ ಹೆಂಡತಿಗೆ ಗಂಡು ಮಗು ಬೇಕೆಂದು ಕೊಂದೇಬಿಟ್ಟ ಗಂಡ!