ವಿಜಯಪುರ, ಜೂನ್ 27: ಸಹಕಾರ ಸಚಿವ ಕೆಎನ್ ರಾಜಣ್ಣ (KN Rajanna) ದೊಡ್ಡೋರು, ಅವರು ಯಾವ ಅರ್ಥದಲ್ಲಿ ಕ್ರಾಂತಿಯ ಮಾತುಗಳ್ನಾಡಿದ್ದಾರೋ ಗೊತ್ತಿಲ್ಲ, ಹಾಗಾಗಿ ಮಾತಿನ ಅರ್ಥವೇನು ಅನ್ನೋದನ್ನು ಅವರನ್ನೇ ಕೇಳೋದು ಒಳಿತು ಎಂದು ಸಚಿವ ಎಂಬಿ ಪಾಟೀಲ್ ಹೇಳಿದರು. ಕಾಂಗ್ರೆಸ್ ಪಕ್ಷ ಸ್ವಾತಂತ್ರ್ಯಕ್ಕಾಗಿ ನಡೆದ ಕ್ರಾಂತಿಯಲ್ಲಿ ಮಾತ್ರ ಪಾಲ್ಗೊಂಡಿದೆ, ಹಾಗಾಗಿ ಆ ಕ್ರಾಂತಿ ಬಿಟ್ಟರೆ ವೇರೆ ಯಾವುದೇ ಕ್ರಾಂತಿಯ ಬಗ್ಗೆ ತನಗೆ ಗೊತ್ತಿಲ್ಲ. ಪಕ್ಷದಲ್ಲಿ, ನಾಯಕರಲ್ಲಿ ಏನಾದರೂ ಹೆಚ್ಚು ಕಡಿಮೆಯಾದರೆ ಅದನ್ನು ಬಗೆಹರಿಸಲು ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಇದ್ದಾರೆ ಹೈಕಮಾಂಡ್ ಇದೆ ಎಂದು ಪಾಟೀಲ್ ಹೇಳಿದರು.
ಇದನ್ನೂ ಓದಿ: ಬೆಂಗಳೂರು-ವಿಜಯಪುರ ರೈಲು ಪ್ರಯಾಣ 15ರಿಂದ 10 ಗಂಟೆಗೆ ಇಳಿಕೆ: ಎಂಬಿ ಪಾಟೀಲ್ ಮಹತ್ವದ ಚರ್ಚೆ
ವಿಡಿಯೋ ಸುದ್ದಿಗಳಿಗಾಗಿ ಕ್ಲಿಕ್ ಮಾಡಿ