
ಮಂತ್ರಾಲಯದ ರಾಯರ ಮಠದ ಗೋಶಾಲೆಯಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಅಗ್ನಿ ಅವಘಡ ಸಂಭವಿಸಿದೆ. ಮೇವಿನ ಬಣಿವೆಗಳು ಭಸ್ಮವಾಗಿದ್ದು, ಯಾವುದೇ ಜಾನುವಾರುಗಳಿಗೆ ಹಾನಿಯಾಗಿಲ್ಲ.
ರಾಯಚೂರು (ಆ.12): ಮಂತ್ರಾಲಯದ ಪ್ರಸಿದ್ಧ ರಾಯರ ಮಠದ ಗೋಶಾಲೆಯಲ್ಲಿ ಶಾರ್ಟ್ ಸರ್ಕ್ಯೂಟ್ನಿಂದಾಗಿ ಅಗ್ನಿ ಅವಘಡ ಸಂಭವಿಸಿದೆ. ಗೋಶಾಲೆಯಲ್ಲಿ ಸಂಗ್ರಹಿಸಿಡಲಾಗಿದ್ದ ಕೆಲವು ಮೇವಿನ ಬಣಿವೆಗಳು ಹೊತ್ತಿ ಉರಿದು ಭಸ್ಮವಾಗಿವೆ.
ನೂರಾರು ಹಸುಗಳಿರುವ ಈ ಗೋಶಾಲೆಯಲ್ಲಿ ಘಟನೆ ಸಂಭವಿಸಿದ್ದರಿಂದ ಸ್ಥಳೀಯರಲ್ಲಿ ಆತಂಕ ಮನೆಮಾಡಿತ್ತು. ಅದೃಷ್ಟವಶಾತ್, ಯಾವುದೇ ಗೋವುಗಳಿಗೆ ಪ್ರಾಣಹಾನಿಯಾಗಿಲ್ಲ. ಪ್ರಾಥಮಿಕ ಮಾಹಿತಿಯ ಪ್ರಕಾರ, ಗೋಶಾಲೆಯ ವಿದ್ಯುತ್ ವ್ಯವಸ್ಥೆಯಲ್ಲಿ ಉಂಟಾದ ಶಾರ್ಟ್ ಸರ್ಕ್ಯೂಟ್ನಿಂದ ಮೇವಿನ ಬಣಿವೆಗಳಿಗೆ ಬೆಂಕಿ ತಗುಲಿದೆ.
ಇದನ್ನೂ ಓದಿ: ಮಂತ್ರಾಲಯ ಶ್ರೀಮಠದಲ್ಲಿ ಮೊದಲ ಬಾರಿಗೆ ಪುಷ್ಕರಣಿಯಲ್ಲಿ ರಾಯರ ಅದ್ಧೂರಿ ತೆಪ್ಪೋತ್ಸವ
ಕ್ಷಣಮಾತ್ರದಲ್ಲಿ ಬೆಂಕಿಯ ಜ್ವಾಲೆಗಳು ಗೋಶಾಲೆಯ ಒಂದು ಭಾಗವನ್ನು ಆವರಿಸಿತು. ಗೋಶಾಲೆಯ ಸಿಬ್ಬಂದಿ ತಕ್ಷಣವೇ ಕಾರ್ಯಪ್ರವೃತ್ತರಾಗಿ, ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಇದನ್ನೂ ಓದಿ: ಮಂತ್ರಾಲಯ ರಾಯರ ಹುಂಡಿ ಎಣಿಕೆ: ಕೇವಲ 35 ದಿನಗಳಲ್ಲಿ ₹5.46 ಕೋಟಿ ಸಂಗ್ರಹ!