Headlines

Brahmagantu Serial: ಸೌಂದರ್ಯಳ ಖೇಲ್​ ಖತಮ್​? ಎದೆಗೆ ಪಿಸ್ತೂಲ್​ನಿಂದ ಗುರಿಯಿಟ್ಟ ದೀಪಾ!

Brahmagantu Serial: ಸೌಂದರ್ಯಳ ಖೇಲ್​ ಖತಮ್​? ಎದೆಗೆ ಪಿಸ್ತೂಲ್​ನಿಂದ ಗುರಿಯಿಟ್ಟ ದೀಪಾ!



Brahmagantu Serial: ಸೌಂದರ್ಯಳ ಖೇಲ್​ ಖತಮ್​? ಎದೆಗೆ ಪಿಸ್ತೂಲ್​ನಿಂದ ಗುರಿಯಿಟ್ಟ ದೀಪಾ!
<p>ಬ್ರಹ್ಮಗಂಟು ಸೀರಿಯಲ್​ ಇದೀಗ ರೋಚಕ ತಿರುವು ಪಡೆದುಕೊಂಡಿದೆ. ಸೌಂದರ್ಯಳ ಎದೆಗೆ ಪಿಸ್ತೂಲ್​ನಿಂದ ಗುರಿ ಇಟ್ಟಿದ್ದಾಳೆ ದೀಪಾ. ಮುಂದೇನು?</p><img><p>ಬ್ರಹ್ಮಗಂಟು ಸೀರಿಯಲ್​ ಇದೀಗ ರೋಚಕ ತಿರುವು ಪಡೆದುಕೊಂಡಿದೆ. ಅರ್ಚನಾ ಮತ್ತು ರಾಹುಲ್​ ಒಂದಾಗಬಾರದು ಎನ್ನುವ ಕಾರಣಕ್ಕೆ ರಾಹುಲ್​ನನ್ನು ರೌಡಿಗಳನ್ನು ಕಳುಹಿಸಿ ಕೊ*ಲೆಗೆ ಪ್ರಯತ್ನಿಸಿದ್ದಳು ಸೌಂದರ್ಯ. ಆದರೆ ಆತ ಬದುಕಿದ್ದಾನೆ. ಆಸ್ಪತ್ರೆಗೆ ದಾಖಲಾಗಿದ್ದಾನೆ. ರಾಹುಲ್​ ಮತ್ತು ಅರ್ಚನಾರನ್ನು ಒಂದು ಮಾಡಬೇಕು ಎನ್ನುವ ಕಾರಣಕ್ಕೆ ಚಿರುನೇ ಆತನನ್ನು ಮನೆಗೆ ಕರೆದಿದ್ದ. ಇದು ತಿಳಿಯುತ್ತಲೇ ಸೌಂದರ್ಯ ಹೀಗೆ ಮಾಡಿದ್ದಳು.</p><img><p>ಚಿರುವಿನ ಮನವಿ ಮೇರೆಗೆ ಬೈಕ್​ನಲ್ಲಿ ರಾಹುಲ್​ ಮನೆಗೆ ಬರುತ್ತಿರುವಾಗ ಹಿಂದಿನಿಂದ ರೌಡಿಗಳು ಗಾಡಿಯಲ್ಲಿ ಆತನಿಗೆ ಆ್ಯಕ್ಸಿಡೆಂಟ್​ ಮಾಡಿದ್ದಾರೆ. ಆದರೆ ಆತ ಆಸ್ಪತ್ರೆಯಲ್ಲಿ ಇದ್ದು, ಜೀವ ಉಳಿಸಿಕೊಂಡಿದ್ದಾನೆ. ಇದನ್ನು ಕೇಳಿ ಸೌಂದರ್ಯಳ ತಲೆ ಕೆಟ್ಟು ಹೋಗಿದೆ. ಆದ್ದರಿಂದ ರೌಡಿಗಳನ್ನು ಕರೆಸಿ ಅವರನ್ನು ಕೊಲ್ಲಲು ಮುಂದಾಗಿದ್ದಳು.</p><img><p>ಆಗ ದೀಪಾ ಅದನ್ನು ತಡೆದಿದ್ದಾಳೆ. ಪಿಸ್ತೂಲ್​ನಿಂದ ರೌಡಿಗಳನ್ನು ಕೊಲ್ಲಲು ಹೋದಾಗ, ಆ ಪಿಸ್ತೂಲ್​​ ಅನ್ನು ತಾನೇ ತೆಗೆದುಕೊಂಡ ದೀಪಾ, ಸೌಂದರ್ಯದ ಎದೆಗೆ ಗುರಿಯಿಟ್ಟಿದ್ದಾಳೆ. ಆಕೆ ಕೊಲ್ಲುವುದು ಅಸಾಧ್ಯ ಎಂದಿರೋ ಸೌಂದರ್ಯ ನೀನೇನು ನನ್ನನ್ನು ಕೊಲ್ತಿಯಾ ಎಂದು ಕೇಳಿದ್ದಾಳೆ. ಅದಕ್ಕೆ ದೀಪಾ ಹೌದು ಎಂದಾಗ ಆ ಕ್ಷಣದಲ್ಲಿ ಸೌಂದರ್ಯ ಎದೆ ಝಲ್ ಎಂದಿದೆ.</p><img><p>ಮುಂದೇನಾಗುತ್ತದೆ ಎನ್ನುವುದು ಸದ್ಯಕ್ಕಿರುವ ಕುತೂಹಲ. ದೀಪಾಳ ಕೈಯಲ್ಲಿ ಪಿಸ್ತೂಲ್​ ನೋಡಿ ಮನೆಯವರು ಅವಳ ಮೇಲೆ ಸಂದೇಹ ಪಟ್ಟುಕೊಳ್ತಾರಾ ಎನ್ನುವುದು ಕೂಡ ಸದ್ಯ ವೀಕ್ಷಕರಿಗೆ ಆತಂಕ ತರುತ್ತಿದೆ. ಆದರೂ ದೀಪಾಳ ಈ ಇನ್ನೊಂದು ಮುಖ ನೋಡಿ ಖುಷಿಯೂ ಆಗುತ್ತಿದೆ.</p><img><p>ಅತ್ತ ಅರ್ಚನಾ ಮತ್ತು ಬೇರೊಬ್ಬ ಹುಡುಗನ ಎಂಗೇಜ್​ಮೆಂಟ್​ ಆಗಿದೆ. ಅರ್ಚನಾ ಮನಸ್ಸಿಲ್ಲದೇ ಇದನ್ನು ಒಪ್ಪಿಕೊಂಡಿದ್ದಾಳೆ. ರಾಹುಲ್​ ವಿಷಯ ಅವಳಿಗೆ ಗೊತ್ತಾಗತ್ತಾ? ಈ ಮದುವೆ ಆಗ್ತಾಳಾ? ಸೌಂದರ್ಯಳ ಬಣ್ಣ ಬಯಲಾಗುತ್ತಾ ಎನ್ನುವುದು ಕಾದು ನೋಡಬೇಕಿದೆ.</p><img><p>ಆದರೆ ಇಷ್ಟು ಬೇಗ ಇವೆಲ್ಲಾ ತಿಳಿದು ಸೀರಿಯಲ್​ ಮುಗಿಯುವ ಹಾಗೆ ಕಾಣಿಸುವುದಿಲ್ಲ. ಈ ಕ್ಷಣದಲ್ಲಿ ದೀಪಾಳೇ ಆರೋಪಿಯಾದರೂ ಆಗಬಹುದು. ತನ್ನನ್ನು ಕೊಲ್ಲಲು ದೀಪಾ ಮುಂದಾಗಿದ್ದಾಳೆ ಎಂದು ಸೌಂದರ್ಯ ರಂಪಾಟ ಮಾಡುವ ಎಲ್ಲಾ ಸಾಧ್ಯತೆ ಇದೆ. ಇದೇ ಕಾರಣಕ್ಕೆ ಸದ್ಯ ಪಿಸ್ತೂಲ್​ ದೀಪಾಳ ಕೈಯಲ್ಲಿ ಇರುವುದು ವೀಕ್ಷಕರಿಗೆ ಆತಂಕ ತರಿಸುತ್ತಿದೆ.</p><img><p>ಬೇಗ ಅದನ್ನು ಸೌಂದರ್ಯಳ ಕೈಗೆ ಕೊಡು ಎನ್ನುತ್ತಿದ್ದಾರೆ ನೆಟ್ಟಿಗರು. ಅತ್ತ ರೌಡಿಗಳಾದರೂ ಇದ್ದರೆ, ಅವರಾದರೂ ವಿಷಯ ಹೇಳುತ್ತಿದ್ದರು. ಆದರೆ ಅವರು ಕೂಡ ಓಡಿ ಹೋದದ್ದು ಇನ್ನಷ್ಟು ಆತಂಕ ತರಿಸುತ್ತಿದೆ.</p>&nbsp;&nbsp;&nbsp;&nbsp;View this post on Instagram&nbsp;&nbsp;&nbsp;&nbsp;&nbsp;&nbsp;&nbsp;&nbsp;&nbsp;&nbsp;&nbsp;<p>A post shared by Zee Kannada (@zeekannada)</p><p></p>



Source link

Leave a Reply

Your email address will not be published. Required fields are marked *