ಕೊಲೆ ಕೇಸ್‌: ಸುಶೀಲ್ ಕುಮಾರ್‌ಗೆ ಸುಪ್ರೀಂ ಕೋರ್ಟ್ ಬಿಗ್ ಶಾಕ್, ಕುಸ್ತಿಪಟು ಮತ್ತೆ ಜೈಲುಪಾಲು!

ಕೊಲೆ ಕೇಸ್‌: ಸುಶೀಲ್ ಕುಮಾರ್‌ಗೆ ಸುಪ್ರೀಂ ಕೋರ್ಟ್ ಬಿಗ್ ಶಾಕ್, ಕುಸ್ತಿಪಟು ಮತ್ತೆ ಜೈಲುಪಾಲು!



ಕೊಲೆ ಕೇಸ್‌: ಸುಶೀಲ್ ಕುಮಾರ್‌ಗೆ ಸುಪ್ರೀಂ ಕೋರ್ಟ್ ಬಿಗ್ ಶಾಕ್, ಕುಸ್ತಿಪಟು ಮತ್ತೆ ಜೈಲುಪಾಲು!
<p>ನವದೆಹಲಿ: ಭಾರತದ ದಿಗ್ಗಜ ಕುಸ್ತಿಪಟು ಸುಶೀಲ್ ಕುಮಾರ್‌ಗೆ ಸುಪ್ರೀಂ ಕೋರ್ಟ್ ಶಾಕ್ ನೀಡಿದೆ. ಕೊಲೆ ಪ್ರಕರಣದಲ್ಲಿ ಹೈಕೋರ್ಟ್‌ನಿಂದ ಜಾಮೀನು ಪಡೆದಿದ್ದ ಸುಶೀಲ್ ಕುಮಾರ್‌ಗೆ ಸುಪ್ರೀಂ ಕೋರ್ಟ್ ಬೇಲ್ ರದ್ದು ಮಾಡಿ ಶಾಕ್ ಕೊಟ್ಟಿದೆ.</p><p>&nbsp;</p><img><p>ಕುಸ್ತಿಪಟು ಸಾಗರ್‌ಧನಕ‌ ಕೊಲೆ ಪ್ರಕರಣದಲ್ಲಿ ಒಲಿಂಪಿಕ್ಸ್ ಕುಸ್ತಿ ಪದಕ ವಿಜೇತ ಸುಶೀಲ್ ಕುಮಾರ್‌ಗೆ ದೆಹಲಿ ಹೈಕೋ‌ರ್ಟ್‌ ನೀಡಿದ್ದ ಜಾಮೀನನ್ನು ಸುಪ್ರೀಂ ಕೋರ್ಟ್ ರದ್ದು ಮಾಡಿದೆ.</p><img><p>ಇದೀಗ ಸೆಲಿಬ್ರಿಟಿ ಕುಸ್ತಿಪಟು ಇನ್ನೊಂದು ವಾರದೊಳಗಾಗಿ ಪೊಲೀಸರಿಗೆ ಶರಣಾಗುವಂತೆ ಸರ್ವೋಚ್ಚ ನ್ಯಾಯಾಲಯ ಆದೇಶಿಸಿದೆ.</p><img><p>2021ರ ಮೇ ತಿಂಗಳಲ್ಲಿ ದೆಹಲಿಯ ಛತ್ರಸಾಲ್ ಕ್ರೀಡಾಂಗಣದಲ್ಲಿ ಮಾಜಿ ಜೂನಿಯರ್ ರಾಷ್ಟ್ರೀಯ ಕುಸ್ತಿ ಚಾಂಪಿಯನ್ ಸಾಗರ್ ಧನಕ‌ರ್ ಹತ್ಯೆ ನಡೆದಿತ್ತು. ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ಈ ಕೊಲೆ ನಡೆದಿತ್ತು.</p><img><p>ಆ ಪ್ರಕರಣದಲ್ಲಿ ಸುಶೀಲ್ ಕುಮಾರ್‌ ಬಂಧನವಾಗಿತ್ತು. ಅಂದಿನಿಂದ ಜೈಲಿನಲ್ಲಿದ್ದ ಸುಶೀಲ್‌ಗೆ ಕಳೆದ ಮಾ.4ರಂದು ದೆಹಲಿ ಹೈಕೋರ್ಟ್ ಜಾಮೀನು ನೀಡಿತ್ತು.</p><img><p>ಇದನ್ನು ಪ್ರಶ್ನಿಸಿ ಸಾಗರ್‌ ತಂದೆ ಮೇಲ್ಮನವಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಜಾಮೀನು ರದ್ದುಗೊಳಿಸಿ, ಶರಣಾಗುವಂತೆ ತಿಳಿಸಿದೆ.</p><img><p>ಭಾರತದ ದಿಗ್ಗಜ ಕುಸ್ತಿಪಟುವಾಗಿ ಗುರುತಿಸಿಕೊಂಡಿದ್ದ ಸುಶೀಲ್ ಕುಮಾರ್ 2012ರ ಒಲಿಂಪಿಕ್ಸ್‌ನಲ್ಲಿ ಬೆಳ್ಳಿ, 2008ರ ಒಲಿಂಪಿಕ್ಸ್‌ನಲ್ಲಿ ಕಂಚು ಗೆದ್ದಿದ್ದಾರೆ.</p>



Source link

Leave a Reply

Your email address will not be published. Required fields are marked *