bengaluru wilson garden explosion ಬೆಂಗಳೂರು: ಚಿನ್ನಯ್ಯನಪಾಳ್ಯ ಭೀಕರ ಸ್ಫೋಟ, ಮೃತ ಬಾಲಕನ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ | Bengaluru Wilson Garden Blast Cm Siddaramaiah Announces Compensation Gow

bengaluru wilson garden explosion ಬೆಂಗಳೂರು: ಚಿನ್ನಯ್ಯನಪಾಳ್ಯ ಭೀಕರ ಸ್ಫೋಟ, ಮೃತ ಬಾಲಕನ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ | Bengaluru Wilson Garden Blast Cm Siddaramaiah Announces Compensation Gow



bengaluru wilson garden explosion ಬೆಂಗಳೂರು: ಚಿನ್ನಯ್ಯನಪಾಳ್ಯ ಭೀಕರ ಸ್ಫೋಟ, ಮೃತ ಬಾಲಕನ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ | Bengaluru Wilson Garden Blast Cm Siddaramaiah Announces Compensation Gow

ಚಿನ್ನಯ್ಯನಪಾಳ್ಯದಲ್ಲಿ ಸಂಭವಿಸಿದ ಸ್ಫೋಟದಲ್ಲಿ 10 ವರ್ಷದ ಬಾಲಕ ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ. ಮುಖ್ಯಮಂತ್ರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಹಾರ ಘೋಷಿಸಿದ್ದಾರೆ. ಸ್ಫೋಟದ ಕಾರಣ ಇನ್ನೂ ತನಿಖೆಯ ಹಂತದಲ್ಲಿದೆ.

ಬೆಂಗಳೂರು: ವಿಲ್ಸನ್ ಗಾರ್ಡನ್ ಸಮೀಪದ ಚಿನ್ನಯ್ಯನಪಾಳ್ಯ ಪ್ರದೇಶದಲ್ಲಿ ಸಂಭವಿಸಿದ ಭೀಕರ ಸ್ಫೋಟದಲ್ಲಿ 10 ವರ್ಷದ ಮುಭಾರಕ್ ದುರ್ಮರಣ ಹೊಂದಿದ್ದು, ಹಲವು ಮಂದಿ ಗಾಯಗೊಂಡಿದ್ದಾರೆ. ಘಟನಾ ಸ್ಥಳಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೃತ ಮುಭಾರಕ್ ಕುಟುಂಬಕ್ಕೆ ₹5 ಲಕ್ಷ ಪರಿಹಾರವನ್ನು ಘೋಷಿಸಿದರು. ಸರ್ಕಾರವು ಗಾಯಾಳುಗಳ ಸಂಪೂರ್ಣ ಚಿಕಿತ್ಸಾ ವೆಚ್ಚವನ್ನು ಭರಿಸುವುದಾಗಿ, ಸ್ಫೋಟದಲ್ಲಿ ಸಂಪೂರ್ಣ ಹಾನಿಗೊಳಗಾದ ಮನೆಗಳನ್ನು ಮರುನಿರ್ಮಿಸಿ ಕೊಡಲಾಗುವುದಾಗಿ ಹಾಗೂ ಅರ್ಧ ಅಥವಾ ಭಾಗಶಃ ಹಾನಿಗೊಳಗಾದ ಮನೆಗಳಿಗೆ ಅಗತ್ಯ ರಿಪೇರಿ ಕಾರ್ಯಗಳನ್ನು ಸರ್ಕಾರದಿಂದಲೇ ಮಾಡಿಸಿಕೊಡಲಾಗುವುದಾಗಿ ಸಿಎಂ ತಿಳಿಸಿದರು.

“ಈಗ ಮೇಲ್ನೋಟಕ್ಕೆ ಸಿಲಿಂಡರ್ ಬ್ಲಾಸ್ಟ್ ಆಗಿರಬಹುದು ಎನ್ನುವ ಶಂಕೆ ಇದೆ. ಆದರೆ, ತಜ್ಞರ ಪರಿಶೀಲನೆ ಬಳಿಕ ಘಟನೆಯ ನಿಖರ ಕಾರಣ ಬಹಿರಂಗವಾಗುತ್ತದೆ,” ಎಂದು ಸಿಎಂ ಹೇಳಿದರು.

ಮಕ್ಕಳ ಆಸ್ಪತ್ರೆಯ ವೈದ್ಯರಿಂದ ಮಾಹಿತಿ

ಏಷ್ಯಾನೆಟ್ ಸುವರ್ಣನ್ಯೂಸ್‌ ಗೆ ನೀಡಿದ ಮಾಹಿತಿಯಲ್ಲಿ ಇಂದಿರಾಗಾಂಧಿ ಮಕ್ಕಳ ಆಸ್ಪತ್ರೆಯ ನಿರ್ದೇಶಕ ಸಂಜಯ್ ಅವರು ಬೆಳಿಗ್ಗೆ 8.30ರ ಸುಮಾರಿಗೆ ಮಕ್ಕಳನ್ನು ಆಸ್ಪತ್ರೆಗೆ ತರಲಾಯಿತು. ಬರುವಾಗಲೇ ಮುಭಾರಕ್ (10) ಸಂಪೂರ್ಣ ಶಾಕ್‌ನಲ್ಲಿದ್ದ, ಮಾತಾಡುತ್ತಿರಲಿಲ್ಲ. ಗೋಡೆ ಬಿದ್ದು ತೀವ್ರ ಗಾಯಗೊಂಡಿದ್ದ ಅವನಿಗೆ ಭಾರೀ ರಕ್ತಸ್ರಾವವಾಗುತ್ತಿತ್ತು. ತಕ್ಷಣವೇ ತುರ್ತು ಚಿಕಿತ್ಸೆಯನ್ನು ನೀಡಿದರೂ, ಜೀವ ಉಳಿಸಲಾಗಲಿಲ್ಲ.

ಮಗುವಾದ ಖಯಾಲಾ (8)ಗೆ ಮುಖ, ಬಲಗೈ ಹಾಗೂ ಎದೆ ಭಾಗದಲ್ಲಿ ಸುಟ್ಟ ಗಾಯಗಳಾಗಿದ್ದರಿಂದ ಆರ್ಥೊಪೆಡಿಕ್ ಹಾಗೂ ರೇಡಿಯೋಲಜಿ ವೈದ್ಯರ ತಂಡ ಚಿಕಿತ್ಸೆ ನೀಡಿದೆ. ಹೆಚ್ಚಿನ ಚಿಕಿತ್ಸೆಗಾಗಿ ಅವಳನ್ನು ವಿಕ್ಟೋರಿಯಾ ಆಸ್ಪತ್ರೆಯ ‘ಬರ್ನ್ ವಾರ್ಡ್’ ಗೆ ಸ್ಥಳಾಂತರಿಸಲಾಗಿದೆ. ಝೋಹಾ ಫಾತಿಮಾ (8) ಇಂದಿರಾಗಾಂಧಿ ಮಕ್ಕಳ ಆಸ್ಪತ್ರೆಯಲ್ಲೇ ಚಿಕಿತ್ಸೆ ಪಡೆಯುತ್ತಿದ್ದು, ಇನ್ನೂ 3-4 ದಿನ ಚಿಕಿತ್ಸೆ ಮುಂದುವರಿಯುವ ಸಾಧ್ಯತೆ ಇದೆ. ಮಗುವಿನ ಆರೋಗ್ಯ ಸ್ಥಿತಿಯನ್ನು ಅವಲೋಕಿಸಿ ಬಳಿಕ ಡಿಸ್ಚಾರ್ಜ್ ಮಾಡಲಾಗುತ್ತದೆ.

ವಿವಿಧ ಆಸ್ಪತ್ರೆಗಳಲ್ಲಿ ಗಾಯಾಳುಗಳ ಚಿಕಿತ್ಸೆ

  • ಇಂದಿರಾಗಾಂಧಿ ಮಕ್ಕಳ ಆಸ್ಪತ್ರೆ: ಝೋಹಾ ಫಾತಿಮಾ (8) ಚಿಕಿತ್ಸೆ ಪಡೆಯುತ್ತಿದ್ದಾರೆ.
  • ವಿಕ್ಟೋರಿಯಾ ಆಸ್ಪತ್ರೆ: ಕಸ್ತೂರಮ್ಮ (35) ಹಾಗೂ ಖಯಾಲಾ (8) ಚಿಕಿತ್ಸೆ ಪಡೆಯುತ್ತಿದ್ದಾರೆ.
  • ಸಂಜಯ್ ಗಾಂಧಿ ಆಸ್ಪತ್ರೆ: ಸರಸಮ್ಮ (65) ಗಂಭೀರ ಗಾಯಗಳಿಂದ ಚಿಕಿತ್ಸೆ ಪಡೆಯುತ್ತಿದ್ದಾರೆ. ಜೊತೆಗೆ ಪ್ರಮಿಳಾ (38) ಮತ್ತು ರಾಜೇಶ್ (42) ಸಣ್ಣಪುಟ್ಟ ಗಾಯಗಳಿಂದ ಚಿಕಿತ್ಸೆ ಪಡೆದು ‘ಔಟ್ ಆಫ್ ಡೇಂಜರ್’ ಸ್ಥಿತಿಯಲ್ಲಿದ್ದಾರೆ.
  • ಅಗಡಿ ಆಸ್ಪತ್ರೆ: ಸುಬ್ರಮಣಿ (62) ಚಿಕಿತ್ಸೆ ಪಡೆಯುತ್ತಿದ್ದಾರೆ.
  • ನಿಮ್ಹಾನ್ಸ್: ಶೇಖ್ ನಜೀದ್ ವುಲ್ಲಾ ಚಿಕಿತ್ಸೆ ಪಡೆಯುತ್ತಿದ್ದಾರೆ.

ಘಟನೆಯ ಕುರಿತು ತನಿಖೆ ಮುಂದುವರಿಕೆ

ಸ್ಫೋಟಕ್ಕೆ ನಿಖರ ಕಾರಣ ಪತ್ತೆಹಚ್ಚಲು ಪೊಲೀಸರು ಮತ್ತು ತಾಂತ್ರಿಕ ತಂಡಗಳು ಸ್ಥಳ ಪರಿಶೀಲನೆ ನಡೆಸುತ್ತಿದ್ದು, ಪ್ರಾಥಮಿಕವಾಗಿ ಇದು ಗ್ಯಾಸ್ ಸಿಲಿಂಡರ್ ಸ್ಫೋಟದಿಂದ ಸಂಭವಿಸಿರಬಹುದು ಎಂದು ಶಂಕಿಸಲಾಗಿದೆ.



Source link

Leave a Reply

Your email address will not be published. Required fields are marked *