Karnataka Voter Fraud Row: ಮತಗಳ್ಳತನ ತನಿಖೆ ಮೊದಲು ಕನಕಪುರದಿಂದ ಆಗಲಿ; ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಜೆಡಿಎಸ್ ಮುಖಂಡ! | Karnataka Voter Fraud Row Jds Leader Allegations Against Congress Kanakapur

Karnataka Voter Fraud Row: ಮತಗಳ್ಳತನ ತನಿಖೆ ಮೊದಲು ಕನಕಪುರದಿಂದ ಆಗಲಿ; ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಜೆಡಿಎಸ್ ಮುಖಂಡ! | Karnataka Voter Fraud Row Jds Leader Allegations Against Congress Kanakapur



Karnataka Voter Fraud Row: ಮತಗಳ್ಳತನ ತನಿಖೆ ಮೊದಲು ಕನಕಪುರದಿಂದ ಆಗಲಿ; ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಜೆಡಿಎಸ್ ಮುಖಂಡ! | Karnataka Voter Fraud Row Jds Leader Allegations Against Congress Kanakapur

ಮಾಜಿ ಶಾಸಕ ಮಾಗಡಿ ಯ.ಎ.ಮಂಜುನಾಥ್‌ ಕನಕಪುರದಲ್ಲಿ ಮತ ಕಳ್ಳತನ ತನಿಖೆಗೆ ಆಗ್ರಹಿಸಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಕಳ್ಳ ಮತಗಳಿಂದ ಗೆಲುವು ಸಾಧಿಸಲಾಗಿದೆ ಎಂದು ಆರೋಪಿಸಿದ ಅವರು, ಕ್ಷೇತ್ರದಲ್ಲಿ ಪ್ರಾಮಾಣಿಕ ಚುನಾವಣೆ ನಡೆದಿದ್ದರೆ ತಾನು ಮತ್ತು ನಿಖಿಲ್ ಕುಮಾರಸ್ವಾಮಿ ಸೋಲುತ್ತಿರಲಿಲ್ಲ ಎಂದರು.

ಕನಕಪುರ (ಆ.15): ಮತ ಕಳ್ಳತನ ತನಿಖೆ ಕನಕಪುರದಿಂದ ಮೊದಲು ಆಗಲಿ ಎಂದು ಮಾಜಿ ಶಾಸಕ ಹಾಗೂ ಜೆಡಿಎಸ್ ಜಿಲ್ಲಾಧ್ಯಕ್ಷ ಮಾಗಡಿ ಯ.ಎ.ಮಂಜುನಾಥ್‌ ತಿಳಿಸಿದರು.

ತಾಲೂಕಿನ ಕಬ್ಬಾಳು ಗ್ರಾಮದಲ್ಲಿ ಏರ್ಪಡಿಸಿದ್ದ ಜೆಡಿಎಸ್‌ ಪಕ್ಷದ ಡಿಜಿಟಲ್ ಸದಸ್ಯತ್ವ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ರಾಜರಾಜೇಶ್ವರಿ ನಗರ, ಬೆಂಗಳೂರು ದಕ್ಷಿಣ ಇರಬಹುದು ಆನೇಕಲ್ ತಾಲೂಕು ವಿಧಾನಸಭಾ ಕ್ಷೇತ್ರದಲ್ಲಿ ಕನಕಪುರ ಕ್ಷೇತ್ರ ಮತಗಳು ಸುಮಾರು 40ರಿಂದ 50 ಸಾವಿರ ಇವೆ. ಮತದಾನಕ್ಕೆ ಮೂರು ದಿನಗಳ ಕಾಲ ಬಸ್ಸುಗಳನ್ನ ಮಾಡಿ ಕೊಡುತ್ತೀರಿ, ಅಲ್ಲೂ ಮತದಾನ ಮಾಡುತ್ತಾರೆ, ಇಲ್ಲೂ ಮತದಾನ ಮಾಡುತ್ತಾರೆ, ಇದು ನಮಗೆ ಗೊತ್ತಿಲ್ಲದೇ ಇರೋದಾ ತಮಿಳುನಾಡಿನ ಗಡಿಭಾಗದಲ್ಲಿ ಎರಡರಿಂದ ಮೂರು ಗ್ರಾಪಂಗಳಲ್ಲಿ ಸುಮಾರು ಮೂರ್ನಾಲ್ಕು ಸಾವಿರ ಮತದಾರರನ್ನು ಹೆಚ್ಚು ಮಾಡಲಾಗಿದೆ. ಚುನಾವಣೆ ಸಮಯದಲ್ಲಿ ಅವರೆಲ್ಲರೂ ಮತದಾನ ಮಾಡಿ ಹೋಗುತ್ತಾರೆ. ಇದು ಯಾರಿಗೂ ಗೊತ್ತಿಲ್ಲವೇ? ಇಷ್ಟೆಲ್ಲಾ ಪಿತೂರಿ ಮಾಡಿದರೂ ಕಳೆದ ಲೋಕಸಭಾ ಚುನಾವಣೆಯಲ್ಲಿ ಏನಾಯಿತು ಎಂದು ಕ್ಷೇತ್ರದ ಜನಕ್ಕೆ ಗೊತ್ತಿಲ್ಲವೇ? ಕಳ್ಳ ಮತಗಳಿಂದ ನೀವು ಗೆದ್ದು, ಈ ಜಿಲ್ಲೆಯಲ್ಲಿ ರಾತ್ರೋರಾತ್ರಿ ಕೂಪನ್ ಕೊಟ್ಟು ಮೋಸ ಮಾಡಿ ಗೆದ್ದಿದ್ದೀರಿ, ನೀವು ಮಾಡಿದ ಮೋಸ ಲೋಕಸಭಾ ಚುನಾವಣೆಯಲ್ಲಿ ನಿಮಗೆ ತಿರುಗುಬಾಣವಾಗಿದ್ದು ಚುನಾವಣಾ ಆಯೋಗ ಮೊದಲು ಕನಕಪುರ ಕ್ಷೇತ್ರದಲ್ಲಿ ತನಿಖೆ ಮಾಡಲಿ ಎಂದು ಒತ್ತಾಯಿಸಿದರು.

ಪ್ರಾಮಾಣಿಕವಾಗಿ ಜಿಲ್ಲೆಯಲ್ಲಿ ಚುನಾವಣೆ ನಡೆದಿದ್ದರೆ, ನಾನು ಮತ್ತು ನಿಖಿಲ್ ಕುಮಾರಸ್ವಾಮಿ ಸೋಲುತ್ತಿರಲಿಲ್ಲ ನಮ್ಮ ಹತ್ತಿರ ಹಣ ಇದ್ದು ನಾವು ಆಡಿದ್ದೇ ಆಟ ಎಂದು ತಿಳಿದುಕೊಂಡು ಇಂದು ನಮ್ಮ ಕಾರ್ಯಕರ್ತರು ಹಾಗೂ ಮುಖಂಡರ ಮೇಲೆ ದೂರುಗಳ ಮೇಲೆ ದೂರುಗಳನ್ನು ಹಾಕಿಸಿ ದಿನನಿತ್ಯ ಕಿರುಕುಳ ನೀಡುತ್ತಿದ್ದು, ಇದಕ್ಕೆಲ್ಲಾ ಮುಂದಿನ ದಿನಗಳಲ್ಲಿ ಜನರೇ ತಕ್ಕ ಉತ್ತರ ನೀಡಲಿದ್ದಾರೆ ಎಂದರು.

ಸಾತನೂರು ಹೋಬಳಿಯ 7 ಗ್ರಾಪಂ ವ್ಯಾಪ್ತಿ ಗ್ರಾಮಗಳಲ್ಲಿ ಜೆಡಿಎಸ್ ಮುಖಂಡರು, ಕಾರ್ಯಕರ್ತರು ಸೇರಿ ಪ್ರತಿ ಬೂತ್‌ನಲ್ಲಿಯೂ ಕನಿಷ್ಠ 50 ಮತದಾರನ್ನು ಮೊಬೈಲ್ ಆ್ಯಪ್ ಮೂಲಕ ಸದಸ್ಯತ್ವ ನೋಂದಣಿ ಮಾಡಿಸಬೇಕು. ಆಫ್‌ಲೈನ್ ಅರ್ಜಿಗಳನ್ನು ಭರ್ತಿಮಾಡಿ ಸದಸ್ಯತ್ವ ಪಡೆದವರಿಂದ 10 ರು. ಪಡೆದು ನೋಂದಣಿ ಮಾಡಿಸಬೇಕು. ಕನಕಪುರ ತಾಲೂಕಿನಲ್ಲಿ ಇದು ಕಷ್ಟದ ಕೆಲಸವಾದರೂ ಮನಸು ಮಾಡಿದರೆ ಎಲ್ಲವೂ ಸಾಧ್ಯ ಎಂದರು.

ತಾಲೂಕು ಜೆಡಿಎಸ್ ಅಧ್ಯಕ್ಷ ಬಿ.ನಾಗರಾಜು ಮಾತನಾಡಿ, ಈ ಸರ್ಕಾರದಲ್ಲಿ ಕಂಟ್ರಾಕ್ಟರ್, ಬಿಲ್ಡರ್, ಡೆವಲಪರ್, ಆಟೋ ಚಾಲಕ, ಕಾರು ಚಾಲಕ, ಸರ್ಕಾರಿ ಅಧಿಕಾರಿಗಳು ನೌಕರರೂ ನೆಮ್ಮದಿಯಾಗಿಲ್ಲ. ಗೋಮಾಳ ಜಮೀನನ್ನು ಯಾರದೋ ಹೆಸರಿಗೆ ಬರೆಸಿ, ಯಾರಿಗೋ ನೋಂದಣಿ ಮಾಡಿಸಿ ಹೋಗುತ್ತಾರೆ. ಇದು ಪ್ರತಿನಿತ್ಯ ನಡೆಯುತ್ತಿದೆ. ಕುಮಾರಸ್ವಾಮಿ ಸರ್ಕಾರದಲ್ಲಿ ರೈತರಿಗೆ ಒಂದು ಟಿಸಿ ಹಾಕಬೇಕಾದರೆ 30ರಿಂದ 40 ಸಾವಿರ ರುಪಾಯಿಯಲ್ಲಿ ಟಿಸಿ ಹಾಕಿಸುತ್ತಿದ್ದರು. ಇಂದು ಒಂದು ಟಿಸಿ ಹಾಕಿಸಬೇಕೆಂದರೆ 4ರಿಂದ 5 ಲಕ್ಷ ಹಣವನ್ನು ರೈತ ಕೊಡಬೇಕಾಗಿದೆ. ತನ್ನ ತೋಟದಲ್ಲಿ ಮನೆ ಕಟ್ಟಲು ರೈತನಿಗೆ ಬಿಡುತ್ತಿಲ್ಲ. ರೈತರು, ಬಡ ಕುಟುಂಬಗಳು ಜೀವನ ಮಾಡಲು ಸಾಧ್ಯವಾಗುತ್ತಿಲ್ಲ. ಇದು ರಾಜ್ಯ ಕಾಂಗ್ರೆಸ್ ಸರ್ಕಾರದ ದುರಾಡಳಿತಕ್ಕೆ ಸಾಕ್ಷಿ ಎಂದು ಆಕ್ರೋಶ ವ್ಯಕ್ತಪಡಿಸಿದರು.

ರಾಜ್ಯ ಯುವ ಜನತಾದಳ ಉಪಾಧ್ಯಕ್ಷ ಚಿನ್ನಸ್ವಾಮಿ, ಹಿರಿಯ ಮುಖಂಡರಾದ ಸಣ್ಣಪ್ಪ, ಸಿದ್ದಮರಿಗೌಡ, ಕಬ್ಬಾಳೆಗೌಡ, ನಗರಸಭಾ ಸದಸ್ಯರಾದ ಸ್ಟುಡಿಯೋ ಚಂದ್ರು, ಸುರೇಶ್, ದಿಶಾ ಸಮಿತಿ ಸದಸ್ಯರಾದ ಗೇರಹಳ್ಳಿ ರಾಜೇಶ್, ಶೋಭಾ, ತಾಪಂ ಮಾಜಿ ಸದಸ್ಯ ಧನಂಜಯ, ಗ್ರಾಮಾಂತರ ಜೆಡಿಎಸ್ ಮಹಿಳಾಧ್ಯಕ್ಷೆ ಪವಿತ್ರ, ರಮ್ಯಾ, ತೊಪ್ಪಗನಹಳ್ಳಿರಾಜ್ ಗೋಪಾಲ್, ರಮೇಶ್, ಸುರೇಶ್ ಶಂಭುಲಿಂಗಸ್ವಾಮಿ, ಪಂಚಲಿಗೇಗೌಡ, ಶಿವಸ್ವಾಮಿ ಇತರರು ಪಾಲ್ಗೊಂಡಿದ್ದರು.



Source link

Leave a Reply

Your email address will not be published. Required fields are marked *