Headlines

Naa Ninna Bidalaare ದುರ್ಗಾಗೆ ಇದೇನಾಯ್ತು? ರಕ್ತಸಿಕ್ತ ನಟಿ ರಿಷಿಕಾ ನೋಡಿ ಫ್ಯಾನ್ಸ್​ ಶಾಕ್​…

Naa Ninna Bidalaare ದುರ್ಗಾಗೆ ಇದೇನಾಯ್ತು? ರಕ್ತಸಿಕ್ತ ನಟಿ ರಿಷಿಕಾ ನೋಡಿ ಫ್ಯಾನ್ಸ್​ ಶಾಕ್​…



Naa Ninna Bidalaare ದುರ್ಗಾಗೆ ಇದೇನಾಯ್ತು? ರಕ್ತಸಿಕ್ತ ನಟಿ ರಿಷಿಕಾ ನೋಡಿ ಫ್ಯಾನ್ಸ್​ ಶಾಕ್​…
<p>ನಾ ನಿನ್ನ ಬಿಡಲಾರೆ ಸೀರಿಯಲ್​ ದುರ್ಗಾಗೆ ಇದೇನಾಯ್ತು? ಆಸ್ಪತ್ರೆ ವಿಡಿಯೋ ಶೇರ್​ ಮಾಡಿ ಶಾಕ್​ ಕೊಟ್ಟ ನಟಿ, ನಿಜಕ್ಕೂ ಆಗಿದ್ದೇನು, ಇಲ್ಲಿದೆ ಡಿಟೇಲ್ಸ್​….</p><p>&nbsp;</p><img><p>ಎಡವಟ್ಟು ದುರ್ಗಾ ಎಂದರೆ, ಸೀರಿಯಲ್​ ಪ್ರೇಮಿಗಳಿಗೆ ಮೊದಲು ನೆನಪಾಗೋದು ನಾನಿನ್ನ ಬಿಡಲಾರೆಯ ದುರ್ಗಾ. ಹೌದು. ಈಕೆ ಮಾಡೊದೆಲ್ಲಾ ಎಡವಟ್ಟೇ. ಆದರೂ ಸೌಮ್ಯ ಸ್ವಭಾವ ಇನ್ನೂ ಚಿಕ್ಕಮಕ್ಕಳ ಮುಗ್ಧತೆ ಇರುವ ಯುವತಿ ದುರ್ಗಾ. ಆತ್ಮದ ಜೊತೆ ಮಾತನಾಡುವ ಶಕ್ತಿ ಇರುವ ಏಕೈಕ ನಟಿ ಈಕೆ!</p><img><p>ಅಂದಹಾಗೆ, ಈಕೆ ನಿಜ ಜೀವನದಲ್ಲಿ ಆತ್ಮಗಳ ಜೊತೆ ಮಾತನಾಡಲ್ಲ, ಬದಲಿಗೆ ನಾನಿನ್ನ ಬಿಡಲಾರೆ ಸೀರಿಯಲ್​ನಲ್ಲಿ ಸತ್ತುಹೋಗಿರೋ ಅಂಬಿಕಾ ಇವಳಿಗೆ ಕಾಣಿಸುತ್ತಿದ್ದಾಳೆ. ಆಕೆ ಸತ್ತು ಹೋಗಿದ್ದಾಳೆ ಎನ್ನುವುದು ದುರ್ಗಾಗೆ ಗೊತ್ತಿಲ್ಲ. ಅಷ್ಟಕ್ಕೂ ಅವಳು ಯಾರು ಎನ್ನೋದೇ ಗೊತ್ತಿಲ್ಲ. ಆದರೂ ಇಬ್ಬರೂ ಫ್ರೆಂಡ್ಸ್​ ಆಗಿದ್ದಾರೆ. ಅಂಬಿಕಾಗೋ ದುರ್ಗಾ ಮೇಲೆ ಇನ್ನಿಲ್ಲದ ಪ್ರೀತಿ. ತನ್ನ ಗಂಡನನ್ನೇ ದುರ್ಗಾಗೆ ಮದ್ವೆ ಮಾಡಿಸೋ ಪ್ಲ್ಯಾನ್​ ಈ ಅಂಬಿಕಾ ಎನ್ನೋ ಆತ್ಮದ್ದು. ಇದು ಕ್ಯೂಟ್​ ಆತ್ಮ ಎಂದೇ ಫೇಮಸ್ಸು.</p><img><p>ಇದೀಗ ನಟಿ ಸೋಷಿಯಲ್​ ಮೀಡಿಯಾದಲ್ಲಿ ಆಸ್ಪತ್ರೆಗೆ ಅಡ್ಮಿಟ್​ ಆಗಿರೋ ಪೋಸ್ಟ್​ ಒಂದನ್ನು ಶೇರ್​ ಮಾಡಿದ್ದಾರೆ. ಅದರಲ್ಲಿ ಅವರು ರ*ಕ್ತಸಿಕ್ತ ಆಗಿರೋದನ್ನು ನೋಡಬಹುದು. ಇದನ್ನು ನೋಡಿ ಫ್ಯಾನ್ಸ್​ ಅರೆಕ್ಷಣ ಶಾಕ್​ಗೆ ಒಳಗಾಗುವುದಂತೂ ಗ್ಯಾರೆಂಟಿ.</p><img><p>ಆದರೆ, ನಟಿ ನಗುಮೊಗದಿಂದಲೇ ಇದ್ದಾರೆ. ಅದನ್ನು ಕ್ಲಿಕ್​ ಮಾಡಿದರೆ ತಿಳಿಯುತ್ತದೆ, ಇದು ಸೀರಿಯಲ್​​ ಶೂಟಿಂಗ್​ ಎನ್ನುವುದು. ನಾ ನಿನ್ನ ಬಿಡಲಾರೆ ಸೀರಿಯಲ್​ನಲ್ಲಿ ದುರ್ಗಾಗೆ ಅಪಘಾತವಾಗಿದ್ದ ಸಂದರ್ಭದಲ್ಲಿ ನಡೆದ ಶೂಟಿಂಗ್​ ಇದು. ಅದರ ಮೇಕಿಂಗ್​ ವಿಡಿಯೋ ಅನ್ನು ನಟಿ ಶೇರ್​ ಮಾಡಿಕೊಂಡಿದ್ದಾರೆ.</p><img><p>ಇನ್ನು ದುರ್ಗಾ ಅರ್ಥಾತ್​ ರಿಷಿಕಾ ಕುರಿತು ಹೇಳುವುದಾದರೆ, ರಿಷಿಕಾಗೆ ನಾ ನಿನ್ನ ಬಿಡಲಾರೆ ನಾಲ್ಕನೇ ಧಾರಾವಾಹಿ. ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ‘ಕನ್ಯಾಕುಮಾರಿ’ ಧಾರಾವಾಹಿಯಲ್ಲಿ ನಾಯಕನ ತಂಗಿ ಐಶ್ವರ್ಯಾ ಆಗಿ ಕಿರುತೆರೆಗೆ ಎಂಟ್ರಿ ಕೊಟ್ಟರು. ಮೊದಲ ಸೀರಿಯಲ್​ನಲ್ಲಿ ಸೈಡ್​ ರೋಲ್​ನಲ್ಲಿ ಕಾಣಿಸಿಕೊಂಡಿದ್ದರೂ, ನಟನೆಯ ಮೂಲಕ ಕಿರುತೆರೆ ವೀಕ್ಷಕರ ಮನ ಸೆಳೆದರು. ಬಳಿಕ ಉದಯ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ‘ಕನ್ಯಾದಾನ’ ಧಾರಾವಾಹಿಯಲ್ಲಿ ಚಿತ್ರಾ ಆಗಿ ನಟಿಸಿದ ಈಕೆ ಅಲ್ಲೂ ತಮ್ಮ ನಟನೆಯ ಮೂಲಕ ಗುರುತಿಸಿಕೊಂಡ ಪ್ರತಿಭೆ.</p><img><p>ನಾ ನಿನ್ನ ಬಿಡಲಾರೆ ಸೀರಿಯಲ್​ ಕುರಿತು ಹೇಳುವುದಾದರೆ, ಶರತ್​ ಕಂಪೆನಿಯಲ್ಲಿ ಕೆಲಸ ಮಾಡುವ ಎಡವಟ್ಟು ದುರ್ಗಾ ತುಂಬಾ ಒಳ್ಳೆಯ ಸ್ವಭಾವದವಳಾಗಿದ್ದು, ಆಕೆಯನ್ನು ತನ್ನ ಪತಿಯ ಜೊತೆ ಮದ್ವೆ ಮಾಡಿಸಬೇಕು ಎನ್ನುವ ಆಸೆ ಅಂಬಿಕಾಗೆ. ಅವಳು ತಾನು ಯಾರೆಂದು ಹೇಳದೇ ದುರ್ಗಾಗೆ ಮಾತ್ರ ಕಾಣಿಸಿಕೊಂಡು ಫ್ರೆಂಡ್​ ಆಗಿದ್ದಾಳೆ. ಆದರೆ ಆಕೆಯ ಎಡವಟ್ಟಿನಿಂದ ಶರತ್​ಗೆ ಆಕೆಯನ್ನು ಕಂಡ್ರೆ ಇನ್ನಿಲ್ಲದ ಕೋಪ. ಆದರೆ ಅದೇ ಕೋಪ ಇದೀಗ ಗೊತ್ತಿಲ್ಲದೇ ಪ್ರೀತಿಯಾಗಿಯೂ ತಿರುಗಿದೆ.</p><img><p>ಆದರೆ ಅದು ಪ್ರೀತಿ ಎನ್ನುವುದು ಇಬ್ಬರಿಗೂ ತಿಳಿದಿಲ್ಲ. ಶರತ್​ ಮದುವೆ ಮಾಯಾ ಜೊತೆ ಫಿಕ್ಸ್​ ಆಗಿದೆ. ಆದರೆ ಅದನ್ನು ತಪ್ಪಿಸಲು ಶರತ್​ ಮಗಳು ಹಿತಾ, ಅಂಬಿಕಾ ಸೇರಿದಂತೆ ಹಲವರು ಪ್ರಯತ್ನಿಸುತ್ತಿದ್ದಾರೆ. ಮುಂದೇನು ಎನ್ನುವುದು ಸದ್ಯಕ್ಕಿರುವ ಕುತೂಹಲ. ನಾಯಕ ಶರತ್​ ಪಾತ್ರದಲ್ಲಿ ಶರತ್ ಪದ್ಮನಾಭ್ ಕಾಣಿಸಿಕೊಂಡಿದ್ದರೆ, ವಿಕ್ರಾಂತ್ ರೋಣ ಚಿತ್ರದಲ್ಲಿ ನಟಿಸಿದ್ದ ನೀತಾ ಅಶೋಕ್, ಅಂಬಿಕಾ ಪಾತ್ರದಲ್ಲಿದ್ದಾರೆ. ದುರ್ಗಾಗಳಾಗಿ ರಿಷಿಕಾ ಹಾಗೂ ವಿಲನ್​ ಆಗಿ ರುಹಾನಿ ಶೆಟ್ಟಿ ನಟಿಸುತ್ತಿದ್ದಾರೆ.</p>&nbsp;&nbsp;&nbsp;&nbsp;View this post on Instagram&nbsp;&nbsp;&nbsp;&nbsp;&nbsp;&nbsp;&nbsp;&nbsp;&nbsp;&nbsp;&nbsp;<p>A post shared by Rishika ✨🧿 (@iam.rishika.official)</p><p></p>



Source link

Leave a Reply

Your email address will not be published. Required fields are marked *