
<p>ಬೆಂಗಳೂರು: ರಾಜಸ್ಥಾನ ರಾಯಲ್ಸ್ ತಂಡದ ಹೆಡ್ಕೋಚ್ ರಾಹುಲ್ ದ್ರಾವಿಡ್ ತಮ್ಮ ಸ್ಥಾನಕ್ಕೆ ದಿಢೀರ್ ಎನ್ನುವಂತೆ ರಾಜೀನಾಮೆ ಸಲ್ಲಿಸಿದ್ದಾರೆ. ಅಷ್ಟಕ್ಕೂ ದ್ರಾವಿಡ್ ಕೇವಲ ಒಂದೇ ಸೀಸನ್ ಹೆಡ್ಕೋಚ್ ಬಳಿಕ ರಾಜೀನಾಮೆ ನೀಡಿದ್ದೇಕೆ? ತೆರೆಮರೆಯ ಸತ್ಯ ಏನು ನೋಡೋಣ ಬನ್ನಿ.</p><img><p>2024ರ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯಲ್ಲಿ ರಾಹುಲ್ ದ್ರಾವಿಡ್ ಮಾರ್ಗದರ್ಶನದಲ್ಲಿ ರೋಹಿತ್ ಶರ್ಮಾ ನೇತೃತ್ವದ ಟೀಂ ಇಂಡಿಯಾ ಚಾಂಪಿಯನ್ ಆಗಿ ಹೊರಹೊಮ್ಮಿತ್ತು. ಆದರೆ ಮರು ವರ್ಷದಲ್ಲೇ ದ್ರಾವಿಡ್ಗೆ ನಿರಾಸೆ ಕೂಡಾ ಎದುರಾಯಿತು.</p><img><p>ಭಾರತಕ್ಕೆ ಟಿ20 ವಿಶ್ವಕಪ್ ಗೆಲ್ಲಿಸಿಕೊಟ್ಟ ಮರು ವರ್ಷವೇ ರಾಹುಲ್ ದ್ರಾವಿಡ್, ರಾಜಸ್ಥಾನ ರಾಯಲ್ಸ್ ತಂಡದ ಹೆಡ್ಕೋಚ್ ಆಗಿ ನೇಮಕವಾದರು.</p><img><p>ಆದರೆ ದ್ರಾವಿಡ್ ಮಾರ್ಗದರ್ಶನದಲ್ಲಿ 18ನೇ ಆವೃತ್ತಿಯ ಐಪಿಎಲ್ನಲ್ಲಿ ರಾಜಸ್ಥಾನ ರಾಯಲ್ಸ್ ತಂಡವು 14 ಪಂದ್ಯಗಳನ್ನಾಡಿ 10 ಸೋಲು 4 ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ 9ನೇ ಸ್ಥಾನ ಪಡೆದು ತನ್ನ ಅಭಿಯಾನ ಮುಗಿಸಿ ನಿರಾಸೆ ಅನುಭವಿಸಿತ್ತು.</p><img><p>ಇದೀಗ ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯು 2026ರ ಐಪಿಎಲ್ ಟೂರ್ನಿಗೆ ಸಿದ್ದತೆ ಆರಂಭಿಸಿರುವ ಬೆನ್ನಲ್ಲೇ, ರಾಹುಲ್ ದ್ರಾವಿಡ್ ಅಚ್ಚರಿಯ ರೀತಿಯಲ್ಲಿ ತಮ್ಮ ಹೆಡ್ಕೋಚ್ ಹುದ್ದೆಗೆ ರಾಜೀನಾಮೆ ಸಲ್ಲಿಸಿದ್ದಾರೆ.</p><img><p>ರಾಜಸ್ಥಾನ ರಾಯಲ್ಸ್ ನಾಯಕ ಸಂಜು ಸ್ಯಾಮ್ಸನ್ ಹಾಗೂ ರಾಹುಲ್ ದ್ರಾವಿಡ್ ನಡುವೆ ಮನಸ್ತಾಪ ಏರ್ಪಟ್ಟಿದೆ ಎನ್ನುವಂತಹ ಮಾತುಗಳು ಕೇಳಿಬಂದಿದ್ದವು. ಆದರೆ ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಒಂದು ಪೋಸ್ಟ್ ಎಲ್ಲಾ ಗಾಳಿಸುದ್ದಿಗಳಿಗೆ ತೆರೆ ಎಳೆದಿದೆ.</p><img><p>ಹೌದು, ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯು, ದ ವಾಲ್ ಖ್ಯಾತಿಯ ರಾಹುಲ್ ದ್ರಾವಿಡ್ಗೆ ಒಂದು ದೊಡ್ಡ ಪೋಸ್ಟ್ ನೀಡುವ ಆಫರ್ ಕೊಟ್ಟಿತ್ತು. ಆದರೆ ದ್ರಾವಿಡ್ ಆ ಆಫರ್ ಅನ್ನು ಸಾರಾಸಗಟಾಗಿ ನಿರಾಕರಿಸಿದ್ದಾರೆ ಎನ್ನುವುದು ಮೇಲ್ನೋಟಕ್ಕೆ ಕಂಡು ಬಂದಿದೆ.</p><img><p>ಕಳೆದ ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿ ಕಾಲು ನೋವಿನ ಸಮಸ್ಯೆಯ ಹೊರತಾಗಿಯೂ ದ್ರಾವಿಡ್ ವೀಲ್ ಚೇರ್ನಲ್ಲಿ ಕುಳಿತುಕೊಂಡು ಆಟಗಾರರಿಗೆ ಕೋಚಿಂಗ್ ಮಾಡಿದ್ದರು. ಹೀಗಿದ್ದೂ ಇದೀಗ ದ್ರಾವಿಡ್ ತಮ್ಮ ಹುದ್ದೆಗೆ ರಾಜೀನಾಮೆ ನೀಡಿರುವುದು ಸಾಕಷ್ಟು ಅಚ್ಚರಿಗೆ ಕಾರಣವಾಗಿದೆ</p><img><p>ಇನ್ನು ಸಂಜು ಸ್ಯಾಮ್ಸನ್ ಕೂಡಾ ರಾಜಸ್ಥಾನ ರಾಯಲ್ಸ್ ತಂಡವನ್ನು ತೊರೆಯಲು ಮುಂದಾಗಿದ್ದಾರೆ ಎನ್ನಲಾಗಿದೆ. ಕಳೆದ ಬಾರಿ ಟೀಂ ಮ್ಯಾನೇಜ್ಮೆಂಟ್ ಜೋಸ್ ಬಟ್ಲರ್ ಅವರನ್ನು ರಿಲೀಸ್ ಮಾಡಿದ್ದು ಕ್ಯಾಪ್ಟನ್ ಸ್ಯಾಮ್ಸನ್ ಅಸಮಾಧಾನಕ್ಕೆ ಕಾರಣವಾಗಿತ್ತು ಎನ್ನಲಾಗಿದೆ.</p>
Source link
ದ್ರಾವಿಡ್ರನ್ನು ಕೇವಲ ಒಂದೇ ಸೀಸನ್ ಬಳಿಕ ರಾಜಸ್ಥಾನ ರಾಯಲ್ಸ್ ತಲೆದಂಡ ಮಾಡಿದ್ದೇಕೆ? ಕೊನೆಗೂ ಬಯಲಾಯ್ತು ತೆರೆ ಹಿಂದಿನ ಸತ್ಯ