
ನಿಪ್ಪಾಣಿ-ಮುಧೋಳ ರಾಜ್ಯ ಹೆದ್ದಾರಿಯಲ್ಲಿ ಲಾರಿ ಮತ್ತು ಬಸ್ ನಡುವೆ ಭೀಕರ ಅಪಘಾತ ಸಂಭವಿಸಿ, ಇಬ್ಬರು ಚಾಲಕರ ಕಾಲುಗಳು ಕಟ್ ಆಗಿವೆ. ಚಿಕ್ಕೋಡಿ ತಾಲೂಕಿನ ಕಬ್ಬೂರು ಗ್ರಾಮದ ಬಳಿ ಈ ದುರ್ಘಟನೆ ನಡೆದಿದ್ದು, ಹಲವರಿಗೆ ಸಣ್ಣಪುಟ್ಟ ಗಾಯಗಳಾಗಿವೆ.<img><p>ನಿಪ್ಪಾಣಿ ಮುಧೋಳ ರಾಜ್ಯ ಹೆದ್ದಾರಿಯಲ್ಲಿ ಭೀಕರ ಅಪಘಾತ ಸಂಭವಿಸಿದೆ. ಲಾರಿ ಹಾಗೂ ಬಸ್ ನಡುವೆ ಭಾರೀ ಅಫಘಾತ ಸಂಭವಿಸಿದೆ.</p><img><p>ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಕಬ್ಬೂರು ಗ್ರಾಮದ ಬಳಿ ಘಟನೆ ನಡೆದಿದೆ. ಆಕ್ಸಿಡೆಂಟ್ ಆಗಿರುವ ರಭಸಕ್ಕೆ ಬಸ್ ಚಾಲಕ ಹಾಗೂ ಲಾರಿ ಚಾಲಕರ ಎರಡೂ ಕಾಲುಗಳು ಕಟ್ ಆಗಿವೆ.</p><img><p>ಘಟನೆಯಲ್ಲಿ ಹಲವರಿಗೆ ಸಣ್ಣ ಪುಟ್ಟ ಗಾಯವಾಗಿದೆ. ಇಬ್ಬರು ಪ್ರಯಾಣಿಕರಿಗೆ ಗಂಭೀರ ಗಾಯವಾಗಿದೆ ಎನ್ನುವ ವರದಿಗಳಿವೆ.</p><img><p>ಕ್ರೇನ್ ಮೂಲಕ ವಾಹನಗಳನ್ನು ಪೊಲೀಸರು ಪಕ್ಕಕ್ಕೆ ಸರಿಸಿದ್ದಾರೆ. ಕಾಲುಗಳನ್ನು ಕಳೆದುಕೊಂಡ ಲಾರಿ ಚಾಲಕನ ರೋದನ ಹೇಳತೀರದಾಗಿತ್ತು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.</p><img><p>ಅಪಘಾತದಿಂದಾಗಿ ರಾಜ್ಯ ಹೆದ್ದಾರಿಯ ಮೇಲೆ ಟ್ರಾಫಿಕ್ ಜಾಮ್ ಉಂಟಾಗಿತ್ತು. ಸ್ಥಳಕ್ಕೆ ಚಿಕ್ಕೋಡಿ ಪೊಲೀಸರ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.</p><img><p>ಒಳಗೆ ಸಿಲುಕಿದ ಚಾಲಕರನ್ನು ಹೊರ ತೆಗೆಯಲು ಸ್ಥಳೀಯ ಜನರು ಹಾಗೂ ಪೊಲೀಸರು ಹರಸಾಹಸ ಪಟ್ಟಿದ್ದಾರೆ. ಕೊಲ್ಹಾಪುರ ದಿಂದ ಮುಧೋಳ ಕಡೆಗೆ ಬಸ್ ಹೊರಟಿತ್ತು. ಅಪಘಾತದಿಂದ ಇಬ್ಬರೂ ಚಾಲಕರ ಸ್ಥಿತಿ ಗಂಭೀರವಾಗಿದೆ.</p><img><p>ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಚಿಕ್ಕೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.</p>
Source link
ಬಸ್-ಲಾರಿ ನಡುವೆ ಭೀಕರ ಅಪಘಾತ, ಇಬ್ಬರೂ ಡ್ರೈವರ್ಗಳ ಕಾಲು ಕಟ್!