ರಾಷ್ಟ್ರಮಟ್ಟದ ಶಿಕ್ಷಕ ಪ್ರಶಸ್ತಿಗೆ ಮೈಸೂರು ಮಧುಸೂಧನ್ ಭಾಜನ; ಈ ಕಾರ್ಯಕ್ಕೆ ಮೆಚ್ಚಲೇಬೇಕು! | Teachers Day Mysuru Ks Madhusoodan Wins National Best Teacher Award 2025 Sat

ರಾಷ್ಟ್ರಮಟ್ಟದ ಶಿಕ್ಷಕ ಪ್ರಶಸ್ತಿಗೆ ಮೈಸೂರು ಮಧುಸೂಧನ್ ಭಾಜನ; ಈ ಕಾರ್ಯಕ್ಕೆ ಮೆಚ್ಚಲೇಬೇಕು! | Teachers Day Mysuru Ks Madhusoodan Wins National Best Teacher Award 2025 Sat



ರಾಷ್ಟ್ರಮಟ್ಟದ ಶಿಕ್ಷಕ ಪ್ರಶಸ್ತಿಗೆ ಮೈಸೂರು ಮಧುಸೂಧನ್ ಭಾಜನ; ಈ ಕಾರ್ಯಕ್ಕೆ ಮೆಚ್ಚಲೇಬೇಕು! | Teachers Day Mysuru Ks Madhusoodan Wins National Best Teacher Award 2025 Sat

ಮೈಸೂರಿನ ಹಿನಕಲ್ ಸರ್ಕಾರಿ ಶಾಲೆಯ ವಿಜ್ಞಾನ ಶಿಕ್ಷಕ ಕೆ.ಎಸ್.ಮಧುಸೂದನ್‌ ರಾಷ್ಟ್ರಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಭಾಜನರಾಗಿದ್ದಾರೆ. ನವೀನ ಬೋಧನಾ ವಿಧಾನ ಮತ್ತು ತಂತ್ರಜ್ಞಾನದ ಸದ್ಬಳಕೆಗಾಗಿ ಅವರಿಗೆ ಈ ಪ್ರಶಸ್ತಿ ಲಭಿಸಿದೆ. ಕರ್ನಾಟಕದಿಂದ ಆಯ್ಕೆಯಾದ ಏಕೈಕ ಶಿಕ್ಷಕರೆಂಬ ಹೆಗ್ಗಳಿಕೆ ಅವರದು.

ಮೈಸೂರು (ಸೆ.04): ಶಿಕ್ಷಕರ ದಿನಾಚರಣೆಯ ಶುಭ ಸಂದರ್ಭದಲ್ಲಿ, ಮೈಸೂರಿನ ಹಿನಕಲ್ ಸರ್ಕಾರಿ ಶಾಲೆಯ ವಿಜ್ಞಾನ ಶಿಕ್ಷಕರಾದ ಕೆ.ಎಸ್.ಮಧುಸೂದನ್‌ ಅವರು ‘ರಾಷ್ಟ್ರಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ’ಗೆ ಭಾಜನರಾಗಿದ್ದಾರೆ. ಈ ಬಾರಿ ದೇಶಾದ್ಯಂತ ಒಟ್ಟು 45 ಶಿಕ್ಷಕರು ಈ ಪ್ರಶಸ್ತಿಗೆ ಆಯ್ಕೆಯಾಗಿದ್ದು, ಕರ್ನಾಟಕದಿಂದ ಆಯ್ಕೆಯಾದ ಏಕೈಕ ಶಿಕ್ಷಕ ಎಂಬ ಹೆಗ್ಗಳಿಕೆಗೆ ಮಧುಸೂದನ್ ಪಾತ್ರರಾಗಿದ್ದಾರೆ.

ಸರ್ಕಾರಿ ಶಾಲೆಯ ಬಲವರ್ಧನೆಗೆ ಶ್ರಮ:

ಮಧುಸೂದನ್‌ ಅವರು ತಮ್ಮ ನವೀನ ಬೋಧನಾ ವಿಧಾನ ಮತ್ತು ಸರ್ಕಾರಿ ಶಾಲೆಯನ್ನು ಬಲಪಡಿಸುವ ಬದ್ಧತೆಯಿಂದ ಈ ಗೌರವಕ್ಕೆ ಪಾತ್ರರಾಗಿದ್ದಾರೆ. ನವೋದಯ ಶಾಲೆಯ ವಿದ್ಯಾರ್ಥಿಯಾಗಿದ್ದ ಅವರು, ಅಲ್ಲಿ ದೊರೆಯುವ ಗುಣಮಟ್ಟದ ಶಿಕ್ಷಣ ಎಲ್ಲ ಸರ್ಕಾರಿ ಶಾಲೆಗಳಿಗೂ ಸಿಗಬೇಕು ಎಂದು ದೃಢ ಸಂಕಲ್ಪ ಮಾಡಿದ್ದರು. ಈ ಗುರಿಯನ್ನು ಸಾಧಿಸಲು, ಅವರು ತಮ್ಮ ಶಾಲೆಯಲ್ಲಿ ಆಧುನಿಕ ತಂತ್ರಜ್ಞಾನಗಳನ್ನು ಅಳವಡಿಸಿಕೊಂಡು ಶಿಕ್ಷಣದಲ್ಲಿ ಕ್ರಾಂತಿಕಾರಿ ಬದಲಾವಣೆ ತಂದಿದ್ದಾರೆ.

ನವೀನ ತಂತ್ರಜ್ಞಾನ ಆಧಾರಿತ ಕಲಿಕೆ:

ಮಧುಸೂದನ್‌ ಅವರು ತಮ್ಮ ಶಾಲೆಯಲ್ಲಿ ಕೃತಕ ಬುದ್ಧಿಮತ್ತೆ (AI), ವರ್ಚುವಲ್ ರಿಯಾಲಿಟಿ, ರೋಬೊಟಿಕ್ಸ್ ಮತ್ತು ಬೇಸಿಕ್ ಎಲೆಕ್ಟ್ರಾನಿಕ್ಸ್‌ನಂತಹ ಅತ್ಯಾಧುನಿಕ ತಂತ್ರಜ್ಞಾನಗಳನ್ನು ಬಳಸಿಕೊಂಡು ಮಕ್ಕಳಿಗೆ ಪಾಠ ಮಾಡುತ್ತಿದ್ದಾರೆ. 5 ರಿಂದ 7ನೇ ತರಗತಿಯ ವಿದ್ಯಾರ್ಥಿಗಳಿಗಾಗಿ ಅತ್ಯಾಧುನಿಕ ವಿಜ್ಞಾನ ಪ್ರಯೋಗಾಲಯವನ್ನು ನಿರ್ಮಿಸಿದ್ದಾರೆ. ಅಲ್ಲದೆ, 1 ಮತ್ತು 2ನೇ ತರಗತಿಯ ಮಕ್ಕಳಿಗೆ ಪ್ರೊಜೆಕ್ಟರ್ ಬಳಸಿ ‘ಸ್ಮಾರ್ಟ್ ಕ್ಲಾಸ್’ ಮೂಲಕ ಪಾಠ ಮಾಡಲಾಗುತ್ತಿದೆ.

ತಂತ್ರಜ್ಞಾನದ ಸದ್ಬಳಕೆ:

ಶಿಕ್ಷಣದ ಜೊತೆಗೆ ಶಾಲೆಯ ಆಡಳಿತದಲ್ಲೂ ಮಧುಸೂದನ್‌ ತಂತ್ರಜ್ಞಾನವನ್ನು ಅಳವಡಿಸಿಕೊಂಡಿದ್ದಾರೆ. ಕ್ಯೂಆರ್ ಕೋಡ್ ಮತ್ತು ಸ್ಕ್ಯಾನರ್‌ಗಳನ್ನು ಬಳಸಿ ಮಕ್ಕಳ ದಾಖಲಾತಿ ಮತ್ತು ಹಾಜರಾತಿಯನ್ನು ನಮೂದಿಸಲಾಗುತ್ತಿದೆ. ಮಕ್ಕಳ ಹಾಜರಾತಿ ಮಾಹಿತಿ ನೇರವಾಗಿ ಪೋಷಕರ ಮೊಬೈಲ್‌ಗೆ ರವಾನೆಯಾಗುತ್ತದೆ. ಜೊತೆಗೆ, ವಿದ್ಯಾರ್ಥಿಗಳ ಕಲಿಕಾ ಪ್ರಗತಿಯನ್ನು ಪೋಷಕರು ವೆಬ್‌ಸೈಟ್ ಮೂಲಕ ತಿಳಿದುಕೊಳ್ಳಲು ಅನುಕೂಲವಾಗುವಂತೆ ಸಾಫ್ಟ್‌ವೇರ್ ಒಂದನ್ನು ಅಭಿವೃದ್ಧಿಪಡಿಸಿದ್ದಾರೆ.

ಮಧುಸೂದನ್‌ ಅವರು ನಾಳೆ ದೆಹಲಿಯಲ್ಲಿ ರಾಷ್ಟ್ರಪತಿಗಳಿಂದ ಪ್ರಶಸ್ತಿಯನ್ನು ಸ್ವೀಕರಿಸಲಿದ್ದಾರೆ. ಪ್ರಶಸ್ತಿ ಸ್ವೀಕಾರದ ನಂತರ ಪ್ರಧಾನಮಂತ್ರಿಗಳ ಜೊತೆ ಸಂವಾದದಲ್ಲಿ ಭಾಗಿಯಾಗಲಿದ್ದಾರೆ ಎಂದು ತಿಳಿದುಬಂದಿದೆ. ಅವರ ಈ ಸಾಧನೆ ರಾಜ್ಯದ ಇತರ ಶಿಕ್ಷಕರಿಗೂ ಪ್ರೇರಣೆಯಾಗಿದೆ.



Source link

Leave a Reply

Your email address will not be published. Required fields are marked *