Car Accident ಬಳಿಕ ರಿಷಭ್ ಪಂತ್ ಆಸ್ಪತ್ರೆಯಲ್ಲಿ ಡಾಕ್ಟರ್ ಬಳಿ ಕೇಳಿದ ಮೊದಲ ಪ್ರಶ್ನೆ ಏನು? ಕೊನೆಗೂ ಬಯಲಾಯ್ತು ಸತ್ಯ

Car Accident ಬಳಿಕ ರಿಷಭ್ ಪಂತ್ ಆಸ್ಪತ್ರೆಯಲ್ಲಿ ಡಾಕ್ಟರ್ ಬಳಿ ಕೇಳಿದ ಮೊದಲ ಪ್ರಶ್ನೆ ಏನು? ಕೊನೆಗೂ ಬಯಲಾಯ್ತು ಸತ್ಯ




<p>ನವದೆಹಲಿ: ಟೀಂ ಇಂಡಿಯಾ ವಿಕೆಟ್ ಕೀಪರ್ ಬ್ಯಾಟರ್ ರಿಷಭ್ ಪಂತ್, 2022ರಲ್ಲಿ ಭೀಕರ ಅಪಘಾತಕ್ಕೆ ಒಳಗಾಗಿ ಪವಾಡಸದೃಶ ರೀತಿಯಲ್ಲಿ ಪಾರಾಗಿದ್ದರು. ಆಸ್ಪತ್ರೆಯಲ್ಲಿ ಅಡ್ಮಿಟ್ ಆದ ಬಳಿಕ ಪಂತ್, ಡಾಕ್ಟರ್ ಬಳಿ ಕೇಳಿದ ಮೊದಲ ಪ್ರಶ್ನೆ ಏನು ಎನ್ನುವ ವಿಚಾರ ಬಹಿರಂಗವಾಗಿದೆ.</p><img><p>2022ರ ಡಿಸೆಂಬರ್‌ನಲ್ಲಿ ಭೀಕರ ಕಾರು ಅಪಘಾತಕ್ಕೆ ತುತ್ತಾಗಿದ್ದ ಕ್ರಿಕೆಟಿಗ ರಿಷಭ್‌ ಜೀವನ್ಮರಣ ಸ್ಥಿತಿಯಲ್ಲಿದ್ದರೂ ವೈದ್ಯರ ಬಳಿ ಮೊದಲು ಕೇಳಿದ ಪ್ರಶ್ನೆ ಕ್ರಿಕೆಟ್‌ ಬಗ್ಗೆ. ಇದನ್ನು ವೈದ್ಯ ದಿನ್ಶಾ ಪರ್ದಿವಾಲಾ ಬಹಿರಂಗಪಡಿಸಿದ್ದಾರೆ.</p><img><p>2022ರ ಡಿಸೆಂಬರ್ 30ರಂದು ರಾತ್ರಿ ರಿಷಭ್ ಪಂತ್ ಏಕಾಂಗಿಯಾಗಿ ಕಾರು ಚಲಾಯಿಸುವಾಗ, ರಸ್ತೆ ಡಿವೆಂಡರ್‌ಗೆ ಡಿಕ್ಕಿ ಹೊಡೆದು ಗಂಭೀರ ಗಾಯಕ್ಕೆ ತುತ್ತಾಗಿದ್ದರು. ಕಾರು ಕೂಡಾ ಸಂಪೂರ್ಣ ಜಕಂ ಆಗಿತ್ತು.</p><img><p>ಈ ಬಗ್ಗೆ ಮಾತನಾಡಿರುವ ಅವರು, ‘ರಿಷಭ್‌ ಬದುಕುಳಿದಿದ್ದೇ ಪವಾಡ. ಈ ರೀತಿ ಅಪಘಾತದಲ್ಲಿ ಮರಣ ಸಂಭವ ಜಾಸ್ತಿ. ರಿಷಭ್‌ ಗಂಭೀರ ಗಾಯಗೊಂಡಿದ್ದವು. ಚರ್ಮಗಳು ಕಿತ್ತು ಬಂದಿದ್ದವು. ಆದರೆ ಹೆಚ್ಚು ರಕ್ತ ಹೋಗದ ಕಾರಣ ಬದುಕುಳಿದರು’ ಎಂದಿದ್ದಾರೆ.</p><img><p>ರಿಷಭ್‌ ಮುಂಬೈ ಆಸ್ಪತ್ರೆಗೆ ದಾಖಲಾದಾಗ ಮೊದಲು ಕೇಳಿದ ಪ್ರಶ್ನೆ ‘ನನಗೆ ಮತ್ತೆ ಕ್ರಿಕೆಟ್‌ ಆಡಲು ಸಾಧ್ಯವೇ’ ಎಂಬುದಾಗಿತ್ತು. ಅವರ ತಾಯಿ ತಮ್ಮ ಮಗನಿಗೆ ಮತ್ತೆ ನಡೆದಾಡಲು ಸಾಧ್ಯವೇ ಎಂದು ಪ್ರಶ್ನಿಸಿದ್ದರು ಎಂದು ಪರ್ದಿವಾಲಾ ತಿಳಿಸಿದ್ದಾರೆ.</p><img><p>ಇನ್ನು ಗಾಯದಿಂದ ಚೇತರಿಸಿಕೊಂಡ ರಿಷಭ್ ಪಂತ್ ಭರ್ಜರಿಯಾಗಿ ಕಮ್‌ಬ್ಯಾಕ್ ಮಾಡುವಲ್ಲಿ ಯಶಸ್ವಿಯಾಗಿದ್ದರು. ಸದ್ಯ ಪಂತ್ ಇಂಗ್ಲೆಂಡ್ ಪ್ರವಾಸದಲ್ಲಿದ್ದು, ಮೊದಲ ಟೆಸ್ಟ್‌ನ ಎರಡೂ ಇನ್ನಿಂಗ್ಸ್‌ನಲ್ಲಿ ಶತಕ ಸಿಡಿಸಿ ಗಮನ ಸೆಳೆದಿದ್ದರು.</p>



Source link

Leave a Reply

Your email address will not be published. Required fields are marked *