ಮದುವೆಗೆ 15 ದಿನ ಮುನ್ನವೇ ಮಸಣ ಸೇರಿದ ಯುವತಿ; ಆಪತ್ತು ತಂದ ಅಣ್ಣನ ಬೈಕ್!

ಮದುವೆಗೆ 15 ದಿನ ಮುನ್ನವೇ ಮಸಣ ಸೇರಿದ ಯುವತಿ; ಆಪತ್ತು ತಂದ ಅಣ್ಣನ ಬೈಕ್!



ಮದುವೆಗೆ 15 ದಿನ ಮುನ್ನವೇ ಮಸಣ ಸೇರಿದ ಯುವತಿ; ಆಪತ್ತು ತಂದ ಅಣ್ಣನ ಬೈಕ್!
<p>ಶಿವಮೊಗ್ಗದಲ್ಲಿ ಮದುವೆಗೆ ಕೇವಲ 15 ದಿನಗಳು ಬಾಕಿ ಇರುವಾಗ ಯುವತಿ ಕವಿತಾ ರಸ್ತೆ ಅಪಘಾತದಲ್ಲಿ ದುರ್ಮರಣ ಹೊಂದಿದ್ದಾಳೆ. ಈ ಘಟನೆ ಮದುವೆಯ ಸಂಭ್ರಮದಲ್ಲಿದ್ದ ಕುಟುಂಬದಲ್ಲಿ ದುಃಖ ಆವರಿಸಿದೆ.</p><img><p><strong>ಶಿವಮೊಗ್ಗ (ಸೆ.08): </strong>ಇನ್ನೇನು ಹದಿನೈದು ದಿನಗಳಲ್ಲಿ ಮದುವೆಯ ಸಂಭ್ರಮದಲ್ಲಿ ಮನೆ ತುಂಬಿರುತ್ತಿದ್ದ ಯುವತಿಯೊಬ್ಬಳು ಭೀಕರ ರಸ್ತೆ ಅಪಘಾತದಲ್ಲಿ ದುರಂತ ಸಾವಿಗೀಡಾಗಿದ್ದಾಳೆ.</p><img><p>ಈ ದಾರುಣ ಘಟನೆ ಶಿವಮೊಗ್ಗ ತಾಲೂಕಿನ ಮಲವಗೊಪ್ಪ ಗ್ರಾಮದ ಬಳಿ ನಡೆದಿದೆ. ಈ ಸಾವಿನಿಂದಾಗಿ ಇಡೀ ಕುಟುಂಬದಲ್ಲಿ ಮದುವೆಯ ಸಂಭ್ರಮದ ಬದಲು ಸೂತಕದ ವಾತಾವರಣ ಆವರಿಸಿದೆ.</p><img><p>ದುಮ್ಮಳ್ಳಿ ತಾಂಡಾ ನಿವಾಸಿಯಾಗಿರುವ <strong>’ಕವಿತಾ (26)’ </strong>ಅಪಘಾತದಲ್ಲಿ ಮೃತಪಟ್ಟ ಯುವತಿ. ಕವಿತಾ ಅವರು ತಮ್ಮ ಸಹೋದರರೊಂದಿಗೆ ಬೈಕ್‌ನಲ್ಲಿ ಪ್ರಯಾಣಿಸುತ್ತಿದ್ದರು.</p><img><p>ಈ ವೇಳೆ, ಲಗೇಜ್ ತೆಗೆದುಕೊಂಡು ಹೋಗುತ್ತಿದ್ದ ಮತ್ತೊಬ್ಬ ಬೈಕ್ ಸವಾರ ಇವರ ಬೈಕಿಗೆ ತಾಗಿಸಿದ್ದಾನೆ. ಇದರಿಂದಾಗಿ ಬೈಕ್‌ನ ನಿಯಂತ್ರಣ ತಪ್ಪಿ ಕವಿತಾ ಸಹೋದರ ಪಾದಚಾರಿ ಮಾರ್ಗದ ಮೇಲೆ ಬಿದ್ದಿದ್ದಾನೆ. ಆದರೆ, ಕವಿತಾ ನೇರವಾಗಿ ರಸ್ತೆಗೆ ಬಿದ್ದಿದ್ದಾರೆ.</p><img><p>ದುರದೃಷ್ಟವಶಾತ್, ಅದೇ ಸಮಯದಲ್ಲಿ ವೇಗವಾಗಿ ಬರುತ್ತಿದ್ದ ಸಿಟಿ ಬಸ್ ಕವಿತಾ ಅವರ ಮೇಲೆ ಹರಿದಿದೆ. ಪರಿಣಾಮವಾಗಿ ತೀವ್ರ ಗಾಯಗಳಾದ ಕವಿತಾ ಸ್ಥಳದಲ್ಲೇ ಪ್ರಾಣ ಬಿಟ್ಟಿದ್ದಾರೆ.</p><img><p><strong>ಕುಟುಂಬದಲ್ಲಿ ಶೋಕದ ವಾತಾವರಣ:</strong></p><p>ಮದುವೆಗೆ ಸಿದ್ಧತೆಗಳು ನಡೆದಿರುವಾಗ ಸಂಭವಿಸಿದ ಈ ದುರ್ಘಟನೆ ಇಡೀ ಕುಟುಂಬ ಮತ್ತು ಗ್ರಾಮದ ಜನರಲ್ಲಿ ಆಘಾತ ಮತ್ತು ದುಃಖವನ್ನುಂಟು ಮಾಡಿದೆ. 15 ದಿನಗಳ ನಂತರ ಹಸೆಮಣೆ ಏರಬೇಕಿದ್ದ ಯುವತಿ ಈಗ ಇನ್ನಿಲ್ಲ ಎಂಬ ಸುದ್ದಿ ಕವಿತಾ ಅವರ ಮನೆಯಲ್ಲಿ ಶೋಕದ ಛಾಯೆ ಆವರಿಸುವಂತೆ ಮಾಡಿದೆ.</p><img><p>ಕೊನೆಯ ದಿನ ಕಚೇರಿಗೆ ಹೋಗಿ ರಜೆಯನ್ನು ಅಪ್ಲೈ ಮಾಡಿದ್ದ ಕವಿತಾ, ಮದುವೆ ಮುಗಿಸಿಕೊಂಡೇ ವಾಪಸ್ ಕೆಲಸಕ್ಕೆ ಬರುವುದಾಗಿ ಹೇಳಿ ಸಹೋದರನ ಬೈಕ್‌ನಲ್ಲಿ ಮನೆಗೆ ಹೋಗುತ್ತಿದ್ದಳು. ಆದರೆ, ದುರ್ವಿಧಿ ಮದುವೆಗೂ ಮುನ್ನವೇ ಯುವತಿಯನ್ನು ಮಸಣಕ್ಕೆ ಸೇರಿಸಿದೆ.</p><img><p>ಈ ದುರಂತದ ಕುರಿತು ಪೂರ್ವ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.</p>



Source link

Leave a Reply

Your email address will not be published. Required fields are marked *