
Actor Darshan Thoogudeepa: ನಟ ದರ್ಶನ್ ತೂಗುದೀಪ ಅವರು ಜೈಲಿನಲ್ಲಿದ್ದು, “ನನಗೆ ಸ್ವಲ್ಪ ವಿಷ ಕೊಡಿ” ಎಂದು ಹೇಳಿದ್ದಾರಂತೆ. ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆಯಾಗಿ ವರ್ಷವಾಗಿದೆ.
ನಟ ದರ್ಶನ್ ತೂಗುದೀಪ ಅವರು ಬೆಂಗಳೂರಿನ ಪರಪ್ಪನ ಅಗ್ರಹಾರದಲ್ಲಿದ್ದಾರೆ. ಈಗ ಅವರು ಜೈಲಿನಲ್ಲಿದ್ದು, ಬಳ್ಳಾರಿ ಜೈಲಿಗೆ ಶಿಫ್ಟ್ ಆಗಲಿದ್ದಾರಾ? ಇಲ್ಲವಾ ಎಂದು ನೋಡುತ್ತಿದ್ದಾರೆ. ಇನ್ನೊಂದು ಕಡೆ ಅವರು, “ಜೈಲಿನಲ್ಲಿ ನಾನು ಬೆಳಕು ನೋಡಿಲ್ಲ. ದಯಮಾಡಿ ನನಗೆ ವಿಷ ಕೊಡಿ” ಎಂದು ಅವರು ಹೇಳಿದ್ದಾರೆ.
ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಅವರು ಜೈಲಿನಲ್ಲಿದ್ದಾರೆ. ವಿಡಿಯೋ ಕಾನ್ಫರೆನ್ಸ್ ಮೂಲಕ ಅವರು ವಿಚಾರಣೆಗೆ ಹಾಜರಾಗಿದ್ದಾರೆ. ಆ ವೇಳೆ ಅವರು, “ಜೈಲಿನಲ್ಲಿ ಏನೂ ಕೇಳಿದರೂ ಸಿಗುತ್ತಿಲ್ಲ. ಹೀಗಾಗಿ ನನಗೆ ಸ್ವಲ್ಪ ವಿಷ ಕೊಡಿ” ಎಂದು ಅವರು ಹೇಳಿದ್ದಾರೆ.