
<p><strong>ಕಲಬುರಗಿ (ಸೆ.13): </strong>ಶಹಾಬಾದ್: ಗುಂಡಿನ ದಾಳಿಯಿಂದ ಬಚಾವ್ ಆಗಲು ಹೈವೇ ಪೆಟ್ರೋಲಿಂಗ್ ಪೊಲೀಸ್ ಜೀಪನ್ನೇ ಓಡಿಸಿಕೊಂಡು ಹೋಗಿ ಯುವಕನೋರ್ವ ಸಿನಿಮೀಯ ಶೈಲಿಯಲ್ಲಿ ಪಾರಾದ ಘಟನೆ ಇಲ್ಲಿನ ಭಂಕೂರಿನ ಐನಾಪೂರ ಬಳಿ ನಡೆದಿದೆ. </p><p>ಶಹಾಬಾದ್ ನಿವಾಸಿ ಶಂಕರ ಅಳ್ಳೋಳ್ಳಿ ತನ್ನ ಸಂಬಂಧಿಕರು, ಸ್ನೇಹಿತರೊಂದಿಗೆ ಡಾಬಾದಲ್ಲಿ ರಾತ್ರಿ ಭೋಜನ ಸೇವಿಸುತ್ತಿದ್ದರು. ಏಳೆಂಟು ಜನರ ಗುಂಪು ಡಾಬಾಗೆ ನುಗ್ಗಿ ಗುಂಡಿನ ದಾಳಿ ನಡೆಸಿದೆ. ಆಗ ಡಾಬಾದ ಹಿಂಬದಿಯಿಂದ ಹೈವೇಗೆ ಶಂಕರ ಬಂದಿದ್ದಾರೆ. </p><p><strong>ಇದನ್ನೂ ಓದಿ:</strong><strong> ಭಿಕ್ಷೆ ಬೇಡಿ ಆಸ್ಪತ್ರೆ ಬಿಲ್ ಕಟ್ಟಿದ್ರೂ ಚಿಕಿತ್ಸೆ ಫಲಿಸದೆ ಮಗು ಸಾವು!</strong></p><p>ಅಲ್ಲೇ ಸಮೀಪದಲ್ಲಿದ್ದ ಪೊಲೀಸರು, ಗಲಾಟೆ ಶಬ್ದ ಕೇಳಿ ಜೀಪು ನಿಲ್ಲಿಸಿ ಡಾಬಾಗೆ ಧಾವಿಸಿದ್ದಾರೆ. ಈ ವೇಳೆ ಪೊಲೀಸರ ಜೀಪು ಏರಿದ ಶಂಕರನಿಗೆ ಕೀ ಗಾಡಿಯಲ್ಲೇ ಇರುವುದು ಕಂಡಿದೆ. ಆತ ಜೀವ ಭಯದಲ್ಲಿ ಜೀಪನ್ನು ಓಡಿಸಿಕೊಂಡು ಹೋಗಿ ಪಾರಾಗಿದ್ದಾನೆ. </p><p>ಕೊಲೆ ಪ್ರಕರಣದ ದ್ವೇಷಕ್ಕೆ ಶಂಕರನ ಮೇಲೆ ದಾಳಿ ನಡೆದಿದೆ ಎನ್ನಲಾಗಿದೆ.</p>
Source link
ಪೊಲೀಸ್ ಜೀಪನ್ನೇ ಓಡಿಸಿಕೊಂಡು ಹೋಗಿ ದುಷ್ಕರ್ಮಿಗಳಿಂದ ಬಚಾವಾದ!