ಬಿಜೆಪಿ ನಾಯಕರು ಅಪಪ್ರಚಾರ ಮಾಡಿ ಸಮಾಜದಲ್ಲಿ ಸೌಹಾರ್ದತೆ ಕೆಡಿಸುತ್ತಿದ್ದಾರೆ: ಲಕ್ಷ್ಮೀ ಹೆಬ್ಬಾಳಕರ್ ಆರೋಪ | Minister Lakshmi Hebbalkar Bjp False Campaign Communal Harmony Gvd

ಬಿಜೆಪಿ ನಾಯಕರು ಅಪಪ್ರಚಾರ ಮಾಡಿ ಸಮಾಜದಲ್ಲಿ ಸೌಹಾರ್ದತೆ ಕೆಡಿಸುತ್ತಿದ್ದಾರೆ: ಲಕ್ಷ್ಮೀ ಹೆಬ್ಬಾಳಕರ್ ಆರೋಪ | Minister Lakshmi Hebbalkar Bjp False Campaign Communal Harmony Gvd



ಬಿಜೆಪಿ ನಾಯಕರು ಅಪಪ್ರಚಾರ ಮಾಡಿ ಸಮಾಜದಲ್ಲಿ ಸೌಹಾರ್ದತೆ ಕೆಡಿಸುತ್ತಿದ್ದಾರೆ: ಲಕ್ಷ್ಮೀ ಹೆಬ್ಬಾಳಕರ್ ಆರೋಪ | Minister Lakshmi Hebbalkar Bjp False Campaign Communal Harmony Gvd

ರಾಜ್ಯ ಸರ್ಕಾರದ ಜನಪ್ರಿಯತೆ ಸಹಿಸದ ಬಿಜೆಪಿ ನಾಯಕರು ಅನಾವಶ್ಯಕ ಅಪಪ್ರಚಾರ ನಡೆಸಿ ಸಮಾಜದಲ್ಲಿ ಕೋಮು ಸೌಹಾರ್ದತೆ ಕೆಡಿಸುತ್ತಿದ್ದಾರೆ ಎಂದು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಆರೋಪಿಸಿದ್ದಾರೆ.

ಕಾರ್ಕಳ (ಸೆ.13): ರಾಜ್ಯ ಸರ್ಕಾರದ ಜನಪ್ರಿಯತೆ ಸಹಿಸದ ಬಿಜೆಪಿ ನಾಯಕರು ಅನಾವಶ್ಯಕ ಅಪಪ್ರಚಾರ ನಡೆಸಿ ಸಮಾಜದಲ್ಲಿ ಕೋಮು ಸೌಹಾರ್ದತೆ ಕೆಡಿಸುತ್ತಿದ್ದಾರೆ ಎಂದು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಆರೋಪಿಸಿದ್ದಾರೆ. ಕಾರ್ಕಳ ತಾಲೂಕಿನ ನೀರೆ ಗ್ರಾಮ ಪಂಚಾಯಿತಿಯ ನೂತನ ಕಟ್ಟಡ ಉದ್ಘಾಟನೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರವನ್ನು ಹಿಂದೂ ವಿರೋಧಿ ಎಂದು ಬಿಂಬಿಸುವ ಪ್ರಯತ್ನ ನಡೆಯುತ್ತಿದೆ ಎಂದರು. ವಿಪಕ್ಷಗಳಿಗೆ ಸರ್ಕಾರದ ವಿರುದ್ಧ ಆರೋಪ ಮಾಡಲು ಬೇರೆ ವಿಷಯಗಳಿಲ್ಲ. ರಾಜ್ಯ ಸರ್ಕಾರ ಬೀಳುತ್ತದೆ, ಗ್ಯಾರಂಟಿ ಯೋಜನೆಗಳು ಜಾರಿಯಾಗಲ್ಲ, ಜಾರಿಯಾದರೂ ನಾಲ್ಕು ತಿಂಗಳಿಗಷ್ಟೇ ಎಂದು ಸುಳ್ಳು ಪ್ರಚಾರ ಮಾಡಲಾಯಿತು.

ಆದರೆ ನಮ್ಮ ಸರ್ಕಾರ ಜನತೆಗೆ ಸಾಕಷ್ಟು ಅನುಕೂಲಗಳನ್ನು ಒದಗಿಸಿದೆ. ಇದನ್ನು ಸಹಿಸದ ಬಿಜೆಪಿ ನಾಯಕರು ಸುಮ್ಮನೆ ಅಪಪ್ರಚಾರ ಮಾಡುತ್ತಿದ್ದಾರೆ ಎಂದು ಹೇಳಿದರು. ಮಾಜಿ ಸಚಿವ ಸಿ.ಟಿ. ರವಿ ವಿರುದ್ಧ ದಾಖಲಾದ ಎಫ್‌ಐಆರ್ ಕುರಿತು ಪ್ರತಿಕ್ರಿಯಿಸಿದ ಸಚಿವರು, ದ್ವೇಷಪೂರಿತ ಭಾಷಣ ಮಾಡಿದರೆ ಕ್ರಮ ಕೈಗೊಳ್ಳಲು ವಿಧಾನಸಭೆಯಲ್ಲಿ ಶಾಸನ ತರಲಾಗಿದೆ. ಬಿಜೆಪಿ ಆಗಲಿ ಕಾಂಗ್ರೆಸ್ ಆಗಲಿ, ಯಾರೇ ದ್ವೇಷಪೂರಿತ ಭಾಷಣ ಮಾಡಿದರೂ ಕ್ರಮ ಕೈಗೊಳ್ಳಲಾಗುತ್ತದೆ. ಕಾನೂನಿಗಿಂತ ದೊಡ್ಡವರು ಯಾರೂ ಇಲ್ಲ. ಶಾಂತಿ ಕದಡಿದರೆ ಖಂಡಿತ ಎಫ್‌ಐಆರ್ ಆಗುತ್ತದೆ ಎಂದು ಸ್ಪಷ್ಟಪಡಿಸಿದರು.

ಎಸ್‌ಐಟಿ ತನಿಖೆಯಿಂದ ಎಲ್ಲವೂ ಬಹಿರಂಗ

ಧರ್ಮಸ್ಥಳ ಗ್ರಾಮದಲ್ಲಿ ಎಸ್‌ಐಟಿ ತನಿಖೆಗೆ ಸಂಬಂಧಿಸಿದ ಪ್ರಶ್ನೆಗೆ ಅವರು ಪ್ರತಿಕ್ರಿಯಿಸಿ, ಧರ್ಮಸ್ಥಳ ನಮ್ಮೆಲ್ಲರ ಆರಾಧ್ಯ ಸ್ಥಳ. ಅಲ್ಲಿ ಅನೇಕ ಭಕ್ತಿಯಿಂದ ನಡೆದುಕೊಳ್ಳುವ ಸಂಪ್ರದಾಯವಿದೆ. ಯಾವ ಷಡ್ಯಂತ್ರ ನಡೆದಿದ್ದರೂ ಸತ್ಯಾಸತ್ಯತೆ ಶೀಘ್ರದಲ್ಲೇ ಹೊರಬರುತ್ತದೆ. ಎಸ್ಐಟಿ ತನಿಖೆ ನಡೆಸುತ್ತಿದೆ, ಸ್ವಲ್ಪ ದಿನ ಕಾಯಿರಿ, ಎಲ್ಲವೂ ಬಹಿರಂಗವಾಗುತ್ತದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

ಕಾರ್ಕಳ ಪತ್ರಿಕಾ ಭವನ ನಿರ್ಮಾಣಕ್ಕೆ ಸಹಕಾರ

ಕಾರ್ಕಳದಲ್ಲಿ ಶಾಶ್ವತ ಪತ್ರಿಕಾ ಭವನ ನಿರ್ಮಾಣಕ್ಕೆ ಅಗತ್ಯ ಸಹಕಾರ ನೀಡುವುದಾಗಿ ಭರವಸೆ ನೀಡಿದ್ದಾರೆ. ಕಾರ್ಕಳ ತಾಲೂಕು ಕಚೇರಿ ಬಳಿಯ ಪತ್ರಿಕಾ ಭವನಕ್ಕೆ ಭೇಟಿ ನೀಡಿದ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ಉಡುಪಿ ಜಿಲ್ಲೆಯ ಪತ್ರಕರ್ತರ ಸಂಘ ರಜತ ಮಹೋತ್ಸವ ಸಮಿತಿಯ ಸಮಾರೋಪ ಸಮಾರಂಭದ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ದಿನಾಂಕ ನಿಗದಿಗೊಳಿಸುವುದಾಗಿ ತಿಳಿಸಿದ ಅವರು, ಉಡುಪಿ ಜಿಲ್ಲೆಯ ಜನರು ದಾನಧರ್ಮ ಹಾಗೂ ಸಮಾಜಮುಖಿ ಚಟುವಟಿಕೆಗಳಲ್ಲಿ ಇತರ ಜಿಲ್ಲೆಗಳಿಗೆ ಮಾದರಿಯಾಗಿದ್ದಾರೆ ಎಂದರು.

ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ., ಕಾರ್ಕಳ ತಾಲೂಕು ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಅಧ್ಯಕ್ಷ ಅಜಿತ್ ಹೆಗ್ಡೆ ಮಾಳ, ಕಾಂಗ್ರೆಸ್ ಮುಖಂಡ ಮುನಿಯಾಲು ಉದಯಕುಮಾರ್ ಶೆಟ್ಟಿ, ಕಾಂಗ್ರೆಸ್ ಜಿಲ್ಲಾ ವಕ್ತಾರ ಬಿಪಿನ್ ಚಂದ್ರ ಪಾಲ್ ಮತ್ತಿತರರು ಹಾಜರಿದ್ದರು. ಸಂಘದ ವತಿಯಿಂದ ಸಚಿವೆಗೆ ಸನ್ಮಾನ ಸಲ್ಲಿಸಲಾಯಿತು. ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಮೊಹಮ್ಮದ್ ಷರೀಫ್ ಪ್ರಾಸ್ತಾವಿಕ ಮಾತನಾಡಿದರು.



Source link

Leave a Reply

Your email address will not be published. Required fields are marked *