
<p>ಚಿತ್ರದುರ್ಗದಲ್ಲಿ ನಡೆದ ಹಿಂದೂ ಮಹಾಗಣಪತಿ ಉತ್ಸವದಲ್ಲಿ ಭಕ್ತರಿಂದ ಕಾಪಿಕೆ ಪೆಟ್ಟಿಗೆಯಲ್ಲಿ 15 ಲಕ್ಷ ರೂ. ಸಂಗ್ರಹವಾಗಿದೆ.</p><img><p>ವಿಶ್ವ ಹಿಂದೂ ಪರಿಷದ್ ಮತ್ತು ಭಜರಂಗದಳದ ಆಶ್ರಯದಲ್ಲಿ ಚಿತ್ರದುರ್ಗ ನಗರದಲ್ಲಿ ನಡೆದ 18 ದಿನಗಳ ಕಾಲದ ಹಿಂದೂ ಮಹಾಗಣಪತಿ ಉತ್ಸವದಲ್ಲಿ ಸಂಗ್ರಹವಾದ ಕಾಣಿಕೆ ಪೆಟ್ಟಿಗೆಯ ಹಣವನ್ನು ಎಣಿಕೆ ಮಾಡಲಾಗಿದೆ.</p><img><p>ಹಿಂದೂ ಮಹಾಗಣಪತಿ ಸಮಿತಿಯಿಂದ ನಡೆದ ಈ ಎಣಿಕೆಯಲ್ಲಿ ಕಾಣಿಕೆ ಪೆಟ್ಟಿಗೆಯಲ್ಲಿ ಒಟ್ಟು 15 ಲಕ್ಷ ರೂಪಾಯಿ ಸಂಗ್ರಹವಾಗಿದ್ದು, ಇದರಲ್ಲಿ 12.50 ಲಕ್ಷ ರೂ. ನೋಟುಗಳ ರೂಪದಲ್ಲಿದ್ದರೆ, 2.50 ಲಕ್ಷ ರೂ. ಚಿಲ್ಲರೆ ಹಣ ಸಂಗ್ರಹವಾಗಿದೆ.</p><img><p>ಪ್ರತಿ ವರ್ಷದಂತೆ ಈ ಬಾರಿಯೂ ಕಾಣಿಕೆ ಪೆಟ್ಟಿಗೆಯ ಹಣವನ್ನು ಸಾಂಪ್ರದಾಯಿಕ ಹರಾಜಿನ ಮೂಲಕ ಭಕ್ತರು ಕೂಗಿ ಪಡೆಯಲಿದ್ದಾರೆ. 18 ದಿನಗಳ ಕಾಲ ನಡೆದ ಮಹಾಗಣಪತಿ ಪ್ರತಿಷ್ಠಾಪನೆಯ ಸಂದರ್ಭದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಜರುಗಿದ್ದವು.</p><img><p>ಸೆಪ್ಟೆಂಬರ್ 13ರಂದು ನಡೆದ ಶೋಭಾಯಾತ್ರೆಯಲ್ಲಿ ಲಕ್ಷಾಂತರ ಭಕ್ತರು ಭಾಗವಹಿಸಿದ್ದರು.ಈ ಉತ್ಸವದ ಯಶಸ್ವಿಯಾದ ಆಯೋಜನೆಗೆ ಸಮಿತಿಯ ಸದಸ್ಯರು ಹಾಗೂ ಭಕ್ತಾದಿಗಳ ಸಹಕಾರವೇ ಕಾರಣ ಎಂದು ಆಯೋಜಕರು ತಿಳಿಸಿದ್ದಾರೆ.</p>
Source link
ಚಿತ್ರದುರ್ಗದಲ್ಲಿ ನಡೆದ ಹಿಂದೂ ಮಹಾಗಣಪತಿ ಉತ್ಸವದಲ್ಲಿ ಭಕ್ತರಿಂದ ಕಾಣಿಕೆ ಪೆಟ್ಟಿಗೆಯಲ್ಲಿ 15 ಲಕ್ಷ ರೂ. ಸಂಗ್ರಹ!