Headlines

BJP MP Sudhakar election case ಸಂಸದ ಸುಧಾಕರ್ ಗೆ ಜಯ, 4.8 ಕೋಟಿ ರೂ. ನಗದು ಪ್ರಕರಣ ರದ್ದುಗೊಳಿಸಿದ ಹೈಕೋರ್ಟ್! | Big Relief For Bjp Mp Sudhakar High Court Quashes Fir Cash Seizure Case Gow

BJP MP Sudhakar election case ಸಂಸದ ಸುಧಾಕರ್ ಗೆ ಜಯ, 4.8 ಕೋಟಿ ರೂ. ನಗದು ಪ್ರಕರಣ ರದ್ದುಗೊಳಿಸಿದ ಹೈಕೋರ್ಟ್! | Big Relief For Bjp Mp Sudhakar High Court Quashes Fir Cash Seizure Case Gow



BJP MP Sudhakar election case ಸಂಸದ ಸುಧಾಕರ್ ಗೆ ಜಯ, 4.8 ಕೋಟಿ ರೂ. ನಗದು ಪ್ರಕರಣ ರದ್ದುಗೊಳಿಸಿದ ಹೈಕೋರ್ಟ್! | Big Relief For Bjp Mp Sudhakar High Court Quashes Fir Cash Seizure Case Gow

ಲೋಕಸಭಾ ಚುನಾವಣೆ ವೇಳೆ 4.8 ಕೋಟಿ ರೂ. ನಗದು ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿಕ್ಕಬಳ್ಳಾಪುರ ಸಂಸದ ಡಾ. ಕೆ. ಸುಧಾಕರ್ ವಿರುದ್ಧ ದಾಖಲಾಗಿದ್ದ ಎಫ್‌ಐಆರ್ ಅನ್ನು ಕರ್ನಾಟಕ ಹೈಕೋರ್ಟ್ ರದ್ದುಗೊಳಿಸಿದೆ. 

 ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಬಿಜೆಪಿ ಸಂಸದ ಡಾ ಕೆ ಸುಧಾಕರ್ ಬಿಗ್ ರಿಲೀಫ್ ಸಿಕ್ಕಿದೆ. ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಸುಧಾಕರ್ ವಿರುದ್ಧ ದಾಖಲಿಸಲಾಗಿದ್ದ ಎಫ್‌ಐಆರ್ ಪ್ರಕರಣವನ್ನು ಹೈಕೋರ್ಟ್ ರದ್ದುಗೊಳಿಸಿದೆ. ಚುನಾವಣೆ ಸಮಯದಲ್ಲಿ ಮಾದಾವರ ಬಳಿ 4.8 ಕೋಟಿ ರೂಪಾಯಿ ನಗದು ಪತ್ತೆಯಾದ ಪ್ರಕರಣ ದೇಶಾದ್ಯಂತ ಸಂಚಲನ ಸೃಷ್ಟಿಸಿತ್ತು. ಈ ಹಣ ಸಂಸದ ಡಾ. ಸುಧಾಕರ್ ಅವರದ್ದೇ ಎಂದು ಶಂಕೆ ವ್ಯಕ್ತವಾಗಿತ್ತು. ಈ ಹಿನ್ನೆಲೆಯಲ್ಲಿ ಚುನಾವಣಾ ಅಧಿಕಾರಿಗಳ ದೂರು ಆಧರಿಸಿ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಯಿತು.

ಹೈಕೋರ್ಟ್ ತೀರ್ಪು

ಪ್ರಕರಣವನ್ನು ರದ್ದುಪಡಿಸಬೇಕು ಎಂದು ಡಾ. ಸುಧಾಕರ್ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಮೂರ್ತಿ ಎಂ.ಐ. ಅರುಣ್ ಪೀಠ ಅಂತಿಮವಾಗಿ ಎಫ್‌ಐಆರ್ ರದ್ದುಪಡಿಸುವ ಆದೇಶ ಹೊರಡಿಸಿದೆ. ಅರ್ಜಿಯನ್ನು ಪರಿಶೀಲಿಸಿದ ಹೈಕೋರ್ಟ್, ಪ್ರಾಥಮಿಕ ಸಾಕ್ಷ್ಯಾಧಾರಗಳ ಕೊರತೆ ಮತ್ತು ಕಾನೂನು ಪ್ರಕ್ರಿಯೆಯ ಅಸಂಗತತೆಗಳನ್ನು ಉಲ್ಲೇಖಿಸಿ ಎಫ್‌ಐಆರ್‌ನ್ನು ರದ್ದುಪಡಿಸಿದೆ. ಇದರಿಂದಾಗಿ ಸಂಸದ ಡಾ. ಸುಧಾಕರ್‌ಗೆ ತಾತ್ಕಾಲಿಕ ದೊಡ್ಡ ಶಾಂತಿ ಸಿಕ್ಕಂತಾಗಿದೆ.

ಪ್ರಕರಣದ ಹಿನ್ನೆಲೆ

  • 2024ರ ಲೋಕಸಭಾ ಚುನಾವಣೆ ವೇಳೆ ಮಾದನಾಯಕನಹಳ್ಳಿ ಪ್ರದೇಶದಲ್ಲಿ ದಾಳಿ ನಡೆದಿತ್ತು.
  • ಆ ವೇಳೆ ಮನೆಯಲ್ಲಿ 4 ಕೋಟಿ ರೂ. ಹೆಚ್ಚು ನಗದು ಪತ್ತೆಯಾಗಿತ್ತು.
  • ಈ ಹಣ ಚುನಾವಣಾ ಪ್ರಚಾರಕ್ಕಾಗಿ ಬಳಸಲು ಸಂಗ್ರಹಿಸಲಾಗಿದೆ ಎಂದು ಶಂಕೆ ಹುಟ್ಟಿತ್ತು.
  • ಫ್ಲೈಯಿಂಗ್ ಸ್ಕ್ವಾಡ್ ದೂರು ದಾಖಲಿಸಿದ ಹಿನ್ನೆಲೆಯಲ್ಲಿ ಪ್ರಕರಣ ಎಫ್‌ಐಆರ್ ಆಗಿ ಪರಿವರ್ತನೆಯಾಗಿತ್ತು.

ರಾಜಕೀಯ ಪ್ರತಿಕ್ರಿಯೆಗಳು

ಈ ಪ್ರಕರಣ ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿತ್ತು. ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳು ಇದನ್ನು ಬಿಜೆಪಿ ವಿರುದ್ಧ ರಾಜಕೀಯ ಅಸ್ತ್ರವಾಗಿ ಬಳಸಿದ್ದವು. ಆದರೆ ಹೈಕೋರ್ಟ್ ತೀರ್ಪಿನಿಂದ ಬಿಜೆಪಿ ಶಿಬಿರದಲ್ಲಿ ಸಂತೋಷ ವ್ಯಕ್ತವಾಗಿದೆ.

ಹೈಕೋರ್ಟ್ ತೀರ್ಪಿನೊಂದಿಗೆ ಡಾ. ಸುಧಾಕರ್ ವಿರುದ್ಧದ ಪ್ರಕರಣ ಮುಗಿದಂತಾದರೂ, ರಾಜಕೀಯವಾಗಿ ಈ ವಿಷಯವು ಇನ್ನೂ ಚರ್ಚೆಗೆ ಗ್ರಾಸವಾಗುವ ಸಾಧ್ಯತೆ ಇದೆ. ಚುನಾವಣಾ ಸಮಯದಲ್ಲಿ ಅಕ್ರಮ ಹಣ ಬಳಕೆಯ ಬಗ್ಗೆ ರಾಜಕೀಯ ಪಕ್ಷಗಳು ಪರಸ್ಪರ ಆರೋಪ-ಪ್ರತ್ಯಾರೋಪಗಳನ್ನು ಮುಂದುವರೆಸುವ ನಿರೀಕ್ಷೆಯಿದೆ.



Source link

Leave a Reply

Your email address will not be published. Required fields are marked *