Bengaluru: ಹುಡುಗಿಗಾಗಿ ನಡುರಸ್ತೆಯಲ್ಲಿ ಗೆಳೆಯನೊಂದಿಗೆ ಹೊಡೆದಾಡಿಕೊಂಡ ASI ಪುತ್ರ

Bengaluru: ಹುಡುಗಿಗಾಗಿ ನಡುರಸ್ತೆಯಲ್ಲಿ ಗೆಳೆಯನೊಂದಿಗೆ ಹೊಡೆದಾಡಿಕೊಂಡ ASI ಪುತ್ರ



Bengaluru: ಹುಡುಗಿಗಾಗಿ ನಡುರಸ್ತೆಯಲ್ಲಿ ಗೆಳೆಯನೊಂದಿಗೆ ಹೊಡೆದಾಡಿಕೊಂಡ ASI ಪುತ್ರ
<p>ಗೆಳೆಯನೊಂದಿಗೆ ಹೊಡೆದಾಡಿಕೊಂಡ ASI ಪುತ್ರ: &nbsp;ಬೆಂಗಳೂರಿನ ಹೆಣ್ಣೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಯುವತಿಯ ವಿಚಾರವಾಗಿ ಎಎಸ್‌ಐ ಪುತ್ರ ಅರ್ಮಾನ್ ಮತ್ತು ಸೈಯದ್ ಅಜರುದ್ದೀನ್ ನಡುವೆ ನಡೆದ ಈ ಗಲಾಟೆಯಲ್ಲಿ ಇಬ್ಬರೂ ಗಾಯಗೊಂಡಿದ್ದು, ಈ ಸಂಬಂಧ ದೂರು ಪ್ರತಿದೂರು ದಾಖಲಾಗಿದೆ.</p><img><p>ಬೆಂಗಳೂರಿನಲ್ಲಿ ಹುಡುಗಿಯ ವಿಚಾರಕ್ಕಾಗಿ ಯುವಕರಿಬ್ಬರು ಗಲಾಟೆ ಮಾಡಿಕೊಂಡಿರುವ ಘಟನೆ ಹೆಣ್ಣೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಈ ಸಂಬಂಧ ದೂರು ಪ್ರತಿದೂರು ದಾಖಲಾಗಿದ್ದು, ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ</p><img><p>ಶನಿವಾರ ಮಧ್ಯಾಹ್ನ ASI ಪುತ್ರ ಅರ್ಮಾನ್ ಮತ್ತು ಸೈಯದ್ ಅಜರುದ್ದೀನ್ ಇಬ್ಬರು ಜೊತೆಯಾಗಿ ಒಂದೇ ಬೈಕ್‌ನಲ್ಲಿ ಅಂಜಿನಪ್ಪ ಬಡಾವಣೆಯ ಬೇಕರಿ ಬಳಿ ಬಂದಿದ್ದಾರೆ. ಈ ವೇಳೆ ಹುಡುಗಿಯ ವಿಷಯಕ್ಕಾಗಿ ಮಾತಿಗೆ ಮಾತು ಬೆಳೆದು ಜಗಳ ಶುರುವಾಗಿದೆ. ನೋಡ ನೋಡುತ್ತಿದ್ದಂತೆ ಅರ್ಮಾನ್ ಮತ್ತು ಸೈಯದ್ ಅಜರುದ್ಧೀನ್ ರಕ್ತ ಬರುವಂತೆ ಹೊಡೆದಾಡಿಕೊಂಡಿದ್ದಾರೆ.</p><img><p>ಅರ್ಮಾನ್ ಸಂಬಂಧಿಯಾಗಿರುವ ಯುವತಿಯೊಂದಿಗೆ ಸೈಯದ್ ಅಜರುದ್ದೀನ್ ಮಾತನಾಡುತ್ತಿದ್ದನು. ಇದೇ ವಿಚಾರಕ್ಕೆ ಇಬ್ಬರ ನಡುವೆ ಮಾತಿಗೆ ಮಾತು ಬೆಳೆದಿದೆ. ನಡುರಸ್ತೆಯಲ್ಲಿ ಯುವಕರಿಬ್ಬರು ಹೊಡೆದಾಡಿಕೊಳ್ಳುತ್ತಿದ್ರೂ ಜನರು ಮಾತ್ರ ನೋಡುತ್ತಾ ನಿಂತಿದ್ರೆ, ಕೆಲವರು ಈ ಎಲ್ಲಾ ದೃಶ್ಯಗಳನ್ನು ಮೊಬೈಲ್‌ನಲ್ಲಿ ಸೆರೆ ಹಿಡಿದುಕೊಂಡಿದ್ದಾರೆ.</p><p><strong>ಇದನ್ನೂ ಓದಿ: </strong><strong>ರಸ್ತೆ ಗುಂಡಿಗೆ ಬೇಸತ್ತ ಕಂಪನಿಗೆ ಆಂಧ್ರ ಆಹ್ವಾನ: ಡಿ.ಕೆ.ಶಿವಕುಮಾರ್‌ ಹೇಳಿದ್ದೇನು?</strong></p><img><p>ವಿಷಯ ತಿಳಿಯುತ್ತಿದ್ದಂತೆ ಕುಟುಂಬಸ್ಥರು ಸ್ಥಳಕ್ಕೆ ಬಂದು ಯುವಕರಿಬ್ಬರನ್ನು ಕರೆದುಕೊಂಡು ಹೋಗಿದ್ದಾರೆ. ಇಬ್ಬರ ಕಡೆಯಿಂದಲೂ ದೂರು ದಾಖಲಾಗಿದೆ. ಅರ್ಮಾನ್ ಎಂಬ ಯುವಕ ಹೆಚ್‌ಎಎಲ್ ಪೊಲೀಸ್ ಠಾಣೆಯ ಎಎಸ್‌ಐ ಅವರ ಪುತ್ರ ಎಂದು ತಿಳಿದು ಬಂದಿದೆ.</p><p><strong>ಇದನ್ನೂ ಓದಿ: </strong><strong>ಬೆಂಗಳೂರಿನ ನಡುರಸ್ತೆಯಲ್ಲಿ ಹಾಸಿಗೆ ಹಾಕಿ ಫಿಲ್ಮ್‌ ಸ್ಟೈಲ್‌ನಲ್ಲಿ ಮಲಗಿದ ವ್ಯಕ್ತಿ, ವೈರಲ್ ವಿಡಿಯೋಗೆ ಪೊಲೀಸರ ಕಮೆಂಟ್‌!</strong></p>



Source link

Leave a Reply

Your email address will not be published. Required fields are marked *