Headlines

Karnataka caste Politics: ಜಾತಿ ಹೆಸರಲ್ಲಿ ಸಮಾವೇಶ ತಪ್ಪುಸಂದೇಶ: ಹೊರಟ್ಟಿ ತೀವ್ರ ಬೇಸರ | Basavaraj Horatti Upset About Convention In The Name Of Caste

Karnataka caste Politics: ಜಾತಿ ಹೆಸರಲ್ಲಿ ಸಮಾವೇಶ ತಪ್ಪುಸಂದೇಶ: ಹೊರಟ್ಟಿ ತೀವ್ರ ಬೇಸರ | Basavaraj Horatti Upset About Convention In The Name Of Caste



Karnataka caste Politics: ಜಾತಿ ಹೆಸರಲ್ಲಿ ಸಮಾವೇಶ ತಪ್ಪುಸಂದೇಶ: ಹೊರಟ್ಟಿ ತೀವ್ರ ಬೇಸರ | Basavaraj Horatti Upset About Convention In The Name Of Caste

ಸಭಾಪತಿ ಬಸವರಾಜ ಹೊರಟ್ಟಿ ಅವರು ರಾಜ್ಯದಲ್ಲಿ ಹೆಚ್ಚುತ್ತಿರುವ ಜಾತಿ ಸಮಾವೇಶಗಳ ಬಗ್ಗೆ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. ಜಾತ್ಯತೀತರೆಂದು ಹೇಳಿಕೊಳ್ಳುವ ನಾಯಕರೇ ಇಂತಹ ಸಮಾವೇಶಗಳ ಮೂಲಕ ಮುಂದಿನ ಪೀಳಿಗೆಯಲ್ಲಿ ಜಾತಿವಾದವನ್ನು ಬಿತ್ತುತ್ತಿದ್ದಾರೆ ಎಂದು ಅವರು ಆರೋಪಿಸಿದ್ದಾರೆ. 

ಹುಬ್ಬಳ್ಳಿ (ಸೆ.19): ಜಾತ್ಯತೀತರು ಎಂದು ಹೇಳುತ್ತಲೇ ಮುಂದಿನ ಪೀಳಿಗೆಯನ್ನು ಇನ್ನಷ್ಟು ಜಾತಿವಾದಿಗಳನ್ನಾಗಿ ಮಾಡುತ್ತಿದ್ದೇವೆ. ಜಾತಿ ಸಮಾವೇಶಗಳಿಂದ ತಪ್ಪು ಸಂದೇಶ ಹೋಗುತ್ತಿದೆ ಎಂದು ಸಭಾಪತಿ ಬಸವರಾಜ ಹೊರಟ್ಟಿ ತೀವ್ರ ಬೇಸರ ವ್ಯಕ್ತಪಡಿಸಿದರು.

ರಾಜ್ಯ ಸರ್ಕಾರ ಆರ್ಥಿಕ, ಸಾಮಾಜಿಕ ಸಮೀಕ್ಷೆಯ ಗಣತಿಗೆ ಮುಂದಾಗುತ್ತಿದ್ದಂತೆ ರಾಜ್ಯದ ಎಲ್ಲೆಡೆ ಈಗ ‘ಜಾತಿ ಸಮಾವೇಶ’ಗಳ ಅಬ್ಬರ ಕೇಳಿಬರುತ್ತಿರುವ ಹಿನ್ನಲೆಯಲ್ಲಿ ಕನ್ನಡಪ್ರಭದೊಂದಿಗೆ ತಮ್ಮ ನೋವು ತೋಡಿಕೊಂಡ ಅವರು, ಜಾತಿ ಜಾತಿ ಎಂದು ಬಡಿದಾಡಿ ಏನನ್ನು ಸಾಧಿಸ ಹೊರಟಿದ್ದೇವೆ? ಎಂದು ಪ್ರಶ್ನಿಸಿದರು.

ಸಮಾಜಕ್ಕೆ ಮಾರ್ಗದರ್ಶನ ಮಾಡಬೇಕಿದ್ದ ಮಠಾಧೀಶರು, ರಾಜ್ಯಭಾರ ಮಾಡಿದ, ಮಾಡುತ್ತಿರುವ ಮಂತ್ರಿ-ಮಹೋದಯರು, ಮುಖಂಡರು, ಗಣ್ಯರು ಎನಿಸಿಕೊಂಡವರು ಇಂದು ತಮ್ಮ ತಮ್ಮ ಜಾತಿಗಳ ಜನರನ್ನು ದೊಡ್ಡ ಸಂಖ್ಯೆಯಲ್ಲಿ ಕೂಡಿಸಿ ಸಮಾವೇಶ ಮಾಡುವ ಮೂಲಕ ಅವರಿಗೆ ಜಾತಿಯ ವಿಷಯವನ್ನು ಒತ್ತಿ ಒತ್ತಿ ಹೇಳುತ್ತಿದ್ದಾರೆ. ಬೇರೆ ಸಮುದಾಯದವರನ್ನು ದ್ವೇಷಿಸುವಂತೆ ಮಾಡುತ್ತಿದ್ದಾರೆ. ಹಾಗಿದ್ದರೆ ಇವರೆಲ್ಲ ಬೇರೆ ವೇದಿಕೆಗಳಲ್ಲಿ ಜಾತ್ಯತೀತೆಯ ಭಾಷಣ ಬಿಗಿಯುವುದು ಬೂಟಾಟಿಕೆ ಅನಿಸುವುದಿಲ್ಲವೇ? ಎಂದರು.

ಹಿಂದೆ ನಾನು ಯಾರೋ ಒತ್ತಾಯ ಮಾಡಿದರು ಎನ್ನುವ ಕಾರಣಕ್ಕೆ ಒಂದು ಸಮಾವೇಶದಲ್ಲಿ ಭಾಗವಹಿಸಿದ್ದೆ. ಆ ಬಳಿಕ ಯಾವುದೇ ಜಾತಿ ಸಮಾವೇಶದಲ್ಲಿ ಭಾಗಿಯಾಗಿಲ್ಲ, ಮುಂದೆಯೂ ಯಾವುದೇ ಜಾತಿಯ ಸಮಾವೇಶದಲ್ಲಿ ಭಾಗವಹಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ ಬಸವರಾಜ ಹೊರಟ್ಟಿ, ಜಾತಿವಿನಾಶದಿಂದ ಮಾತ್ರ ಶಾಂತಿ, ಸಮಾನತೆ, ಸಹೋದರತ್ವ ಬೆಳೆಯಲು ಸಾಧ್ಯ ಎಂದು ಹೇಳಿದರು.



Source link

Leave a Reply

Your email address will not be published. Required fields are marked *