
ಈ ಡಬಲ್ ಇಂಜಿನ್ ಹೆಲಿಕಾಪ್ಟರ್ ಆಧುನಿಕ ಸುರಕ್ಷಾ ವ್ಯವಸ್ಥೆಯನ್ನು ಹೊಂದಿದ್ದು, ಐವರು ಪ್ರಯಾಣಿಕರು ಮತ್ತು ಇಬ್ಬರು ಪೈಲಟ್ಗಳು ಪ್ರಯಾಣಿಸಬಹುದಾಗಿದೆ. ಚಾಪರ್ ಸೀಟ್ ಸೌಲಭ್ಯವಿರುವ ಈ ಹೆಲಿಕಾಪ್ಟರ್ ಅಪಘಾತದ ಸಂದರ್ಭದಲ್ಲಿ ಪ್ರಯಾಣಿಕರಿಗೆ ಸುರಕ್ಷತೆ ಒದಗಿಸುತ್ತದೆ. ಇದರ ಜೊತೆಗೆ, ಸುಧಾರಿತ ವೈರ್ಲೆಸ್ ಸಂವಹನ ವ್ಯವಸ್ಥೆಯನ್ನೂ ಹೊಂದಿದೆ.
ಸತೀಶ್ ಜಾರಕಿಹೊಳಿ ಅವರು ಈ ಸಂಬಂಧ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ, ಫೋಟೋ ಮತ್ತು ವಿಡಿಯೋ ಹಂಚಿಕೊಂಡಿದ್ದು, “ಶೀಘ್ರವೇ ನಮ್ಮ ಹೊಸ ಹೆಲಿಕಾಪ್ಟರ್ ಹಾರಾಟಕ್ಕೆ ಸಿದ್ಧವಾಗಲಿದೆ,” ಎಂದು ಬರೆದಿದ್ದಾರೆ. ಈ ವೇಳೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಸುನೀಲ್ ಹನಮಣ್ಣರ ಮತ್ತು ಅಲಿ ಗೊರವನಕೊಳ್ಳ ಉಪಸ್ಥಿತರಿದ್ದರು.