'ಹೇಗಾದರೂ ಮಾಡಿದ ಪಾಕಿಸ್ತಾನ ಎದುರು ಈತನಿಗೆ ಚಾನ್ಸ್ ಕೊಡಿ': ಇರ್ಫಾನ್ ಪಠಾಣ್ ಹೀಗೆ ಹೇಳಿದ್ದು ಯಾರಿಗೆ?

'ಹೇಗಾದರೂ ಮಾಡಿದ ಪಾಕಿಸ್ತಾನ ಎದುರು ಈತನಿಗೆ ಚಾನ್ಸ್ ಕೊಡಿ': ಇರ್ಫಾನ್ ಪಠಾಣ್ ಹೀಗೆ ಹೇಳಿದ್ದು ಯಾರಿಗೆ?



'ಹೇಗಾದರೂ ಮಾಡಿದ ಪಾಕಿಸ್ತಾನ ಎದುರು ಈತನಿಗೆ ಚಾನ್ಸ್ ಕೊಡಿ': ಇರ್ಫಾನ್ ಪಠಾಣ್ ಹೀಗೆ ಹೇಳಿದ್ದು ಯಾರಿಗೆ?
<p>ದುಬೈ: ಏಷ್ಯಾಕಪ್ ಟೂರ್ನಿಯ ಸೂಪರ್-4 ಪಂದ್ಯದಲ್ಲಿಂದು ಭಾರತ ಹಾಗೂ ಪಾಕಿಸ್ತಾನ ತಂಡಗಳು ಮುಖಾಮುಖಿಯಾಗುತ್ತಿವೆ. ಈ ಪಂದ್ಯದಲ್ಲಿ ಭಾರತದ ಆಡುವ ಹನ್ನೊಂದರ ಬಳಗದಲ್ಲಿ ಈ ಆಟಗಾರನಿಗೆ ಛಾನ್ಸ್ ಕೊಡಿ ಎಂದು ಮಾಜಿ ಕ್ರಿಕೆಟಿಗ ಇರ್ಫಾನ್ ಪಠಾಣ್ ಟೀಮ್‌ ಮ್ಯಾನೇಜ್‌ಮೆಂಟ್‌ಗೆ ಮನವಿ ಮಾಡಿಕೊಂಡಿದ್ದಾರೆ.</p><p>&nbsp;</p><img><p>ಏಷ್ಯಾಕಪ್ ಟೂರ್ನಿಯಲ್ಲಿಂದು ಭಾರತ-ಪಾಕಿಸ್ತಾನ ಹೈವೋಲ್ಟೇಜ್ ಪಂದ್ಯ ನಡೆಯಲಿದೆ. ಇಂದು 8 ಗಂಟೆಯಿಂದ ದುಬೈ ಅಂತಾರಾಷ್ಟ್ರೀಯ ಮೈದಾನದಲ್ಲಿ ಕ್ರಿಕೆಟ್ ಜಗತ್ತಿನ ಬದ್ದ ಎದುರಾಳಿಗಳಾದ ಭಾರತ ಹಾಗೂ ಪಾಕಿಸ್ತಾನ ತಂಡಗಳು ಕಾದಾಡಲಿವೆ.</p><img><p>ಈ ಮೊದಲು ಸೆಪ್ಟೆಂಬರ್ 14ರಂದು ಗ್ರೂಪ್ ಹಂತದಲ್ಲಿ ಭಾರತ ಹಾಗೂ ಪಾಕಿಸ್ತಾನ ತಂಡಗಳು ದುಬೈ ಅಂತಾರಾಷ್ಟ್ರೀಯ ಮೈದಾನದಲ್ಲೇ ಮುಖಾಮುಖಿಯಾಗಿದ್ದವು. ಆಗ ಪಾಕಿಸ್ತಾನವನ್ನು ಭಾರತ ಅನಾಯಾಸವಾಗಿ ಸೋಲಿಸಿತ್ತು.</p><img><p>ಫೈನಲ್ ಪ್ರವೇಶಿಸುವ ನಿಟ್ಟಿನಲ್ಲಿ ಇಂದು ನಡೆಯಲಿರುವ ಪಂದ್ಯವು ಉಭಯ ತಂಡಗಳ ಪಾಲಿಗೆ ಸಾಕಷ್ಟು ಮಹತ್ವದ್ದೆನಿಸಿದೆ. ಆದರೆ ಇಂದಿನ ಪಂದ್ಯದಲ್ಲಿ ಭಾರತ ಕೆಲವು ಬದಲಾವಣೆಗಳೊಂದಿಗೆ ಕಣಕ್ಕಿಳಿಯುವ ಸಾಧ್ಯತೆ ದಟ್ಟವಾಗಿದೆ.</p><img><p>ಒಮಾನ್ ಎದುರು ಭಾರತ ಎರಡು ಬದಲಾವಣೆಗಳೊಂದಿಗೆ ಕಣಕ್ಕಿಳಿದಿತ್ತು. ಬುಮ್ರಾ, ವರುಣ್ ಚಕ್ರವರ್ತಿಗೆ ವಿಶ್ರಾಂತಿ ನೀಡಿ, ಹರ್ಷಿತ್ ರಾಣಾ ಹಾಗೂ ಅರ್ಶದೀಪ್‌ ಸಿಂಗ್‌ಗೆ ಆಡುವ ಹನ್ನೊಂದರ ಬಳಗದಲ್ಲಿ ಸ್ಥಾನ ನೀಡಲಾಗಿತ್ತು. ಆದರೆ ಇಂದು ಬುಮ್ರಾ ಹಾಗೂ ವರುಣ್ ಚಕ್ರವರ್ತಿ ಕಮ್‌ಬ್ಯಾಕ್ ಮಾಡುವ ಸಾಧ್ಯತೆಯಿದೆ.</p><img><p>ಇನ್ನು ಇದೆಲ್ಲದರ ನಡುವೆ ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ಇರ್ಫಾನ್ ಪಠಾಣ್, ಪಾಕಿಸ್ತಾನ ಎದುರು ಇಂದು ನಡೆಯಲಿರುವ ಪಂದ್ಯದಲ್ಲಿ ಹೇಗಾದರೂ ಮಾಡಿ ಆಡುವ ಹನ್ನೊಂದರ ಬಳಗದಲ್ಲಿ ಅರ್ಶದೀಪ್ ಸಿಂಗ್‌ಗೆ ಸ್ಥಾನ ನೀಡಿ ಎಂದು ಟೀಮ್ ಮ್ಯಾನೇಜ್‌ಮೆಂಟ್ ಬಳಿ ಮನವಿ ಮಾಡಿಕೊಂಡಿದ್ದಾರೆ.</p><img><p>ನಾನು ಏಷ್ಯಾಕಪ್ ಆರಂಭದಿಂದಲೂ ಹೇಳುತ್ತಲೇ ಬಂದಿದ್ದೇನೆ. ಅರ್ಶದೀಪ್ ಸಿಂಗ್ ಅವರನ್ನು ಬುಮ್ರಾ ಜತೆಗೆ ಆಡಿಸಬೇಕು.</p><img><p>ಯಾಕೆಂದರೆ ಕೆಲವೊಮ್ಮೆ ಎರಡು ತಜ್ಞ ವೇಗದ ಬೌಲರ್‌ಗಳು ಬಳಸಬೇಕಾದ ಸಂದರ್ಭ ಬಂದು ಬಿಡುತ್ತದೆ. ಚೆಂಡು ಹಿಡಿತಕ್ಕೆ ಸಿಗದಿದ್ದಾಗ ಹಾರ್ದಿಕ್ ಪಾಂಡ್ಯ ಅಥವಾ ಶಿವಂ ದುಬೆ ಅವರಿಂದ ಓವರ್‌ನಲ್ಲಿ ಆರು ಯಾರ್ಕರ್‌ ಬಾಲ್ ನಿರೀಕ್ಷಿಸಲು ಸಾಧ್ಯವಿಲ್ಲ ಎಂದಿದ್ದಾರೆ.</p><img><p>ಏಷ್ಯಾಕಪ್ ಟೂರ್ನಿಯಲ್ಲಿ ಓಮಾನ್ ಎದುರು ಕಣಕ್ಕಿಳಿದಿದ್ದ ಅರ್ಶದೀಪ್ ಸಿಂಗ್ ಕೇವಲ ಒಂದು ವಿಕೆಟ್ ಕಬಳಿಸಲಷ್ಟೇ ಶಕ್ತರಾಗಿದ್ದರು. ಈ ಮೂಲಕ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ನಲ್ಲಿ 100 ವಿಕೆಟ್ ಕಬಳಿಸಿದ ಭಾರತದ ಮೊದಲ ಬೌಲರ್ ಎನಿಸಿಕೊಂಡಿದ್ದರು.</p>



Source link

Leave a Reply

Your email address will not be published. Required fields are marked *