ಚಿಕ್ಕಮಗಳೂರಿನಿಂದ ಬಂದು ಬೇಲೂರು ಗಣಪನಿಗೆ ಚಪ್ಪಲಿ ಹಾಕಿಹೋದ ಮಾನಸಿಕ ಅಸ್ವಸ್ಥೆ, ಈಗ ಪೊಲೀಸರಿಗೆ ಲಾಕ್! | Chikkamagaluru Woman Detained For Placing Slippers On Belur Temple Deity Sat Intl

ಚಿಕ್ಕಮಗಳೂರಿನಿಂದ ಬಂದು ಬೇಲೂರು ಗಣಪನಿಗೆ ಚಪ್ಪಲಿ ಹಾಕಿಹೋದ ಮಾನಸಿಕ ಅಸ್ವಸ್ಥೆ, ಈಗ ಪೊಲೀಸರಿಗೆ ಲಾಕ್! | Chikkamagaluru Woman Detained For Placing Slippers On Belur Temple Deity Sat Intl



ಚಿಕ್ಕಮಗಳೂರಿನಿಂದ ಬಂದು ಬೇಲೂರು ಗಣಪನಿಗೆ ಚಪ್ಪಲಿ ಹಾಕಿಹೋದ ಮಾನಸಿಕ ಅಸ್ವಸ್ಥೆ, ಈಗ ಪೊಲೀಸರಿಗೆ ಲಾಕ್! | Chikkamagaluru Woman Detained For Placing Slippers On Belur Temple Deity Sat Intl

ಬೇಲೂರಿನ ಪ್ರಸಿದ್ಧ ಚೆನ್ನಕೇಶವ ದೇವಾಲಯದ ಗಣಪತಿ ವಿಗ್ರಹಕ್ಕೆ ಚಪ್ಪಲಿ ಹಾಕಿ ಅಪಮಾನ ಮಾಡಿದ್ದ ಚಿಕ್ಕಮಗಳೂರಿನ ಮಹಿಳೆಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸಿಸಿಟಿವಿ ದೃಶ್ಯಾವಳಿಗಳ ಆಧಾರದ ಮೇಲೆ ಪತ್ತೆಯಾದ ಈ ಮಹಿಳೆ ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿರಬಹುದು ಎನ್ನಲಾಗುತ್ತಿದೆ.

ಚಿಕ್ಕಮಗಳೂರು (ಸೆ.21): ಪ್ರಸಿದ್ಧ ಬೇಲೂರು ಶ್ರೀ ಚೆನ್ನಕೇಶವ ದೇವಾಲಯದ ಆವರಣದಲ್ಲಿರುವ ಗಣಪತಿ ವಿಗ್ರಹಕ್ಕೆ ಚಪ್ಪಲಿ ಹಾಕಿ ವಿವಾದ ಸೃಷ್ಟಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿಕ್ಕಮಗಳೂರಿನ ಮಹಿಳೆಯೊಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ನಗರದ ಉಂಡೆದಾಸರಹಳ್ಳಿಯ ನಿವಾಸಿಯಾಗಿರುವ ಮಹಿಳೆಯನ್ನು ಬೇಲೂರು ಪೊಲೀಸರು ವಶಕ್ಕೆ ಪಡೆದು ಮುಂದಿನ ವಿಚಾರಣೆಗಾಗಿ ಬೇಲೂರಿಗೆ ಕರೆದೊಯ್ದಿದ್ದಾರೆ.

ಘಟನೆ ಹಿನ್ನೆಲೆ

ಇತ್ತೀಚೆಗೆ ಬೇಲೂರು ದೇವಾಲಯಕ್ಕೆ ಭೇಟಿ ನೀಡಿದ್ದ ಮಹಿಳೆಯೊಬ್ಬರು ಅಲ್ಲಿನ ಗಣಪತಿ ವಿಗ್ರಹಕ್ಕೆ ಪಾದರಕ್ಷೆಗಳನ್ನು ಹಾಕಿ ಅಪಮಾನ ಮಾಡಿದ್ದರು. ಈ ಕೃತ್ಯವನ್ನು ಗಮನಿಸಿದ ದೇವಾಲಯದ ಭಕ್ತರು ಮತ್ತು ಸಿಬ್ಬಂದಿ ತಕ್ಷಣ ಪೊಲೀಸರಿಗೆ ದೂರು ನೀಡಿದ್ದರು. ಘಟನೆಯ ದೃಶ್ಯಗಳು ದೇವಾಲಯದ ಆವರಣದಲ್ಲಿದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದವು. ಈ ದೃಶ್ಯಾವಳಿಗಳನ್ನು ಆಧರಿಸಿ ಪೊಲೀಸರು ತನಿಖೆ ಆರಂಭಿಸಿದ್ದರು.

ಪೊಲೀಸ್ ಕಾರ್ಯಾಚರಣೆ

ಸಿಸಿಟಿವಿ ದೃಶ್ಯಾವಳಿಗಳಲ್ಲಿ ಸೆರೆಯಾದ ಮಹಿಳೆಯ ಬಗ್ಗೆ ಮಾಹಿತಿ ಕಲೆಹಾಕಿದ ಪೊಲೀಸರು, ಆಕೆ ಚಿಕ್ಕಮಗಳೂರಿನ ಉಂಡೆದಾಸರಹಳ್ಳಿಯ ನಿವಾಸಿ ಎಂಬುದನ್ನು ಪತ್ತೆಹಚ್ಚಿದ್ದಾರೆ. ತದನಂತರ, ಚಿಕ್ಕಮಗಳೂರು ಡಿವೈಎಸ್‌ಪಿ ಅವರ ನೇತೃತ್ವದಲ್ಲಿ ನಗರ ಪೊಲೀಸರು ಮತ್ತು ಬಸವನಹಳ್ಳಿ ಪೊಲೀಸರು ಜಂಟಿಯಾಗಿ ಕಾರ್ಯಾಚರಣೆ ನಡೆಸಿ ಮಹಿಳೆಯನ್ನು ವಶಕ್ಕೆ ಪಡೆದರು.

ಪ್ರಾಥಮಿಕ ವಿಚಾರಣೆಯ ವೇಳೆ ಮಹಿಳೆ ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದಾರೆ ಎಂದು ತಿಳಿದುಬಂದಿದೆ. ಹಾಗಾಗಿ, ಆಕೆಯ ಹೇಳಿಕೆಗಳನ್ನು ಮತ್ತು ಆಕೆಯ ಸ್ಥಿತಿಯ ಬಗ್ಗೆ ಹೆಚ್ಚಿನ ಮಾಹಿತಿ ಪಡೆಯಲು ವೈದ್ಯಕೀಯ ಪರೀಕ್ಷೆಗೆ ಒಳಪಡಿಸುವ ಸಾಧ್ಯತೆ ಇದೆ. ಈ ಘಟನೆ ಹಿಂದಿನ ಉದ್ದೇಶದ ಬಗ್ಗೆ ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

ಧಾರ್ಮಿಕ ಕೇಂದ್ರವೊಂದರಲ್ಲಿ ಇಂತಹ ಘಟನೆ ನಡೆದಿರುವುದು ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿತ್ತು. ಆದರೆ, ಮಹಿಳೆ ಮಾನಸಿಕ ಅಸ್ವಸ್ಥರು ಎಂಬ ಮಾಹಿತಿ ಹೊರಬಿದ್ದ ನಂತರ ಪರಿಸ್ಥಿತಿ ತಣ್ಣಗಾಗಿದೆ. ಪೊಲೀಸರು ಪ್ರಕರಣದ ಕುರಿತು ಕಾನೂನು ಪ್ರಕಾರ ಕ್ರಮ ಕೈಗೊಳ್ಳುತ್ತಿದ್ದಾರೆ.



Source link

Leave a Reply

Your email address will not be published. Required fields are marked *