ಜಿಎಸ್‌ಟಿ ದರ ಕಡಿತಕ್ಕೆ ನಮ್ಮ ಸಂಪೂರ್ಣ ಬೆಂಬಲವಿದೆ – ಆದರೆ, ಇದರಿಂದ ದೇಶದ ಎಲ್ಲಾ ರಾಜ್ಯಗಳಿಗೆ ಒಟ್ಟಾರೆ ಒಂದೂವರೆ ಲಕ್ಷ ಕೋಟಿ ರು.ನಷ್ಟು ವರಮಾನ ನಷ್ಟ : ಕೃಷ್ಣ ಬೈರೇಗೌಡ | Gst Rate Cut Will Lead To A Revenue Loss Of Around 1 5 Lakh Crore For All States

ಜಿಎಸ್‌ಟಿ ದರ ಕಡಿತಕ್ಕೆ ನಮ್ಮ ಸಂಪೂರ್ಣ ಬೆಂಬಲವಿದೆ – ಆದರೆ, ಇದರಿಂದ ದೇಶದ ಎಲ್ಲಾ ರಾಜ್ಯಗಳಿಗೆ ಒಟ್ಟಾರೆ ಒಂದೂವರೆ ಲಕ್ಷ ಕೋಟಿ ರು.ನಷ್ಟು ವರಮಾನ ನಷ್ಟ : ಕೃಷ್ಣ ಬೈರೇಗೌಡ | Gst Rate Cut Will Lead To A Revenue Loss Of Around 1 5 Lakh Crore For All States



ಜಿಎಸ್‌ಟಿ ದರ ಕಡಿತಕ್ಕೆ ನಮ್ಮ ಸಂಪೂರ್ಣ ಬೆಂಬಲವಿದೆ – ಆದರೆ, ಇದರಿಂದ ದೇಶದ ಎಲ್ಲಾ ರಾಜ್ಯಗಳಿಗೆ ಒಟ್ಟಾರೆ ಒಂದೂವರೆ ಲಕ್ಷ ಕೋಟಿ ರು.ನಷ್ಟು ವರಮಾನ ನಷ್ಟ : ಕೃಷ್ಣ ಬೈರೇಗೌಡ | Gst Rate Cut Will Lead To A Revenue Loss Of Around 1 5 Lakh Crore For All States

ಜಿಎಸ್‌ಟಿ ದರ ಕಡಿತಕ್ಕೆ ನಮ್ಮ ಸಂಪೂರ್ಣ ಬೆಂಬಲವಿದೆ. ಆದರೆ, ಇದರಿಂದ ದೇಶದ ಎಲ್ಲಾ ರಾಜ್ಯಗಳಿಗೆ ಒಟ್ಟಾರೆ ಒಂದೂವರೆ ಲಕ್ಷ ಕೋಟಿ ರು.ನಷ್ಟು ವರಮಾನ ನಷ್ಟವಾಗಲಿದ್ದು, ಈ ನಷ್ಟಕ್ಕೆ ಪರಿಹಾರ ಸೂತ್ರವನ್ನು ಕೇಂದ್ರ ಸರ್ಕಾರ ರೂಪಿಸಬೇಕು ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಆಗ್ರಹಿಸಿದ್ದಾರೆ.

ಬೆಂಗಳೂರು : ಜಿಎಸ್‌ಟಿ ದರ ಕಡಿತಕ್ಕೆ ನಮ್ಮ ಸಂಪೂರ್ಣ ಬೆಂಬಲವಿದೆ. ಆದರೆ, ಇದರಿಂದ ದೇಶದ ಎಲ್ಲಾ ರಾಜ್ಯಗಳಿಗೆ ಒಟ್ಟಾರೆ ಒಂದೂವರೆ ಲಕ್ಷ ಕೋಟಿ ರು.ನಷ್ಟು ವರಮಾನ ನಷ್ಟವಾಗಲಿದ್ದು, ಈ ನಷ್ಟಕ್ಕೆ ಪರಿಹಾರ ಸೂತ್ರವನ್ನು ಕೇಂದ್ರ ಸರ್ಕಾರ ರೂಪಿಸಬೇಕು ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಆಗ್ರಹಿಸಿದ್ದಾರೆ.

ನಗರದಲ್ಲಿ ಸೋಮವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಜಿಎಸ್‌ಟಿ ದರ ಕಡಿತ ಕುರಿತ ಪ್ರಶ್ನೆಗೆ ಉತ್ತರಿಸಿದರು. ಕೇಂದ್ರ ಸರ್ಕಾರದವರು ಜಿಎಸ್‌ಟಿ ದರ ಕಡಿತವನ್ನು ರಾಜ್ಯಗಳಿಗೆ ಬಹಳ ಅನ್ಯಾಯವಾಗುವ ರೀತಿಯಲ್ಲಿ ಮಾಡಿದ್ದಾರೆ. ಇದರಿಂದ ರಾಜ್ಯಗಳು ಒಂದೂವರೆ ಲಕ್ಷ ಕೋಟಿ ರು.ನಷ್ಟು ವರಮಾನ ನಷ್ಟ ಅನುಭವಿಸಲಿವೆ. ಕರ್ನಾಟಕಕ್ಕೆ 15ರಿಂದ 16 ಸಾವಿರ ಕೋಟಿ ರು.ನಷ್ಟು ಆದಾಯ ನಷ್ಟವಾಗಲಿದೆ. ರಾಜ್ಯಗಳಿಗೆ ಆಗುವ ವರಮಾನ ನಷ್ಟಕ್ಕೆ ಪರಿಹಾರ ಸೂತ್ರವನ್ನು ಕೇಂದ್ರ ಸರ್ಕಾರ ರೂಪಿಸದೆ ಹೋದರೆ ರಾಜ್ಯಗಳು ಮುಂದೆ ಸರ್ಕಾರ ನಡೆಸುವುದೇ ಕಷ್ಟವಾಗಲಿದೆ. ಇದರ ಹೊಣೆಯನ್ನು ಕೇಂದ್ರವೇ ಹೊರಬೇಕಾಗುತ್ತದೆ ಎಂದು ಎಚ್ಚರಿಸಿದರು.

ವರಮಾನ ಅಥವಾ ಆದಾಯದ ಭದ್ರತೆ ಇಲ್ಲದೆ ಸ್ವಾಯತ್ತವಾಗಿ ಯಾವ ರಾಜ್ಯ ಸರ್ಕಾರವೂ ಕೆಲಸ ಮಾಡಲು ಸಾಧ್ಯವಿಲ್ಲ. ಹಾಗಾಗಿ ಜಿಎಸ್‌ಟಿ ನಷ್ಟ ಪರಿಹಾರಕ್ಕಾಗಿ ವಿವಿಧ ಸೆಸ್‌ಗಳಿಂದ ಬರುವ ಆದಾಯವನ್ನು ರಾಜ್ಯಗಳಿಗೆ ನೀಡಬೇಕು. ಇದರಿಂದ ಕೇಂದ್ರಕ್ಕೂ ಹೊರೆ ಆಗುವುದಿಲ್ಲ ಎಂದು ರಾಜ್ಯಗಳು ಸಲಹೆ ಕೊಟ್ಟಿದ್ದೆವು. ಆದರೆ, ಕೇಂದ್ರ ಸರ್ಕಾರ ರಾಜ್ಯಗಳ ಬೇಡಿಕೆಗಳನ್ನು ಲೆಕ್ಕಕ್ಕೆ ತೆಗೆದುಕೊಳ್ಳದೆ ರಾಜ್ಯಗಳ ಹಕ್ಕುಗಳನ್ನು ಸಂಪೂರ್ಣವಾಗಿ ಮುರಿದು ಏಕಪಕ್ಷೀಯವಾಗಿ ತೀರ್ಮಾನ ಮಾಡಿದೆ. ತನ್ಮೂಲಕ ರಾಜ್ಯಗಳ ಮೇಲೆ ಹಿಡಿತ ಸಾಧಿಸುವ ಕೆಲಸವನ್ನು ಕೇಂದ್ರ ಸರ್ಕಾರ ಮಾಡುತ್ತಿದೆ ಎಂದು ಆರೋಪಿಸಿದರು.

ಜಿಎಸ್‌ಟಿ ಕಡಿತ: ಬೈಕ್‌, ಕಾರುಗಳ ಖರೀದಿಗೆ ಶೋರೂಂಗೆ ಜನರ ದಂಡು 

ನವರಾತ್ರಿ ಆರಂಭದ ಮೊದಲ ದಿನವೇ ಕೇಂದ್ರ ಸರ್ಕಾರದ ಜಿಎಸ್ಟಿ 2.0 ಅಧಿಕೃತವಾಗಿ ಜಾರಿಗೆ ಬಂದಿರುವ ಹಿನ್ನೆಲೆಯಲ್ಲಿ ಆಟೋಮೊಬೈಲ್‌ ಉಪಕರಣಗಳು, ಹಾಲಿನ ಉತ್ಪನ್ನಗಳು, ಎಲೆಕ್ಟ್ರಾನಿಕ್‌ ವಸ್ತುಗಳು, ಕೃಷಿ ಉಪಕರಣಗಳು ಹಾಗೂ ದಿನನಿತ್ಯದ ವಸ್ತುಗಳ ದರದಲ್ಲಿ ಇಳಿಕೆಯಾಗಿದ್ದು ಸೋಮವಾರ ಖರೀದಿ ಪ್ರಮಾಣದಲ್ಲೂ ಸ್ವಲ್ಪ ಮಟ್ಟಿನ ಏರಿಕೆಯಾಗಿದೆ.

ಜಿಎಸ್‌ಟಿ ಇಳಿಕೆಯಿಂದ ಬೈಕು, ಕಾರುಗಳ ಶೋ ರೂಂಗಳಲ್ಲಿ ಗ್ರಾಹಕರ ಸಂಖ್ಯೆ ಎಂದಿಗಿಂತ ಸ್ವಲ್ಪ ಹೆಚ್ಚಳವಾಗಿತ್ತು. ವಾಹನಗಳ ಕುರಿತು ವಿಚಾರಣೆ, ಬುಕಿಂಗ್‌ ಮತ್ತು ಖರೀದಿ ಪ್ರಕ್ರಿಯೆಯಲ್ಲಿ ಚೇತರಿಕೆ ಕಂಡಿತ್ತು. ವಿವಿಧ ಬೈಕುಗಳ ಬೆಲೆಯಲ್ಲಿ 6 ಸಾವಿರ ರು.ಗಳಿಂದ 11 ಸಾವಿರ ರು.ಗಳವರೆಗೆ ಕಡಿಮೆಯಾಗಿದೆ. ಈ ಹಿನ್ನೆಲೆಯಲ್ಲಿ ಶೋ ರೂಂಗಳಿಗೆ ಭೇಟಿ ನೀಡುವವರ ಸಂಖ್ಯೆಯಲ್ಲಿ ಏರಿಕೆಯಾಗಿತ್ತು.

ಕಾರುಗಳ ದರ ಇಳಿಕೆಯಾಗುವ ಕುರಿತು ಕೆಲ ಕಾರು ಕಂಪನಿಗಳು ಈಗಾಗಲೇ ಜಾಹೀರಾತುಗಳ ಮೂಲಕ ಗ್ರಾಹಕರಿಗೆ ಮಾಹಿತಿ ನೀಡಿದ್ದವು. ಹಲವು ಕಾರುಗಳ ದರದಲ್ಲಿ ಸುಮಾರು 60 ಸಾವಿರದಿಂದ 1.20 ಲಕ್ಷ ರು.ಗಳವರೆಗೆ ಬೆಲೆ ಇಳಿಕೆಯಾಗಿದೆ. ಇದರಿಂದಾಗಿ ಕಾರುಗಳ ಕುರಿತು ಮಾಹಿತಿಗಾಗಿ ಜನ ಶೋ ರೂಂಗಳತ್ತ ಬರುತ್ತಿದ್ದ ದೃಶ್ಯ ಕಂಡುಬಂತು.

ಜಿಎಸ್‌ಟಿ 2.0ನಿಂದ ಅಡುಗೆ ಮನೆಯ ಸಾಮಗ್ರಿಗಳ ಬೆಲೆಯಲ್ಲೂ ಸ್ವಲ್ವ ಇಳಿಕೆಯಾಗಿದೆ. ಮುಖ್ಯವಾಗಿ ಹಾಲಿನ ಉತ್ಪನ್ನಗಳ ಬೆಲೆಯಲ್ಲಿ ಶೇ.18 ಮತ್ತು ಶೇ.12ರಿಂದ ಶೇ.5ಕ್ಕೆ ಇಳಿಕೆಯಾಗಿದೆ. ಇದರಿಂದ ಪನ್ನೀರ್‌, ತುಪ್ಪ, ಬೆಣ್ಣೆ, ಡ್ರೈಫ್ರೂಟ್‌, ಐಸ್‌ಕ್ರೀಂ ಗಳ ಖರೀದಿಯಲ್ಲೂ ಸ್ವಲ್ಪ ಪ್ರಮಾಣದಲ್ಲಿ ಏರಿಕೆಯಾಗಿದೆ. ಶಾಂಪೂ, ಸೋಪ್‌, ಸೌಂದರ್ಯ ವರ್ಧಕಗಳ ಆನ್‌ಲೈನ್‌ ಭರಾಟೆ ಜೋರಾಗಿಯೇ ಇತ್ತು. ಹಬ್ಬದ ಹಿನ್ನೆಲೆಯಲ್ಲಿ ಹಾಲಿನ ಉತ್ಪನ್ನಗಳ ಖರೀದಿ ಇನ್ನಷ್ಟು ಹೆಚ್ಚಾಗುವ ನಿರೀಕ್ಷೆ ಇದೆ ಎನ್ನುತ್ತಾರೆ ಬೇಕರಿ ಮಾಲೀಕ ನಾರಾಯಣಸ್ವಾಮಿ.

ಹೋಟೆಲ್‌ ಉದ್ಯಮಿಗಳ ಸ್ವಾಗತ:

ಜಿಎಸ್‌ಟಿ ಇಳಿಕೆಯನ್ನು ಸ್ವಾಗತಿಸಿರುವ ಹೋಟೆಲ್‌ ಉದ್ಯಮಿಗಳು, ಅಡುಗೆ ಮಾಡಲು 60ರಿಂದ 70 ಅಡುಗೆ ಪದಾರ್ಥಗಳನ್ನು ಬಳಸುತ್ತೇವೆ. ಅದರಲ್ಲಿ 10ರಿಂದ 12 ಪದಾರ್ಥಗಳ ಬೆಲೆಯಲ್ಲಿ ಕೊಂಚ ಇಳಿಕೆಯಾಗಿದೆ. ಈಗಾಗಲೇ ಹೋಟೆಲ್‌ ಉದ್ಯಮ ನಷ್ಟದಲ್ಲಿದ್ದು, ಜಿಎಸ್‌ಟಿ ಇಳಿಕೆಯಿಂದ ಸ್ವಲ್ಪ ಚೇತರಿಕೆ ಕಾಣುಬಹುದೆಂದು ನಿರೀಕ್ಷಿಸಲಾಗಿದೆ. ಇದರಿಂದ ನಾವು ಆಹಾರ ಪದಾರ್ಥಗಳ ಬೆಲೆ ಕಡಿಮೆಗೊಳಿಸಲು ಸಾಧ್ಯವಿಲ್ಲ. ಗ್ಯಾಸ್‌ ಬೆಲೆಯಲ್ಲಿ ಇಳಿಕೆಯಾಗಿಲ್ಲ. ಮತ್ತಷ್ಟು ರಿಯಾಯ್ತಿಯನ್ನು ಹೋಟೆಲ್‌ ಉದ್ಯಮ ಎದುರು ನೋಡುತ್ತಿದೆ ಎನ್ನುತ್ತಾರೆ ಹೋಟೆಲ್‌ ಮಾಲೀಕ ಕೃಷ್ಣರಾಜ್‌.



Source link

Leave a Reply

Your email address will not be published. Required fields are marked *