Headlines

ಮಲ್ಟಿ ಮಿಲೇನಿಯರ್ ಹುಲಿ ರಂಜನ್ ಕಲ್ಕೂರ… ಉಡುಪಿ ಪಿಲಿ ನಲಿಕೆಯ ಆಕರ್ಷಣೆ ಈ ಉದ್ಯಮಿ

ಮಲ್ಟಿ ಮಿಲೇನಿಯರ್ ಹುಲಿ ರಂಜನ್ ಕಲ್ಕೂರ… ಉಡುಪಿ ಪಿಲಿ ನಲಿಕೆಯ ಆಕರ್ಷಣೆ ಈ ಉದ್ಯಮಿ



ಮಲ್ಟಿ ಮಿಲೇನಿಯರ್ ಹುಲಿ ರಂಜನ್ ಕಲ್ಕೂರ… ಉಡುಪಿ ಪಿಲಿ ನಲಿಕೆಯ ಆಕರ್ಷಣೆ ಈ ಉದ್ಯಮಿ
<p>ಅಷ್ಟಮಿ, ನವರಾತ್ರಿ ಬಂತೆಂದರೆ ಮಂಗಳೂರು, ಉಡುಪಿ ಕಡೆ ಹುಲಿ ವೇಷ ಹೆಚ್ಚು ಗಮನ ಸೆಳೆಯುತ್ತದೆ. ಅದರಲ್ಲೂ ಉಡುಪಿಯಲ್ಲಿ ಜನ್ಮಾಷ್ಟಮಿ ಸಮಯದಲ್ಲಿ ನಡೆಯುವ ವಿಟ್ಲ ಪಿಂಡಿ ಪಿಲಿನಲಿಕೆಯಲ್ಲಿ ಗಮನ ಸೆಳೆಯುವ ಹುಲಿ ರಂಜನ್ ಕಲ್ಕೂರ. ಇವರು ಅಂತಿಂಥ ಹುಲಿ ಅಲ್ಲ ಮಲ್ಟಿ ಮಿಲೇನಿಯರ್ ಹುಲಿ.</p><img><p>ನವರಾತ್ರಿ &nbsp;(Navaratri)ಹಬ್ಬ ಆರಂಭವಾಗಿದೆ. ಇನ್ನು ನಮ್ಮ ತುಳುನಾಡಿನಲ್ಲಿ ಅಂದ್ರೆ, ಮಂಗಳೂರು, ಉಡುಪಿ ಮೊದಲಾದೆಡೆ ಟಾಸೆಯ ಸದ್ದು ಕೇಳಿ ಬರುತ್ತದೆ. ಅಂದ್ರೆ ಹುಲಿ ವೇಷದ ಕುಣಿತ, ಪಿಲಿ ನಲಿಕೆ ಜೋರಾಗಿಯೇ ನಡೆಯುತ್ತದೆ. ಈ ಸಮಯದಲ್ಲಿ ಗಮನ ಸೆಳೆಯುವ ಹುಲಿ ರಂಜನ್ ಕಲ್ಕೂರ.</p><img><p>ರಂಜನ್ ಕಲ್ಕೂರ ಉಡುಪಿಯವರು. ಉಡುಪಿಯಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಮಯದಲ್ಲಿ ನಡೆಯುವ ವಿಟ್ಲಪಿಂಡಿ , ಪಿಲಿನಲಿಕೆಯಲ್ಲಿ ಗಮನ ಸೆಳೆಯುವ ಹುಲಿ ಇವರು. ಹುಲಿ ವೇಷ ಹಾಕೋದು ಅಂದ್ರೆ ಕೇವಲ ಬಡವರು ಮಾತ್ರ ಹಾಕೋದು ಎನ್ನುವ ಮಾತಿಗೆ ವಿರುದ್ಧವಾಗಿ, ಹುಲಿ ವೇಷ ಧರಿಸಿ ಕುಣಿಯುವ ರಂಜನ್ ಕಲ್ಕೂರ ಮಲ್ಟಿ ಮಿಲೇನಿಯರ್ (multi millionaire).</p><img><p>ಹೌದು ಈ ಮಾತು ಸುಳ್ಳಲ್ಲ. ನವರಾತ್ರಿ ಸಮಯದಲ್ಲಿ ವೇಷ ಧರಿಸಿ, ಗುಂಪಿನಲ್ಲಿ ಮನೆ ಮನೆಗೆ ತೆರಳಿ ಟಾಸೆಯ ಸದ್ದಿಗೆ ಸ್ಟೆಪ್ಸ್ ಹಾಕುವವರನ್ನು ನೀವು ನೋಡಿರುತ್ತೀರಿ. ಈ ರೀತಿ ಹುಲಿ ವೇಷ ಹಾಕಿ ಕುಣಿಯೋರು ಕೇವಲ ಬಡವರು ಎಂದು ನೀವು ಅಂದುಕೊಂಡರೆ ಅದು ತಪ್ಪು. ಯಾಕಂದ್ರೆ ಈ ಹುಲಿ ಕೋಟ್ಯಾಧಿಪತು ಹುಲಿ.</p><img><p>ವಿಟ್ಲಪಿಂಡಿಯಲ್ಲಿ ಗಮನ ಸೆಳೆಯುವ ರಂಜನ್ ಕಲ್ಕೂರ (Ranjan Kalkura) . ದೊಡ್ಡ ಉದ್ಯಮಿ. ಕಲ್ಕೂರ ಸಮೂಹ ಸಂಸ್ಥೆಗಳ ಮುಖ್ಯಸ್ಥ, ಕಲ್ಕೂರ ರೆಫ್ರಿಜರೇಶನ್‌ ಆಂಡ್‌ ಕಿಚನ್‌ ಇಕ್ವಿಪ್‌ಮೆಂಟ್ಸ್‌ , ಕಲ್ಕೂರ ಬಿಲ್ಡರ್ಸ್‌ ಆಂಡ್‌ ಡೆವಲಪರ್ಸ್ ಸಂಸ್ಥೆ ಇವರಿಗೆ ಸೇರಿದ್ದು.</p><img><p>ಮಂಗಳೂರು, ಉಡುಪಿಯಲ್ಲಿ ಪಿಲಿನಲಿಕೆ ಅಂದ್ರೆ ಅದು ಭಕ್ತಿಯ ಸಂಕೇತ ಹಾಗಾಗಿ, ಬ್ಯುಸಿನೆಸ್ ಮೆನ್, ಲಾಯರ್, ಇಂಜಿನಿಯರ್ಸ್ ಎಲ್ಲರೂ ಸಾಮಾನ್ಯವಾಗಿ ಹುಲಿ ವೇಷ ಧರಿಸುತ್ತಾರೆ. ಉದ್ಯಮಿಯಾಗಿರುವ ರಂಜನ್ ಕಲ್ಕೂರ ಅವರು ಕೂಡ ಪ್ರತಿ ವರ್ಷ ಹುಲಿ ವೇಷ ಧರಿಸಿ, ಉಡುಪಿಯಲ್ಲಿ ಮಿಂಚುತ್ತಾರೆ.</p><img><p>ರಂಜನ್ ಕಲ್ಕೂರರು ಪ್ರತಿವರ್ಷ ವಿಟ್ಲಪಿಂಡಿಯಂದು ಹುಲಿವೇಷ ಧರಿಸಿ, ಒಂದೂವರೆ ಕೋಟಿಯ ಬಿಎಂಡಬ್ಲ್ಯೂ ಕಾರಲ್ಲಿ ಉಡುಪಿ ಬೀದಿ ಬೀದಿಯಲ್ಲಿ ರೌಂಡ್ಸ್ ಹಾಕುತ್ತಾರೆ. ನಂತರ ನೇರವಾಗಿ, ಉಡುಪಿ ಮಠಕ್ಕೆ ತೆರಳಿ, ಅಲ್ಲಿಂದ ಮೊಸರು ಕುಡಿಕೆಯಲ್ಲೂ ಭಾಗಿಯಾಗುತ್ತಾರೆ.</p><img><p>ಇನ್ನು ಜನ್ಮಾಷ್ಟಮಿ ಸಮಯದಲ್ಲಿ ಉಡುಪಿಯಲ್ಲಿ ಪ್ರತಿವರ್ಷ ಕಲ್ಕೂರ ಸಂಸ್ಥಾನದಿಂದ ಹುಲಿ ವೇಷ ನರ್ತನ ಪ್ರದರ್ಶನ ನಡೆಯುತ್ತದೆ. ಇಲ್ಲಿ ವಿವಿಧ ತಂಡಗಳಿಂದ ಹುಲಿ ವೇಷ ಕುಣಿತ ನಡೆಯುತ್ತದೆ. ಈ ಕಾರ್ಯಕ್ರಮದ ರುವಾರಿ ಕೂಡ ರಂಜನ್ ಕಲ್ಕೂರ.</p>



Source link

Leave a Reply

Your email address will not be published. Required fields are marked *