ಶಿವಮೊಗ್ಗ ಪ್ರೀತಿ ವಿರೋಧಕ್ಕೆ ಬೇಸತ್ತು ಕಾಲುವೆಗೆ ಹಾರಿದ ಪ್ರೇಮಿಗಳು; ಯುವತಿ ಸಾವು, ಯುವಕ ಬಚಾವ್!

ಶಿವಮೊಗ್ಗ ಪ್ರೀತಿ ವಿರೋಧಕ್ಕೆ ಬೇಸತ್ತು ಕಾಲುವೆಗೆ ಹಾರಿದ ಪ್ರೇಮಿಗಳು; ಯುವತಿ ಸಾವು, ಯುವಕ ಬಚಾವ್!



ಶಿವಮೊಗ್ಗ ಪ್ರೀತಿ ವಿರೋಧಕ್ಕೆ ಬೇಸತ್ತು ಕಾಲುವೆಗೆ ಹಾರಿದ ಪ್ರೇಮಿಗಳು; ಯುವತಿ ಸಾವು, ಯುವಕ ಬಚಾವ್!
<p>ಪ್ರೀತಿಗೆ ಮನೆಯವರ ವಿರೋಧದಿಂದ ಮನನೊಂದು, ಶಿವಮೊಗ್ಗದ ಯುವ ಪ್ರೇಮಿಗಳು ಕಾಲುವೆಗೆ ಹಾರಿ ಆತ್ಮಹ*ತ್ಯೆಗೆ ಯತ್ನಿಸಿದ್ದಾರೆ. ಈ ದುರಂತ ಘಟನೆಯಲ್ಲಿ ಯುವತಿ ಸ್ವಾತಿ ಮೃತಪಟ್ಟಿದ್ದು, ಯುವಕ ಸೂರ್ಯ ಪ್ರಾಣಾಪಾಯದಿಂದ ಪಾರಾಗಿದ್ದಾನೆ.</p><img><p>ಶಿವಮೊಗ್ಗ (ಸೆ.24): ಪ್ರೀತಿಗೆ ಕುಟುಂಬಸ್ಥರಿಂದ ವಿರೋಧ ವ್ಯಕ್ತವಾದ ಕಾರಣ ಮನನೊಂದ ಯುವ ಪ್ರೇಮಿಗಳಿಬ್ಬರು ಕಾಲುವೆಗೆ ಹಾರಿ ಆತ್ಮಹ*ತ್ಯೆಗೆ ಯತ್ನಿಸಿದ್ದಾರೆ. ಈ ಘಟನೆಯಲ್ಲಿ ಯುವತಿ ಸಾವನ್ನಪ್ಪಿದ್ದು, ಯುವಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ.</p><img><p>ಭದ್ರಾವತಿ ತಾಲೂಕಿನ ಅಂತರಗಂಗೆಯಲ್ಲಿ ಈ ದುರಂತ ನಡೆದಿದ್ದು, ಸ್ವಾತಿ (19) ಮೃತಪಟ್ಟ ಯುವತಿ. ಈಕೆಯೊಂದಿಗೆ ಆತ್ಮಹ*ತ್ಯೆಗೆ ಯತ್ನಿಸಿ ಬದುಕುಳಿದ ಯುವಕ ಸೂರ್ಯ (20) ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.</p><img><p>ಇಬ್ಬರೂ ಶಿವಮೊಗ್ಗ ಜಿಲ್ಲೆಯ ಅಂತರಗಂಗೆಯ ಭೋವಿ ಕಾಲನಿ ನಿವಾಸಿಗಳಾಗಿದ್ದು, ಕಳೆದ ಮೂರು ವರ್ಷಗಳಿಂದ ಒಬ್ಬರನ್ನೊಬ್ಬರು ಪ್ರೀತಿಸುತ್ತಿದ್ದರು. ಮೂರು ವರ್ಷಗಳಿಂದ ಹಲವು ಪ್ರವಾಸಿ ತಾಣಗಳಲ್ಲಿ ಪ್ರಣಯ ಹಕ್ಕಿಗಳಾಗಿ ಸುತ್ತಾಡಿದ್ದಾರೆ.</p><img><p>ಇತ್ತೀಚೆಗೆ ಇವರ ಪ್ರೀತಿ ವಿಚಾರ ಮನೆಯವರಿಗೆ ತಿಳಿದುಬಂದಿದೆ. ಪ್ರೀತಿಗೆ ವಿರೋಧ ವ್ಯಕ್ತಪಡಿಸಿ, ಬುದ್ಧಿವಾದ ಹೇಳಿದ ಕಾರಣ ಇಬ್ಬರೂ ಭಾನುವಾರ ಮನನೊಂದು ಇರುವೆ ಪುಡಿ ಸೇವಿಸಿ, ಬಳಿಕ ಅಂತರಗಂಗೆಯ ಉಕ್ಕುಂದದಲ್ಲಿರುವ ಕಾಲುವೆಗೆ ಹಾರಿದ್ದಾರೆ.</p><img><p>ಆತ್ಮಹ*ತ್ಯೆಗೆ ಯತ್ನಿಸುವಾಗ ಅದೃಷ್ಟವಶಾತ್ ಸೂರ್ಯ ಮರದ ದಿಮ್ಮಿಯ ಸಹಾಯದಿಂದ ಬದುಕುಳಿದಿದ್ದಾನೆ. ಕೂಡಲೇ ಆತನನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ, ನೀರಿನ ಸೆಳೆತಕ್ಕೆ ಸಿಲುಕಿದ ಸ್ವಾತಿ ನೀರುಪಾಲಾಗಿದ್ದಾಳೆ.</p><img><p>ಸ್ವಾತಿಗಾಗಿ ಅಗ್ನಿಶಾಮಕ ದಳದ ಸಿಬ್ಬಂದಿ ಎರಡು ದಿನಗಳಿಂದ ಶೋಧ ನಡೆಸಿದ್ದರು. ಮಂಗಳವಾರ ಆಕೆಯ ಮೃತದೇಹ ಪತ್ತೆಯಾಗಿದ್ದು, ಹೊರತೆಗೆಯಲಾಗಿದೆ. ಸ್ವಾತಿ ಪ್ರಥಮ ಪದವಿ ವಿದ್ಯಾರ್ಥಿನಿಯಾಗಿದ್ದರೆ, ಸೂರ್ಯ ಕೂಲಿ ಕೆಲಸ ಮಾಡುತ್ತಿದ್ದ ಎಂದು ತಿಳಿದುಬಂದಿದೆ.</p><img><p>ಈ ಸಂಬಂಧ ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರೀತಿ ನಿರಾಕರಣೆ ಕಾರಣಕ್ಕೆ ನಡೆಯುತ್ತಿರುವ ಇಂತಹ ದುರಂತಗಳು ಸಮಾಜದಲ್ಲಿ ಆತಂಕ ಮೂಡಿಸಿವೆ.</p>



Source link

Leave a Reply

Your email address will not be published. Required fields are marked *