MP Bommai Speech: ಭಾರತವನ್ನು 2047ಕ್ಕೆ ಶ್ರೇಷ್ಠ ಆರ್ಥಿಕ ಶಕ್ತಿ ಮಾಡೋಣ: ಸಂಸದ ಬಸವರಾಜ ಬೊಮ್ಮಾಯಿ | Kaduru Pandit Deendayal Upadhyaya Basavaraj Bommai Statement Gvd

MP Bommai Speech: ಭಾರತವನ್ನು 2047ಕ್ಕೆ ಶ್ರೇಷ್ಠ ಆರ್ಥಿಕ ಶಕ್ತಿ ಮಾಡೋಣ: ಸಂಸದ ಬಸವರಾಜ ಬೊಮ್ಮಾಯಿ | Kaduru Pandit Deendayal Upadhyaya Basavaraj Bommai Statement Gvd



MP Bommai Speech: ಭಾರತವನ್ನು 2047ಕ್ಕೆ ಶ್ರೇಷ್ಠ ಆರ್ಥಿಕ ಶಕ್ತಿ ಮಾಡೋಣ: ಸಂಸದ ಬಸವರಾಜ ಬೊಮ್ಮಾಯಿ | Kaduru Pandit Deendayal Upadhyaya Basavaraj Bommai Statement Gvd

ಉಪಾಧ್ಯಾಯ ಒಬ್ಬ ಮಾನವತಾವಾದಿ, ದೇಶದ 25 ಕೋಟಿ ಜನರನ್ನು ಬಡತನದಿಂದ ಮೇಲೆತ್ತುವ ಮೂಲಕ ಅವರ ಅಂತ್ಯೋದಯದ ವಿಚಾರಗಳನ್ನು ಕಾರ್ಯರೂಪಕ್ಕೆ ತಂದಿರುವ ಶ್ರೇಯಸ್ಸು ಪ್ರಧಾನಿ ಮೋದಿಯವರಿಗೆ ಸಲ್ಲುತ್ತದೆ ಎಂದು ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.

ಕಡೂರು (ಸೆ.26): ಪಂಡಿತ ದೀನ್ ದಯಾಳ್ ಉಪಾಧ್ಯಾಯ ಒಬ್ಬ ಮಾನವತಾವಾದಿ, ದೇಶದ 25 ಕೋಟಿ ಜನರನ್ನು ಬಡತನದಿಂದ ಮೇಲೆತ್ತುವ ಮೂಲಕ ಅವರ ಅಂತ್ಯೋದಯದ ವಿಚಾರಗಳನ್ನು ಕಾರ್ಯರೂಪಕ್ಕೆ ತಂದಿರುವ ಶ್ರೇಯಸ್ಸು ಪ್ರಧಾನಿ ನರೇಂದ್ರ ಮೋದಿಯವರಿಗೆ ಸಲ್ಲುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು. ಪಂಡಿತ ದೀನದಯಾಳ್ ಉಪಾಧ್ಯಾಯರ ಜನ್ಮದಿನದ ಅಂಗವಾಗಿ ಕಡೂರು ಮಂಡಲ ಬಿಜೆಪಿಯಿಂದ ಏರ್ಪಡಿಸಿದ್ದ ಕಾರ್ಯ ಕ್ರಮದಲ್ಲಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಮಾತನಾಡಿದರು.

ಪಂಡಿತ ದೀನ್ ದಯಾಳ್ ಉಪಾಧ್ಯಾಯರು ಬಿಜೆಪಿಗೆ ಒಂದು ಸಿದ್ಧಾಂತವನ್ನು ವೈಚಾರಿಕತೆಯನ್ನು ಕೊಟ್ಟಿರುವ ಮಹಾನ್ ವ್ಯಕ್ತಿ. ಪ್ರತಿಯೊಬ್ಬ ವ್ಯಕ್ತಿಯ ವಿಕಾಸದ ಜೊತೆಗೆ ಸಮಾಜ ಮತ್ತು ದೇಶದ ವಿಕಾಸ ಆಗಬೇಕು. ಸರ್ವೋದಯ ಸಾಧಿಸಲು ಅಂತ್ಯೋದಯ ಅನ್ನುವಂತಹ ಕಲ್ಪನೆ ಕೊಟ್ಟರು. ಸಮಾಜದ ಅಭಿವೃದ್ಧಿ ಅತ್ಯಂತ ಕೆಳಹಂತ, ತುಳಿತಕ್ಕೊಳಗಾದ ಜನರನ್ನು ಆರ್ಥಿಕವಾಗಿ, ಸಾಮಾಜಿಕವಾಗಿ, ಶೈಕ್ಷಣಿಕವಾಗಿ ಮೇಲೆತ್ತುವ ಮೂಲಕ ಇಡೀ ದೇಶದ ಸಮುದಾಯ, ಸಮಾಜವನ್ನು ಉದ್ಧಾರ ಮಾಡಿ ದೇಶಕ್ಕೆ ಭದ್ರ ಬುನಾದಿ ಹಾಕಬೇಕು ಎಂದು ದೀನದಯಾಳ್ ಉಪಾಧ್ಯಾಯರು 1950 ರ ದಶಕದಲ್ಲಿ ಬಹಳ ಪ್ರಬಲವಾಗಿ ಪ್ರತಿಪಾದನೆ ಮಾಡಿದ್ದರು ಎಂದು ಹೇಳಿದರು.

ಕಾಂಗ್ರೆಸ್ ಗೆ ಪ್ರತಿರೋಧ ಸಿದ್ದಾಂತ: ಕಾಂಗ್ರೆಸ್ ಗೆ ಪ್ರತಿರೋಧವಾದ ಸಿದ್ಧಾತವನ್ನು ಸರ್ವರ ಒಳಿತಿಗಾಗಿ ದೀನದಯಾಳ ಉಪಾಧ್ಯಾಯ ಅವರು ಕೊಟ್ಟಿದ್ದಾರೆ. ಅವರ ಆಕಸ್ಮಿಕ ನಿಧನ ಇಂದಿಗೂ ಅಗೋಚರವಾಗಿದೆ. ಹಾಗಿದ್ದೂ ಅವರು ತಮ್ಮ ವಿಚಾರ ಹಾಗೂ ಸಿದ್ಧಾಂತದಲ್ಲಿ ಇಂದಿಗೂ ನಮ್ಮ ಮಧ್ಯ ಇದ್ದಾರೆ. ಬಿಜೆಪಿ ಕೇಂದ್ರದಲ್ಲಿ 3ನೇ ಬಾರಿ ಆಯ್ಕೆಯಾಗಿ ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಸರ್ವ ಜನಾಂಗದ ಅಭಿವೃದ್ದಿಗೆ 25 ಕೋಟಿ ಜನರನ್ನು ಬಡತನದಿಂದ ಮೇಲೆತ್ತುವ ಮೂಲಕ ದೀನದಯಾಳ್ ಉಪಾಧ್ಯಾಯ ಅವರ ಅಂತ್ಯೋದಯದ ವಿಚಾರಗಳನ್ನು ಕಾರ್ಯರೂಪಕ್ಕೆ ತಂದಿರುವ ಶ್ರೇಯಸ್ಸು ಪ್ರಧಾನಿ ನರೇಂದ್ರ ಮೋದಿಯವರಿಗೆ ಸಲ್ಲುತ್ತದೆ ಎಂದರು.

ನಂಬರ್ ಒನ್ ಭಾರತ

ಪ್ರಧಾನಿ ನರೇಂದ್ರ ಮೋದಿಯವರು ಭಾರತವನ್ನು ಆರ್ಥಿಕ ಮತ್ತು ಸಾಮಾಜಿಕವಾಗಿ ವಿಕಸಿತಗೊಳಿಸಿ ಭಾರತದ ನಾಯಕತ್ವ ವನ್ನು ವಿಶ್ವದಲ್ಲಿ ಸಾಬೀತು ಮಾಡಿದ್ದಾರೆ. ನಿಮ್ಮೆಲ್ಲರ ಕರ್ತವ್ಯ ಪಕ್ಷದ ಸಂಘಟನೆ ಮಾಡಿ, ನಾವು ಯಾವ ವಿಚಾರ ನಂಬಿದ್ದೇವೆ ಆ ವಿಚಾರಗಳನ್ನು ಜನರಿಗೆ ತಲುಪಿಸಬೇಕು. ದೇಶ ಸೇವೆಯಲ್ಲಿ ತೊಡಗಿಸಿಕೊಂಡು ದೇಶ ಕಟ್ಟುವಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಕೈಜೋಡಿಸಬೇಕು ಎಂದು ಹೇಳಿದರು. ಬರುವಂತಹ ಮುಂದಿನ 10 ವರ್ಷ ಬಹಳ ಮುಖ್ಯ. ಈಗ ಹತ್ತು ವರ್ಷ ಪ್ರಧಾನಿ ದೇಶಕ್ಕೆ ಭದ್ರ ಬುನಾದಿ ಹಾಕಿದ್ದಾರೆ. 2047 ಕ್ಕೆ ಭಾರತ ವಿಕಸಿತ ಭಾರತ ಆಗಬೇಕಿದೆ. ಈಗ ಭಾರತ ವಿಶ್ವದ 4ನೇ ಆರ್ಥಿಕ ಶಕ್ತಿಯಾಗಿದೆ. ಅಮೇರಿಕಾ, ಚೈನಾ, ಜಪಾನ್ ನಂತರ ಭಾರತ ಇದೆ.

ಎರಡು ವರ್ಷಗಳಲ್ಲಿ ಭಾರತ 3ನೇ ಸ್ಥಾನಕ್ಕೆ ಬರಲಿದ್ದು, 2047 ಕ್ಕೆ ಭಾರತ ವಿಶ್ವದ ನಂಬರ ದೇಶ ಆಗಬೇಕು ಎನ್ನುವಂತದ್ದು ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಎಲ್ಲ ಭಾರತಿಯರ ಕನಸಾಗಿದೆ. ಅದನ್ನು ನನಸು ಮಾಡಲು ಎಲ್ಲದಕ್ಕೂ ಮೂಲ ಪ್ರೇರಣೆ ಪಂಡಿತ್ ದೀನದಯಾಳ್ ಉಪಾಧ್ಯಾಯ. ಅವರು ಹೇಳಿರುವುದು ಏಕಾತ್ಮ ವಿಕಾಸ ಮತ್ತು ಅಂತ್ಯೋದಯ. ಇವುಗಳನ್ನು ಮುಂದೆ ತೆಗೆದುಕೊಂಡು ಹೋಗಬೇಕಿದೆ. ಅದರ ಮುಖಾಂತರ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಕಾರ್ಯಕ್ರಮಗಳಿಗೆ ಬೆಂಬಲಿಸಿ ಭಾರತವನ್ನು ಶ್ರೇಷ್ಠ ಭಾರತ ಮಾಡುವ ಸಂಕಲ್ಪ ಮಾಡೋಣ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಬಿಜೆಪಿ ಮಂಡಲ ಅಧ್ಯಕ್ಷ ದೇವಾನಂದ್‌, ಮುಖಂಡರಾದ ಲಕ್ಕಪ್ಪ ಮಾಸ್ಟರ್‌, ಮಂಜುಳಾ ಚಂದ್ರಶೇಖರ್‌, ಅಡಿಕೆ ಚಂದ್ರು, ಸತೀಶ್‌ ಇದ್ದರು.



Source link

Leave a Reply

Your email address will not be published. Required fields are marked *