
<p><strong>Bigg Boss Kannada Rakshitha Shetty: </strong>ಮೊದಲ ದಿನವೇ ಬಿಗ್ಬಾಸ್ ಮನೆಯಿಂದ ಎಲಿಮಿನೇಟ್ ಆಗಿದ್ದ ತುಳುನಾಡಿನ ಕನ್ನಡತಿ ರಕ್ಷಿತಾ ಶೆಟ್ಟಿ ಇದೀಗ ಮರಳಿ ಬಂದಿದ್ದಾರೆ. ತಮ್ಮನ್ನು ಹೊರಹಾಕಿದ ಸ್ಪರ್ಧಿಗಳನ್ನು ಪ್ರಶ್ನಿಸಲು ರಣಚಂಡಿಯ ರೂಪದಲ್ಲಿ ಮತ್ತೆ ಮನೆ ಪ್ರವೇಶಿಸಿದ್ದಾರೆ.</p><img><p>ಮೊದಲ ದಿನವೇ ಎಲಿಮಿನೇಟ್ ಆಗಿದ್ದ ತುಳು ನಾಡಿನ ಕನ್ನಡತಿ ರಕ್ಷಿತಾ ಶೆಟ್ಟಿ ಮರಳಿ ಬಂದಿದ್ದಾರೆ. ರಕ್ಷಿತಾ ಶೆಟ್ಟಿ ಅವರನ್ನು ಮನೆಯಲ್ಲಿರುವ ಒಂಟಿಗಳು ನಾಮಿನೇಟ್ ಮಾಡಿದ್ದರು. ಇದೀಗ ವೇದಿಕೆ ಮೇಲೆ ಆಗಮಿಸಿರುವ ರಕ್ಷಿತಾ ಅಕ್ಷರಶಃ ರಣಚಂಡಿಯಾಗಿದ್ದಾರೆ.</p><img><p>ಮನೆಯಿಂದ ಹೊರಗಡೆ ಹೋಗುವಾದ ಸಮಾಧಾನ ಮಾಡೋದಕ್ಕೆ ಬಂದಿದ್ದರು. ತಮ್ಮ ನಿರ್ಧಾರದ ಬಗ್ಗೆ ಸ್ಟ್ಯಾಂಡ್ ತೆಗೆದುಕೊಳ್ಳಲು ಬಂದಿರಲಿಲ್ಲ. ಈಗ ಮನೆಯೊಳಗೆ ಹೋಗಿ ಪ್ರಾಪರ್ ರೀಸನ್ ಕೇಳುತ್ತೇನೆ ಎಂದು ರಕ್ಷಿತಾ ಶೆಟ್ಟಿ ಗುಡುಗಿದ್ದರು.</p><img><p>ನಾನು ಹೇಗೆ ಆಟ ಆಡುತ್ತೇನೆ ಎಂದು ಅವರಿಗೆ ಗೊತ್ತಿಲ್ಲ. ಕೇವಲ ಪುಸ್ತಕದ ಕವರ್ ನೋಡಿ ಜಡ್ಜ್ ಮಾಡಿದ್ದರು. ಅವರಿಗಿಂತ ಮನೆಯಲ್ಲಿರಲು ನನಗೆ ಯೋಗ್ಯತೆ ಇದೆ ಎಂದು ರಕ್ಷಿತಾ ಹೇಳಿದ್ದಾರೆ. ಸುದೀಪ್ ಸಹ ಮನೆಯೊಳಗೆ ಹೋಗುತ್ತಿರುವ ರಕ್ಷಿತಾ ಶೆಟ್ಟಿ ಅವರಿಗೆ ಶುಭಾಶಯಗಳನ್ನು ತಿಳಿಸಿದ್ದಾರೆ.</p><img><p>ಮೊದಲ ದಿನವೇ ರಕ್ಷಿತಾ ಶೆಟ್ಟಿ ಎಲಿಮಿನೇಟ್ ಆಗಿದ್ದಿರಂದ ಬಿಗ್ಬಾಸ್ ವೀಕ್ಷಕರು ಬೇಸರ ವ್ಯಕ್ತಪಡಿಸಿದ್ರು. ಈ ರೀತಿಯಾಗಿ ಕಳುಹಿಸಿದ್ದು ತಪ್ಪು ಎಂದು ಸೋಶಿಯಲ್ ಮೀಡಿಯಾದಲ್ಲಿ ಬರೆದುಕೊಳ್ಳಲು ಆರಂಭಿಸಿದ್ದರು. ಇದೀಗ ಬಿಗ್ಬಾಸ್ ಮತ್ತೆ ರಕ್ಷಿತಾ ಅವರನ್ನು ಕರೆದುಕೊಂಡು ಬಂದಿದ್ದಾರೆ.</p><p><strong>ಇದನ್ನೂ ಓದಿ: </strong><strong>ಥರ್ಡ್ ಕ್ಲಾಸ್ ರೀತಿ ವರ್ತಿಸಿದ್ದ, ಅವಾಜ್ ಹಾಕಿದ್ಮೇಲೆ ಬಕೆಟ್ ಹಿಡಿತಿದ್ದಾನೆ: ಸತೀಶ್ ಹೇಳಿದ್ಯಾರಿಗೆ?</strong></p><img><p>ಮನೆಯಿಂದ ಹೊರ ಹೋಗುವಾಗಲೂ ಒಂದಲ್ಲ ಒಂದು ದಿನ ಎಲ್ಲರೂ ಹೋಗಬೇಕು. ಇಂದು ನಾನು ಹೋಗುತ್ತಿದ್ದೇನೆ ಎಂದು ಹೇಳಿ ರಕ್ಷಿತಾ ಶೆಟ್ಟಿ ಹೊರಬಂದಿದ್ದರು. ತಪ್ಪು ತಪ್ಪಾಗಿ ಮಾತನಾಡಿ ಕೆಲವರು ವೈರಲ್ ಆಗುತ್ತಾರೆ ಎಂಬ ನಿರೂಪಕಿ ಜಾನ್ವಿ ಮಾತಿಗೆ ವೀಕ್ಷಕರು ಅಸಮಾಧಾನ ವ್ಯಕ್ತಪಡಿಸಿದ್ರು.</p><p><strong>ಇದನ್ನೂ ಓದಿ:</strong><strong> ಬಿಗ್ಬಾಸ್ ಮನೆಯಲ್ಲಿ ಸಿಗುತ್ತೋ ಇಲ್ಲೋ ಗೊತ್ತಿರಲಿಲ್ಲ, 5 ಗ್ಲಾಸ್ ಕುಡಿದು ಬಂದೆ ಎಂದ ಸ್ಪರ್ಧಿ</strong></p>
Source link
ರಣಚಂಡಿಯಾಗಿ ಮರಳಿ ಬಂದ ರಕ್ಷಿತಾ; ಉತ್ತರ ಕೊಡ್ತಾರಾ ಸ್ಪರ್ಧಿಗಳು? ಶುರುವಾಯ್ತು ಅಸಲಿ ಆಟ