CM Siddaramaiah: ಬುದ್ಧ, ಬಸವ, ಅಂಬೇಡ್ಕರ್‌ ತತ್ವ ಅನುಷ್ಠಾನಗೊಳಿಸಲು ಸಿದ್ದರಾಮಯ್ಯ ಪ್ರಯತ್ನ | Rb Timmapur Speech On Siddaramaiah At Mudhol Rav

CM Siddaramaiah: ಬುದ್ಧ, ಬಸವ, ಅಂಬೇಡ್ಕರ್‌ ತತ್ವ ಅನುಷ್ಠಾನಗೊಳಿಸಲು ಸಿದ್ದರಾಮಯ್ಯ ಪ್ರಯತ್ನ | Rb Timmapur Speech On Siddaramaiah At Mudhol Rav



CM Siddaramaiah: ಬುದ್ಧ, ಬಸವ, ಅಂಬೇಡ್ಕರ್‌ ತತ್ವ ಅನುಷ್ಠಾನಗೊಳಿಸಲು ಸಿದ್ದರಾಮಯ್ಯ ಪ್ರಯತ್ನ | Rb Timmapur Speech On Siddaramaiah At Mudhol Rav

ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ. ತಿಮ್ಮಾಪೂರ ಅವರ ಪ್ರಕಾರ, ಮುಖ್ಯಮಂತ್ರಿ ಸಿದ್ದರಾಮಯ್ಯನವರು ಬುದ್ಧ, ಬಸವ, ಮತ್ತು ಡಾ. ಅಂಬೇಡ್ಕರ್‌ರವರ ತತ್ವಗಳನ್ನು ತಮ್ಮ ಆಡಳಿತದಲ್ಲಿ ಅಳವಡಿಸಿಕೊಳ್ಳುತ್ತಿದ್ದಾರೆ. ಸಾಮಾಜಿಕ ನ್ಯಾಯ, ಸಮಾನತೆ ಮಹಿಳಾ ಸಬಲೀಕರಣದ  ಜನಪರ ಆಡಳಿತ ನೀಡುವುದು ಅವರ ಮುಖ್ಯ ಗುರಿ ಎಂದರು.

ಮುಧೋಳ (ಅ.13) : ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಬುದ್ದ, ಬಸವ ಹಾಗೂ ಡಾ.ಅಂಬೇಡ್ಕರ್‌ ಅವರ ನಿಜವಾದ ಅಭಿಮಾನಿಗಳಾಗಿದ್ದು, ಮನುಕುಲದ ಉದ್ಧಾರ ಹಾಗೂ ಸರ್ವ ಜನಾಂಗದ ಹಿತ ಬಯಸಿರುವ ಅವರೆಲ್ಲರ ತತ್ವ ಸಿದ್ಧಾಂತಗಳನ್ನು ಜೀವನದಲ್ಲಿ ಅಳವಡಸಿಕೊಳ್ಳುವ ಮೂಲಕ ಅವರ ಸಂದೇಶಗಳನ್ನು ರಾಜ್ಯದ ಅಡಳಿತದಲ್ಲಿ ತರುವ ಪ್ರಾಮಾಣಿಕ ಪ್ರಯತ್ನ ಸಿದ್ದರಾಮಯ್ಯನವರದ್ದಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ. ತಿಮ್ಮಾಪೂರ ಹೇಳಿದರು.

ನಗರದ ಸಚಿವರ ಗೃಹ ಕಚೇರಿಯಲ್ಲಿ ಬಸವ ತತ್ವ ಅಭಿಮಾನಿಗಳಿಂದ ಭಾನುವಾರ ಸನ್ಮಾನ ಸ್ವಿಕರಿಸಿ ಮಾತನಾಡಿದ ಅವರು, ತನ್ಮೂಲಕ ಸಾಮಾಜಿಕ ನ್ಯಾಯ ನೀಡಿ ಜನಪರ ಹಾಗೂ ಅಭಿವೃದ್ಧಿ ಕಾರ್ಯಗಳನ್ನು ಮಾಡಬೇಕೆಂಬ ಸಿದ್ದರಾಮಯ್ಯನವರ ಆಶಯವಾಗಿದೆ. ಅಸಮಾನತೆ, ಅಸ್ಪೃಶ್ಯತೆ, ಹೋಗಿ ಪುರುಷರಂತೆ ಮಹಿಳೆಯರು ಎಲ್ಲ ಹಂತಗಳಲ್ಲಿ ಸಶಕ್ತರಾಗಬೇಕು, ತನ್ಮೂಲಕ ಬಡವರ ಉದ್ಧಾರವಾಗಿ ಸ್ವಾಭಿಮಾನಿ ಬದುಕು ಸಾಧಿಸಬೇಕೆಂಬ ಸಿಎಂ ಸಿದ್ದರಾಮಯ್ಯನವರ ಪರಿಕಲ್ಪನೆಯಾಗಿದೆ. ಅದಕ್ಕೆ ನಾನು ಸೇರಿ ಎಲ್ಲ ಸಚಿವ ಸಂಪುಟದ ಸಚಿವರು ಶಾಸಕರು ಬೆಂಬಲವಾಗಿ ನಿಲ್ಲುತ್ತೇವೆಂದು ತಿಮ್ಮಾಪೂರ ಅಭಿಮಾನದಿಂದ ಹೇಳಿದರು.

ಇದನ್ನೂ ಓದಿ: ನಮ್ಮ ಸರ್ಕಾರ ಬಂದ್ರೆ ನೂರಕ್ಕೆ ನೂರರಷ್ಟು ಆರೆಸ್ಸೆಸ್ ಬ್ಯಾನ್ ಮಾಡ್ತೇವೆ: ಎಂ ಲಕ್ಷ್ಮಣ್

ಪ್ರಮುಖರಾದ ಹಣಮಂತ ಬಾಲಪ್ಪ ತಿಮ್ಮಾಪೂರ, ಅಶೋಕ ಕಿವಡಿ, ಸದುಗೌಡ ಪಾಟೀಲ, ಪರಮಾನಂದ ಕುಟರಟ್ಟಿ, ಚಿನ್ನು ಅಂಬಿ, ಚಿದಾನಂದ ಪಾಟೀಲ, ಶ್ರೀನಿವಾಸ ನವಲೆ, ಮುಂತಾದವರು ಉಪಸ್ಥಿತರಿದ್ದರು



Source link

Leave a Reply

Your email address will not be published. Required fields are marked *