
ಇದೇ ವೇಳೆ ಸಿಎಂ ನಿತೀಶ್ ಕುಮಾರ್ ಅವರ ಜೆಡಿ(ಯು) 25 ಕ್ಷೇತ್ರಗಳಲ್ಲಿ ಗೆಲ್ಲೋದು ಸಹ ಅನುಮಾನ. ಎನ್ಡಿಎ ಒಕ್ಕೂಟದಲ್ಲಿಯೂ ಎಲ್ಲವೂ ಸರಿಯಾಗಿಲ್ಲ. ನಿತೀಶ್ ಕುಮಾರ್ ಮತ್ತೊಮ್ಮೆ ಮುಖ್ಯಮಂತ್ರಿಯಾಗಲ್ಲ ಎಂದು ಭವಿಷ್ಯ ನುಡಿದಿದ್ದಾರೆ. ಜೆಡಿಯು ಗೆಲ್ಲಬಹುದಾದ ಕ್ಷೇತ್ರಗಳಲ್ಲಿ ಸ್ಪರ್ಧಿಸಲು ಬಿಜೆಪಿ ಪ್ಲಾನ್ ಮಾಡಿಕೊಂಡಿದೆ. ಇನ್ನು ಚಿರಾಗ್ ಪಾಸ್ವಾನ್ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಅನೇಕ ಕ್ಷೇತ್ರಗಳಲ್ಲಿ ಅಸಮರ್ಥ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದಿದ್ದರು. ಈ ಬಾರಿ ಕ್ಷೇತ್ರ ಹಂಚಿಕೆಗೂ ಮುನ್ನವೇ ಚಿರಾಗ್ ಪಾಸ್ವಾನ್ ಬಂಡಾಯ ಕಿಚ್ಚು ಹಚ್ಚಿದ್ದರು. ಈ ಕಿಚ್ಚು ಎನ್ಡಿಎಗೆ ಅಪಾಯಕಾರಿ ಎಂದು ಪ್ರಶಾಂತ್ ಕಿಶೋರ್ ಹೇಳಿದ್ದಾರೆ.
ಇದನ್ನೂ ಓದಿ: ಬಿಹಾರ ಚನಾವಣೆಗೆ ಬಿಜೆಪಿ-ಜೆಡಿಯು ಸೀಟು ಹಂಚಿಕೆ ಫೈನಲ್, ಇಬ್ಬರಿಗೂ ತಲಾ 101 ಕ್ಷೇತ್ರ