ಚಿತ್ರದುರ್ಗ, ಅಕ್ಟೋಬರ್ 17: ಎಸ್ಎಸ್ಎಲ್ಸಿ ವರೆಗೆ ಓದದೇ ಪೆಟ್ರೋಲ್ ಬಂಕ್ನಲ್ಲಿ ಕೆಲಸ ಮಾಡುತ್ತಿರುವ ಯುವಕನ ಜತೆ ಬೆಂಗಳೂರಿಗೆ ಎಂಜಿನಿಯರಿಂಗ್ ಓದುತ್ತಿರುವ ಯುವತಿಗೆ ಲವ್! ಪೋಷಕರ ವಿರೋಧದ ಮಧ್ಯೆಯೂ ಮದುವೆ. ಇದೀಗ ಯುವ ಜೋಡಿಗೆ ಪೋಷಕರೇ ವಿಲನ್ ಆಗಿದ್ದು, ಪ್ರಕರಣ ಪೊಲೀಸ್ ಠಾಣೆ ಮೆಟ್ಟಿಲೇರಿದೆ. ಈ ವಿದ್ಯಮಾನ ನಡೆದಿದ್ದು ಚಿತ್ರದುರ್ಗದಲ್ಲಿ. ಚಿತ್ರದುರ್ಗ (ಚಿತ್ರದುರ್ಗ) ಜಿಲ್ಲೆ ಹಿರಿಯೂರು ತಾಲ್ಲೂಕಿನ ರಾಮಜೋಗಿಹಳ್ಳಿಯ ಅಮೃತಾ ಪಿಯುಸಿ ಪಾಸಾಗಿದ್ದರೆ ಬೆಂಗಳೂರಿನಲ್ಲಿ ಬಿಐ ಓದುತ್ತಿದ್ದಾಳೆ. ಕಳೆದ ಐದು ವರ್ಷಗಳಿಂದ ಸಂಬಂಧದಲ್ಲಿ ಮಾವನೇ ಆದ ಸ್ವಗ್ರಾಮದ ಮಾರುತಿಯನ್ನು ಪ್ರೇಮಿಸುತ್ತಿದ್ದಾಳೆ. ವಿಷಯ ತಿಳಿದ ಯುವತಿಯ ವಿರುದ್ಧ ಉಗ್ರ ಸ್ವರೂಪ ತಾಳಿದ್ದಾರೆ. ಯುವತಿಗೆ ಇಲ್ಲದ ಕಿರುಕುಳ ನೀಡಿ ಮಾರುತಿಗೂ ಜೀವ ಬೆದರಿಕೆ ಹಾಕಿದ್ದಾರೆ. ಯುವಕ ಎಸ್ಎಸ್ಎಲ್ಸಿ ಮಾತ್ರ ಓದಿದ್ದು ಪೆಟ್ರೋಲ್ ಬಂಕ್ನಲ್ಲಿ ಕೆಲಸ ಮಾಡುತ್ತಿದ್ದಾನೆ. ಹೀಗಾಗಿ, ಬಡತನದ ಕುಟುಂಬ ಮತ್ತು ಶಿಕ್ಷಣ ಇಲ್ಲದ ಕಾರಣ ಪ್ರೇಮ ವಿವಾಹಕ್ಕೆ ವಿರೋಧಿಸಿ ಅಮೃತಾ ಆರೋಪಿಸಿದ್ದಾಳೆ.
ಅಮೃತಾಳ ಪೋಷಕರ ಬೆದರಿಕೆ, ವಿವಾಹಕ್ಕೆ ವಿರೋಧದಿಂದ ಕಂಗಾಲಾದ ಮಾರುತಿ ಅಸ್ವಸ್ಥನಾಗಿ ದಾಖಲಾಗಿದ್ದಾರೆ. ಕೊನೆಗೆ ಅಮೃತಾಳೇ ಬೆಂಗಳೂರಿಂದ ಆಗಮಿಸಿ ಮಾರುತಿಯನ್ನು ಡಿಸ್ಚಾರ್ಜ್ ಮಾಡಿಸಿ ದೇಗುಲದಲ್ಲಿ ಮದುವೆ ಆಗಿದ್ದಾಳೆ. ಪೋಷಕರಿಂದ ಜೀವ ಬೆದರಿಕೆ ಇದ್ದು ರಕ್ಷಣೆ ನೀಡಿ ಬದುಕಲು ಬಿಡಿ ಎಂದು ಯುವ ಜೋಡಿ ಜಿಲ್ಲಾ ಪೊಲೀಸ್ ಅಧೀಕ್ಷಕರ ಕಚೇರಿಗೆ ಆಗಮಿಸಿ ಗುರುವಾರ ಮನವಿ ಸಲ್ಲಿಸಿದರು.
ಇದನ್ನೂ ಓದಿ: ಮದ್ಯ ಸೇವನೆಗೆ ಹಣ ನೀಡಲಿಲ್ಲವೆಂದು ಹೆತ್ತ ತಾಯಿಯನ್ನೇ ಕೈಕಾಲು ಕಟ್ಟಿ, ಕತ್ತು ಕುಯ್ದ ಪುತ್ರ
ಒಟ್ಟಾರೆಯಾಗಿ ರಾಮಜೋಗಿಹಳ್ಳಿಯ ಅಮೃತಾ ಮತ್ತು ಮಾರುತಿ ಪೋಷಕರ ವಿರೋಧ ಲೆಕ್ಕಿಸದೆ ಮದುವೆ ಆಗಿದ್ದಾರೆ. ಅಂತಸ್ತು ಮತ್ತು ಶಿಕ್ಷಣದ ಬಗ್ಗೆ ತಕರಾರು ತೆಗೆದು ಅಮೃತಾ ಹೆಚ್ಚುವರಿ ಯುವ ಜೋಡಿಯ ಪಾಲಿಗೆ ವಿಲನ್ ಆಗಿದ್ದಾರೆ. ಐಮಂಗಲ ಠಾಣೆ ಪ್ರಕರಣ ದಾಖಲಾಗಿದ್ದು, ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕಿದೆ.
ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ