Headlines

ಉಪ ರಾಷ್ಟ್ರಪತಿ ರಾಧಾಕೃಷ್ಣನ್​ ಚೆನ್ನೈ ನಿವಾಸಕ್ಕೆ ಹುಸಿ ಬಾಂಬ್​ ಬೆದರಿಕೆ

ಉಪ ರಾಷ್ಟ್ರಪತಿ ರಾಧಾಕೃಷ್ಣನ್​ ಚೆನ್ನೈ ನಿವಾಸಕ್ಕೆ ಹುಸಿ ಬಾಂಬ್​ ಬೆದರಿಕೆ


ಚೆನ್ನೈ, ಅಕ್ಟೋಬರ್ 17: ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರ ಚೆನ್ನೈನಲ್ಲಿದೆ (ಚೆನ್ನೈ) ನಿವಾಸಕ್ಕೆ ಬಾಂಬ್ ಬೆದರಿಕೆ ಹಾಕಲಾಗಿದೆ. ಮನೆಯಲ್ಲಿ ಬಾಂಬ್ ಇಟ್ಟಿರೋದಾಗಿ ಅಪರಿಚಿತ ವ್ಯಕ್ತಿ ಕರೆ ಮಾಡಿದ್ದು, ಕೆಲ ಕಾಲ ಆತಂಕದ ವಾತಾವರಣ ನಿರ್ಮಾಣವಾಗಿದೆ. ವಿಷಯ ತಿಳಿಯಬೇಕಾದರೆ ಬಾಂಬ್ ನಿಷ್ಕ್ರಿಯ ದಳ, ಶ್ವಾನದಳ ಸಿಬ್ಬಂದಿ ಆಗಮಿಸಿ ಮನೆ ಬಳಿ ಪರಿಶೀಲನೆ. ಈ ವೇಳೆ ಯಾವುದೇ ಸ್ಫೋಟಕ ವಸ್ತು ಕಂಡುಬಂದಿಲ್ಲ, ಇದು ಹುಸಿ ಬಾಂಬ್ ಬೆದರಿಕೆ ಎಂದು ತಿಳಿದುಬಂದಿದೆ.

ತಮಿಳುನಾಡಿನಲ್ಲಿ ಇತ್ತೀಚೆಗೆ ಹುಸಿ ಬಾಂಬ್ ಬೆದರಿಕೆ ಪ್ರಕರಣಗಳು ಮೇಲಿಂದ ಮೇಲೆ ವರದಿಯಾಗುತ್ತಿವೆ. ನಟ, ಟಿವಿ ಅಧ್ಯಕ್ಷ ವಿಜಯ್ ಮನೆಯಲ್ಲಿಯೂ ಬಾಂಬ್ ಇಟ್ಟಿರೋದಾಗಿ ವ್ಯಕ್ತಿಯೋರ್ವ ಪೊಲೀಸ್ ಕಂಟ್ರೋಲ್ ರೂಂಗೆ ಕರೆ ಮಾಡಿ ತಿಳಿಸಿದ್ದರು. ಮಾಹಿತಿ ಆಧರಿಸಿ ವಿಜಯ್ ಮನೆಯಲ್ಲಿ ಪರಿಶೀಲಿಸಿದಾಗ ಇದು ಹುಸಿಬಾಂಬ್ ಕರೆ ಎಂಬುದು ಗೊತ್ತಾಗಿತ್ತು. ಘಟನೆ ಸಂಬಂಧ 8 ವರ್ಷದ ವ್ಯಕ್ತಿಯೋರ್ವನನ್ನು ಬಂಧಿಸಿದ್ದರು.

ಇದನ್ನೂ ಓದಿ: ಶಬರಿಮಲೆ ದೇವಸ್ಥಾನದ ಚಿನ್ನ ಕಳ್ಳತನ ಪ್ರಕರಣ: ಬೆಂಗಳೂರು ಮೂಲದ ಉದ್ಯಮಿ ಉನ್ನಿಕೃಷ್ಣನ್ ಪೊಟ್ಟಿ ಬಂಧನ

ವಾರದ ಹಿಂದೆಯೂ ಇಂತಹ ಪ್ರಕರಣ ತಮಿಳುನಾಡಿನ ಮಧುರವೋಯಲ್ ನಲ್ಲಿ ವರದಿಯಾಗಿದೆ. ಪೊಲೀಸ್ ಕಂಟ್ರೋಲ್ ರೂಂಗೆ ಕರೆಮಾಡಿದ್ದ ಅನಾಮಧೇಯ ವ್ಯಕ್ತಿ, ಪಲ್ಲವನ್ ನಗರ ಪಾರ್ಕ್ ಮತ್ತು ಹತ್ತಿರದ ದೇವಸ್ಥಾನದಲ್ಲಿ ಬಾಂಬ್ ಇಟ್ಟಿರೋದಾಗಿ ಹೇಳಿದ್ದಾನೆ. ಮಾಹಿತಿ ಪತ್ತೆ ಬಾಂಬ್ ನಿಷ್ಕ್ರಿಯ ದಳ ಮತ್ತು ಓಶ್ವಾನ ದಳದ ಸ್ಥಳಕ್ಕೆ ಭೇಟಿ ನೀಡಿದ್ದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಯಾವುದೇ ಬಾಂಬ್ ಅಥವಾ ಸ್ಫೋಟಕಗಳು ಇರಲಿಲ್ಲ. ಹುಸಿ ಬಾಂಬ್ ಕರೆ ಮಾಡಿದ್ದ ವಿಲ್ಲುಪುರಂ ಜಿಲ್ಲೆಯ 43 ವರ್ಷದ ಭೂಪತಿ ಎಂಬಾತನನ್ನು ಬಂಧಿಸಿದ್ದರು.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *