ಜಾತಿಗಣತಿಗೆ ಭಾಗಿಯಾಗದವರು ದೇಶದ್ರೋಹಿಗಳು: ಸುಧಾಮೂರ್ತಿ ದಂಪತಿ ವಿರುದ್ಧ ಬಿ.ಕೆ. ಹರಿಪ್ರಸಾದ್ ಕಿಡಿ | Bk Hariprasad Slams Infosys Sudha Murthy Refusing Caste Survey Anti National Sat

ಜಾತಿಗಣತಿಗೆ ಭಾಗಿಯಾಗದವರು ದೇಶದ್ರೋಹಿಗಳು: ಸುಧಾಮೂರ್ತಿ ದಂಪತಿ ವಿರುದ್ಧ ಬಿ.ಕೆ. ಹರಿಪ್ರಸಾದ್ ಕಿಡಿ | Bk Hariprasad Slams Infosys Sudha Murthy Refusing Caste Survey Anti National Sat



ಜಾತಿಗಣತಿಗೆ ಭಾಗಿಯಾಗದವರು ದೇಶದ್ರೋಹಿಗಳು: ಸುಧಾಮೂರ್ತಿ ದಂಪತಿ ವಿರುದ್ಧ ಬಿ.ಕೆ. ಹರಿಪ್ರಸಾದ್ ಕಿಡಿ | Bk Hariprasad Slams Infosys Sudha Murthy Refusing Caste Survey Anti National Sat

ಜಾತಿ ಜನಗಣತಿಯಲ್ಲಿ ಭಾಗವಹಿಸಲು ನಿರಾಕರಿಸಿದ ನಾರಾಯಣ ಮೂರ್ತಿ ದಂಪತಿಯನ್ನು ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ‘ಸಂವಿಧಾನ ವಿರೋಧಿಗಳು’ ಮತ್ತು ‘ದೇಶದ್ರೋಹಿಗಳು’ ಎಂದು ಕರೆದಿದ್ದಾರೆ. ತೆರಿಗೆ ತಪ್ಪಿಸಿಕೊಳ್ಳಲು ಅವರು ಹೀಗೆ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ಬೆಂಗಳೂರು (ಅ.17): ರಾಜ್ಯದಲ್ಲಿ ನಡೆಯುತ್ತಿರುವ ಜಾತಿ ಜನಗಣತಿಗೆ (ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ) ಉದ್ಯಮಿ ನಾರಾಯಣ ಮೂರ್ತಿ ಮತ್ತು ಸುಧಾ ಮೂರ್ತಿ ದಂಪತಿಗಳು ತಾವು ಮೇಲ್ಜಾತಿಯವರು ಎಂದು ಮಾಹಿತಿ ಕೊಡಲು ನಿರಾಕರಿಸಿದ್ದಾರೆ. ಜಾತಿ ಸಮೀಕ್ಷೆಯಲ್ಲಿ ಭಾಗವಹಿಸುವುದಿಲ್ಲ ಎನ್ನುವವರು ಸಂವಿಧಾನ ವಿರೋಧಿಗಳು ಮತ್ತು ದೇಶದ್ರೋಹಿಗಳು ಎಂದು ಕಾಂಗ್ರೆಸ್ ಹಿರಿಯ ನಾಯಕ ಹಾಗೂ ವಿಧಾನ ಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ಟೀಕೆ ಮಾಡಿದ್ದಾರೆ.

ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ‘ಮೇಲ್ಜಾತಿಯವರಿಗೆ ಹಿಂದುಳಿದ ಸಮೀಕ್ಷೆ (ಜಾತಿ ಗಣತಿ) ಬೇಕಾಗಿಲ್ಲ. ಸಿಎಂ ಸಿದ್ದರಾಮಯ್ಯನವರು ಬಹಳ ಧೈರ್ಯ ಮಾಡಿ ಈ ಸಮೀಕ್ಷೆಯನ್ನು ಮಾಡುತ್ತಿದ್ದಾರೆ. ಆದರೆ, ಸಮೀಕ್ಷೆಯಲ್ಲಿ ಭಾಗಿಯಾಗಲ್ಲ ಎಂದರೆ ಅವರು ಸಂವಿಧಾನ ವಿರೋಧಿಗಳು, ದೇಶದ್ರೋಹಿಗಳು ಅಂತಾನೆ ಹೇಳಬೇಕಾಗುತ್ತೆ ಎಂದು ಹೇಳಿದರು.

ತೆರಿಗೆ ತಪ್ಪಿಸಿಕೊಳ್ಳಲು ಸಮೀಕ್ಷೆಯಲ್ಲಿ ಭಾಗಿಯಾಗಿಲ್ಲ:

ಸುಧಾಮೂರ್ತಿ ದಂಪತಿ ಸಮೀಕ್ಷೆಗೆ ಮಾಹಿತಿ ನೀಡದ ಬಗ್ಗೆ ಮಾತನಾಡಿ, ‘ಅವರೆಲ್ಲಾ ತಂತ್ರಜ್ಞಾನ ದಿಗ್ಗಜರು ಅನಿಸಿಕೊಂಡವರು. ಸರ್ಕಾರದಿಂದ 1 ರೂಪಾಯಿಗೆ ಭೂಮಿ ಪಡೆದುಕೊಂಡಿರುತ್ತಾರೆ. ಸುಮಾರು 35 ಸಾವಿರ ಕೋಟಿ (ಪರೋಕ್ಷವಾಗಿ) ತೆರಿಗೆ ಕಟ್ಟೋರು ಇದ್ದಾರೆ. ಆದರೆ, ನಿಜವಾಗಿಯೂ ತೆರಿಗೆ ಕಟ್ಟೋದರಿಂದ ತಪ್ಪಿಸಿಕೊಳ್ಳಲು ಸಮೀಕ್ಷೆಯಲ್ಲಿ ಭಾಗಿಯಾಗುತ್ತಿಲ್ಲ’ ಎಂದು ನೇರ ಆರೋಪ ಮಾಡಿದರು. ಇದರ ಮೂಲಕ, ಈ ಸಮೀಕ್ಷೆ ಮತ್ತು ಹಿಂದುಳಿದ ವರ್ಗಗಳ ಮೀಸಲಾತಿ ಕುರಿತ ದತ್ತಾಂಶವು ತಮ್ಮ ತೆರಿಗೆ ಮತ್ತು ಆಸ್ತಿಯ ವಿಷಯಗಳನ್ನು ಬಹಿರಂಗಪಡಿಸುತ್ತದೆ ಎಂಬ ಭಯ ಅವರಲ್ಲಿದೆ ಎಂದು ಪರೋಕ್ಷವಾಗಿ ಟೀಕಿಸಿದರು.

ದೊಣ್ಣೆ ಹಿಡಿದವರು ಭಯೋತ್ಪಾದಕರು: ಆರ್.ಎಸ್.ಎಸ್ ರಿಜಿಸ್ಟರ್ ಸಂಸ್ಥೆ ಅಲ್ಲ:

ಈ ವೇಳೆ, ಸರ್ಕಾರಿ ಸ್ಥಳಗಳಲ್ಲಿ ಆರ್.ಎಸ್.ಎಸ್. ಚಟುವಟಿಕೆಗಳಿಗೆ ನಿಷೇಧ ಕುರಿತು ಸಚಿವ ಪ್ರಿಯಾಂಕ್ ಖರ್ಗೆ ನೀಡಿರುವ ಹೇಳಿಕೆಗಳನ್ನು ಹರಿಪ್ರಸಾದ್ ಸಂಪೂರ್ಣವಾಗಿ ಬೆಂಬಲಿಸಿದರು. ‘ಪ್ರಿಯಾಂಕ್ ಖರ್ಗೆಯವರು ಹೇಳಿರುವುದು ಸರಿಯಾಗಿದೆ. ಆರ್‌ಎಸ್‌ಎಸ್ ರಿಜಿಸ್ಟರ್ (ನೋಂದಾಯಿತ) ಸಂಸ್ಥೆಯೇ ಅಲ್ಲ. ಅದರ ಚಟುವಟಿಕೆಗಳಲ್ಲಿ ಭಾಗಿಯಾಗುವ ಅಧಿಕಾರಿಗಳ ವಿರುದ್ದವೂ ಕ್ರಮ ಜರುಗಿಸಬೇಕು ಎಂದು ಸರ್ಕಾರಕ್ಕೆ ಆಗ್ರಹಿಸಿದರು. ಆರ್‌ಎಸ್‌ಎಸ್ ಇದ್ದಿಲು ಇದ್ದಹಾಗೆ, ಆದರೆ ಅದು ಅಶೋಕ್, ಅಶ್ವತ್ಥನಾರಾಯಣ ಕಣ್ಣಿಗೆ ವಜ್ರದಂತೆ ಕಾಣಿಸುತ್ತದೆ ಎಂದು ವ್ಯಂಗ್ಯವಾಡಿದರು.

ಸಚಿವ ಖರ್ಗೆಗೆ ಬೆದರಿಕೆ ಕರೆಗಳ ಕುರಿತು ಪ್ರತಿಕ್ರಿಯಿಸಿದ ಹರಿಪ್ರಸಾದ್, ‘ಫೋನ್ ಮಾಡಿ ಬೆದರಿಕೆ ಹಾಕೋರು ರಣಹೇಡಿಗಳು. ಕಲಬುರಗಿಯಲ್ಲಿ ಆರ್.ಎಸ್.ಎಸ್. ಪಥಸಂಚಲನಕ್ಕೆ ಅನುಮತಿ ನೀಡಬಾರದು ಎಂದ ಅವರು, ‘ದೊಣ್ಣೆ ಹಿಡಿದುಕೊಂಡು ಹೋಗುವವರು ಭಯೋತ್ಪಾದಕರು. ಬೇಕಾದರೆ ದೊಣ್ಣೆ ಹಿಡಿದುಕೊಂಡು ದನ ಕಾಯೋಕೆ ಹೋಗಲಿ. ಆರ್.ಎಸ್.ಎಸ್. ಚಟುವಟಿಕೆಗಳಿಗೆ ಅವರು ಗಣವೇಷ (ಸಮವಸ್ತ್ರ) ಅಲ್ಲ, ಯಾವ ವೇಷವಾದರೂ ಹಾಕಿಕೊಳ್ಳಲಿ, ಆದರೆ ಕಾನೂನು ಪಾಲಿಸಬೇಕು ಎಂದು ಹೇಳಿದರು.



Source link

Leave a Reply

Your email address will not be published. Required fields are marked *