
ಬೆಂಗಳೂರು, (ಅಕ್ಟೋಬರ್ 21): ಅರಬ್ಬೀ ಸಮುದ್ರ ಹಾಗೂ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಕರ್ನಾಟಕ ಸೇರಿದಂತೆ ದಕ್ಷಿಣ ಭಾರತದ ವಿವಿಧ ರಾಜ್ಯಗಳು ಸೇರಿದಂತೆ ದೇಶದಾದ್ಯಂತ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅದರಲ್ಲೂ ಮುಖ್ಯವಾಗಿ ಮಲೆನಾಡು, ಕರಾವಳಿ ಭಾಗದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮಳೆಯಾಗಲಿದೆ ಎಂದು ಬೆಂಗಳೂರು ಹವಾಮಾನ ಇಲಾಖೆ ತಜ್ಞ ಲತಾ ಶ್ರೀಧರ್ ಅವರು ಮಾಹಿತಿ ನೀಡಿದ್ದಾರೆ.