
ಮಾಳವಿಕಾ ಕಳುಹಿಸಿದ ಮಹಿಷಾಸುರನಿಂದ ಹಿತಾಳ ಪ್ರಾಣಕ್ಕೆ ಕುತ್ತು ಬರುತ್ತದೆ. ಸಂಜೀವಿನಿ ತರಲು ಹೋದ ದುರ್ಗಾಳ ಪ್ರಯತ್ನ ವಿಫಲವಾದಾಗ, ಸ್ವತಃ ದೇವಿಯೇ ಪ್ರತ್ಯಕ್ಷಳಾಗಿ ಮಹಿಷಾಸುರನನ್ನು ಸಂಹರಿಸಿ ಹಿತಾಳನ್ನು ಕಾಪಾಡುತ್ತಾಳೆ.<img><p>ನಾ ನಿನ್ನ ಬಿಡಲಾರೆ (Naa Ninna Bidalaare) ಸೀರಿಯಲ್ ವಾಸ್ತವಕ್ಕಿಂತ ಬಹುದೂರದ ಸ್ಟೋರಿ ಹೊಂದಿದ್ದರೂ, ವೀಕ್ಷಕರು ಮಾತ್ರ ಸಕತ್ ಇಂಟರೆಸ್ಟಿಂಗ್ ಆಗಿ ನೋಡುವುದು ಇದೆ. ಇದೇ ಕಾರಣಕ್ಕೆ ಈ ಸೀರಿಯಲ್ ಟಿಆರ್ಪಿಯಲ್ಲಿಯೂ ಮುಂದಿದೆ.</p><img><p>ಇದೀಗ ಹಿತಾಳ ಪ್ರಾಣವನ್ನು ಕಸಿಯಲು ಮಾಳವಿಕಾ ಜಾದೂ ಶಕ್ತಿಯಿಂದ ಮಹಿಷಾಸುರನನ್ನು ಕಳುಹಿಸಿದ್ದಾಳೆ. ಆತ ಬಂದು ಹಿತಾಳ ಪ್ರಾಣ ತೆಗೆಯಲು ಮುಂದಾಗಿದ್ದಾನೆ.</p><img><p>ಇತ್ತ ಸಂಜೀವಿನಿ ತರಲು ಹೊರಟ ದುರ್ಗಾ ಮತ್ತು ಶರತ್ಗೆ ಅಪಘಾತ ಮಾಡಿಸಲಾಗಿದೆ. ಶರತ್ ಪ್ರಜ್ಞೆ ಕಳೆದುಕೊಂಡಿದ್ದಾನೆ. ದುರ್ಗಾಳಿಗೆ ಸಿಕ್ಕಾಪಟ್ಟೆ ಪೆಟ್ಟಾಗಿದೆ.</p><img><p>ಅದೇ ಇನ್ನೊಂದೆಡೆ, ಮೃತ್ಯುಂಜಯ ಹೋಮ ನಡೆಯುತ್ತಿದೆ. ಅಲ್ಲಿ ಅಂಬಿಕಾ ತಂಗಿ ಮತ್ತು ಹಿತಾಳ ಪ್ರಾಣಕ್ಕಾಗಿ ಪ್ರಾರ್ಥಿಸುತ್ತಿದ್ದಾಳೆ. ಆದರೆ ಆಕಾಶ ಕೆಂಪಾಗುತ್ತಿದ್ದಂತೆಯೇ ಅಲ್ಲಿ ಅನಾಹುತ ಸಂಭವಿಸುತ್ತಿರುವುದು ತಿಳಿಯುತ್ತದೆ.</p><img><p>ಇನ್ನೇನು ದುರ್ಗಾ ಓಡಿ ಬಂದು ಸಂಜೀವಿನಿಯನ್ನು ಹಿತಾಳಿಗೆ ತಿನ್ನಿಸಬೇಕು ಎನ್ನುವಷ್ಟರಲ್ಲಿಯೇ ದುಷ್ಟಶಕ್ತಿ ಬಂದು ಆಕೆಯನ್ನು ಎಳೆದೊಯ್ಯುತ್ತದೆ. ಮಹಿಷಾಸುರ ಸಂಹರಿಸಲು ಬರುತ್ತಾನೆ.</p><img><p>ಮಾಳವಿಕಾ ಖುಷಿಯಾಗಿದ್ದಾಳೆ. ಆದರೆ ದುರ್ಗಾಳ ಅಪ್ಪ ಶಂಭು ಮತ್ತು ಅಂಬಿಕಾ ದೇವಿಯನ್ನು ಪ್ರಾರ್ಥಿಸುತ್ತಾ ಹಿತಾಳ ಪ್ರಾಣಭಿಕ್ಷೆ ಬೇಡುತ್ತಿದ್ದಾರೆ.</p><img><p>ಆಗ ದೇವಿಯೇ ಬಂದು ಮಹಿಷಾಸುರನ ವಧೆ ಮಾಡುತ್ತಾಳೆ. ಮಹಿಷಾಸುರ ಸಂಹಾರ ಆಗಿದ್ದು ನೋಡಿ ಮಾಳವಿಕಾಗೆ ಗಾಬರಿಯಾಗುತ್ತದೆ. ಅಲ್ಲಿ ಏನಾಗುತ್ತಿದೆ ಎಂದು ಆಕೆಗೆ ತಿಳಿಯುವುದಿಲ್ಲ. ಒಟ್ಟಿನಲ್ಲಿ ಹಿತಾಳ ಪ್ರಾಣ ಉಳಿಯುತ್ತದೆ</p><p>ವಿಡಿಯೋಗಾಗಿ ಇದರ ಮೇಲೆ ಕ್ಲಿಕ್ ಮಾಡಿ</p>
Source link
ದುಷ್ಟ ಶಕ್ತಿಯೊಳಗೆ ದುರ್ಗಾ- ಹಿತಾಳ ಒಯ್ಯಲು ಬಂದ ಮಹಿಷಾಸುರ: Naa Ninna Bidalaare ರೋಚಕ ಸಂಚಿಕೆ