ರಾಷ್ಟ್ರಪತಿಗಳ ಭೇಟಿಗೆ ದೆಹಲಿಗೆ ತೆರಳುವೆ, ಮೋದಿ ಭೇಟಿಗೂ ಸಮಯ ಕೋರಿದ್ದೇನೆ: ಸಿದ್ದರಾಮಯ್ಯ

ರಾಷ್ಟ್ರಪತಿಗಳ ಭೇಟಿಗೆ ದೆಹಲಿಗೆ ತೆರಳುವೆ, ಮೋದಿ ಭೇಟಿಗೂ ಸಮಯ ಕೋರಿದ್ದೇನೆ: ಸಿದ್ದರಾಮಯ್ಯ


ರಾಯಚೂರು, ಜೂನ್ 23: ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಷ್ಟ್ರಪತಿಗಳು ಮತ್ತು ಪ್ರಧಾನಮಂತ್ರಿಗಳನ್ನು ಭೇಟಿ ಮಾಡಲು ದೆಹಲಿಗೆ ತೆರಳುವುದಾಗಿ ಘೋಷಿಸಿದ್ದಾರೆ. ರಾಯಚೂರಿನಲ್ಲಿ ಮಾತನಾಡಿದ ಅವರು, 16ನೇ ಹಣಕಾಸು ಆಯೋಗವನ್ನು ಬೇಟಿ ಮಾಡಿ ಹೆಚ್ಚುವರಿ ಮನವಿ ಸಲ್ಲಿಸಿದ್ದೆ. ಅದರ ಬಗ್ಗೆ ಪ್ರಧಾನಿ, ಹಣಕಾಸು ಸಚಿವರ ಜತೆ ಮಾತನಾಡಬೇಕಿದೆ. ಬಾಕಿ ಇರುವ ಮಸೂದೆಗಳ ಬಗ್ಗೆ ಚರ್ಚಿಸಲು ರಾಷ್ಟ್ರಪತಿಗಳ ಭೇಟಿಗೆ ಅನುಮತಿ ಕೋರಿದ್ದೇನೆ. ಅವರು ಮಂಗಳವಾರ ಬೆಳಗ್ಗೆ 11:20 ಕ್ಕೆ ಭೇಟಿಗೆ ಸಮಯ ನೀಡಿದ್ದಾರೆ. ಹೀಗಾಗಿ ದೆಹಲಿಗೆ ತೆರಳಲಿದ್ದೇನೆ ಎಂದರು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *