Headlines

ಎಣ್ಣೆ ಮತ್ತಲ್ಲಿ ಗುಂಡು ಹಾರಿಸಿಕೊಂಡ ಆಸಾಮಿ, ಸ್ಫೋಟಕ ಅಂಶ ಬಿಚ್ಚಿಟ್ಟ ಎಸ್ಪಿ

ಎಣ್ಣೆ ಮತ್ತಲ್ಲಿ ಗುಂಡು ಹಾರಿಸಿಕೊಂಡ ಆಸಾಮಿ, ಸ್ಫೋಟಕ ಅಂಶ ಬಿಚ್ಚಿಟ್ಟ ಎಸ್ಪಿ


ಕೊಪ್ಪಳ, ಅ.27: ಕುಡಿತದಿಂದ ಜೀವಕ್ಕೆ ಅಪಾಯ ತಂದುಕೊಂಡ ಅನೇಕ ಘಟನೆಗಳನ್ನು ನೋಡಿದ್ದೇವೆ. ಇದೀಗ ಕೊಪ್ಪಳ ಜಿಲ್ಲೆಯ ಕುಕುನೂರು ಎಂಬಲ್ಲಿ ನಿನ್ನೆ ರಾತ್ರಿ 8.30 ರಿಂದ 9.00 ಗಂಟೆಯ ನಡುವೆ ಆನಂದ್ ನಿಂಗಪ್ಪ ಪೊಲೀಸ್ ಪಾಟೀಲ್ ಎಂಬ ವ್ಯಕ್ತಿ ತಮಗೆ ತಾವೇ ಗುಂಡು ಹಾರಿಸಿದ್ದಾರೆ. ಮದ್ಯಪಾನದ ಅಮಲಿನಲ್ಲಿದ್ದ ಅವರು ಸಿಂಗಲ್ ಬ್ಯಾರೆಲ್ ವೆಪನ್ ಬಳಸಿ ಗುಂಡು ಹಾರಿಸಿಕೊಂಡಿರುವ ಬಗ್ಗೆ ಪ್ರಾಥಮಿಕ ತನಿಖೆಯಿಂದ ಸೂಚಿಸಲಾಗಿದೆ. ಘಟನೆ ಕುರಿತು, ಗಾಯಾಳು ಮಾವ ಹನುಮಂತಪ್ಪ ಅವರು ನೀಡಿದ ದೂರಿನ ಜಿಲ್ಲಾಧಿಕಾರಿ ಆರ್ಮ್ಸ್ ಆಕ್ಟ್ (ಶಸ್ತ್ರಾಸ್ತ್ರ ಕಾಯಿದೆ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಎಸ್‌ಪಿ, ಸಿಪಿಐ ಮತ್ತು ಡಿವೈಎಸ್‌ಪಿ ಸೇರಿದಂತೆ ಅಧಿಕಾರಿಗಳು ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳು ಜತೆ ಮಾತನಾಡಿದ್ದಾರೆ. ಪ್ರಸ್ತುತ ಆನಂದ್ ನಿಂಗಪ್ಪ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ. ಈ ವೇಳೆ ಬಳಸಿದ ವೆಪನ್ ಮೂಲದ ಘಟನೆ ಬಗ್ಗೆ ತೀವ್ರ ತನಿಖೆ ನಡೆಸುತ್ತಿದೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *