ಸೂಪರ್‌ಸ್ಟಾರ್‌ ರಜನಿಕಾಂತ್‌ ಪೋಯೆಸ್‌ ಗಾರ್ಡನ್‌ ನಿವಾಸಕ್ಕೆ ದಿಢೀರನೇ ನುಗ್ಗಿದ ತಮಿಳುನಾಡು ಪೊಲೀಸ್‌, ಆಗಿದ್ದೇನು? | Police Raid Rajinikanth Dhanush House Following Bomb Threat Email Hoax San

ಸೂಪರ್‌ಸ್ಟಾರ್‌ ರಜನಿಕಾಂತ್‌ ಪೋಯೆಸ್‌ ಗಾರ್ಡನ್‌ ನಿವಾಸಕ್ಕೆ ದಿಢೀರನೇ ನುಗ್ಗಿದ ತಮಿಳುನಾಡು ಪೊಲೀಸ್‌, ಆಗಿದ್ದೇನು? | Police Raid Rajinikanth Dhanush House Following Bomb Threat Email Hoax San



ಸೂಪರ್‌ಸ್ಟಾರ್‌ ರಜನಿಕಾಂತ್‌ ಪೋಯೆಸ್‌ ಗಾರ್ಡನ್‌ ನಿವಾಸಕ್ಕೆ ದಿಢೀರನೇ ನುಗ್ಗಿದ ತಮಿಳುನಾಡು ಪೊಲೀಸ್‌, ಆಗಿದ್ದೇನು? | Police Raid Rajinikanth Dhanush House Following Bomb Threat Email Hoax San

Bomb Squad Raids Rajinikanth and Dhanush Residences ರಜನಿಕಾಂತ್ ಮತ್ತು ನಟ ಧನುಷ್ ಅವರ ಮನೆಗಳಿಗೆ ಬಾಂಬ್ ಸ್ಫೋಟಿಸುವುದಾಗಿ ಇಮೇಲ್ ಮೂಲಕ ಬೆದರಿಕೆ ಬಂದಿತ್ತು.  ಪೊಲೀಸರು ಮತ್ತು ಬಾಂಬ್ ನಿಷ್ಕ್ರಿಯ ದಳ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದಾಗ, ಅದು ನಕಲಿ ಬೆದರಿಕೆ ಎಂದು ತಿಳಿದುಬಂದಿದೆ.

ಚೆನ್ನೈ (ಅ.28): ದಕ್ಷಿಣ ಭಾರತದ ಸೂಪರ್‌ಸ್ಟಾರ್ ನಟ ರಜನಿಕಾಂತ್ ಮತ್ತು ನಟ ಧನುಷ್ ಅವರ ಮನೆಗಳಿಗೆ ಸೋಮವಾರ ಪೊಲೀಸರು ಇದ್ದಕ್ಕಿದ್ದಂತೆ ಆಗಮಿಸಿದರು. ಅವರೊಂದಿಗೆ ಬಾಂಬ್ ಸ್ಕ್ವಾಡ್ ಕೂಡ ಆಗಮಿಸಿತು. ರಜನಿಕಾಂತ್ ಅವರ ಮನೆಗೆ ಪೊಲೀಸರ ಹಠಾತ್ ಆಗಮನ ಅಭಿಮಾನಿಗಳ ಅಚ್ಚರಿಗೆ ಕಾರಣವಾಗಿತ್ತು. ಅಷ್ಟಕ್ಕೂ ಡಿಢೀರ್‌ ಆಗಿ ಪೊಲೀಸರು ಬರಲು ಕಾರಣವೇನು ಅಂತಾ ಅಭಿಮಾನಿಗಳು ಕುತೂಹಲದ ಕಣ್ಣಿನಿಂದ ನೋಡಿದ್ದಾರೆ.ರಜನಿಕಾಂತ್ ಜೊತೆಗೆ, ಪೊಲೀಸರು ಅವರ ಮಗಳ ಮಾಜಿ ಪತಿ ನಟ ಧನುಷ್ ಅವರ ಮನೆಯನ್ನು ಸಹ ತಲುಪಿದ್ದರು. ನಿಜಕ್ಕೂ ಅಲ್ಲಿ ಆಗಿದ್ದೇನು ಅನ್ನೋದರ ವಿವರ ಇಲ್ಲಿದೆ.

ಸೂಪರ್‌ಸ್ಟಾರ್‌ಗಳಾದ ರಜನಿಕಾಂತ್ ಮತ್ತು ಧನುಷ್‌ಗೆ ಬೆದರಿಕೆಗಳು ಬಂದಿದ್ದವು. ತಮಿಳುನಾಡಿನ ಡಿಜಿಪಿಗೆ ಸೂಪರ್‌ಸ್ಟಾರ್‌ಗಳ ಮನೆಗಳನ್ನು ಬಾಂಬ್‌ಗಳಿಂದ ಸ್ಫೋಟಿಸುವುದಾಗಿ ಇಮೇಲ್ ಮೂಲಕ ಬೆದರಿಕೆ ಬಂದಿತ್ತು. ಅದರ ನಂತರ, ಪೊಲೀಸರು ಸೂಪರ್‌ಸ್ಟಾರ್‌ಗಳ ಭದ್ರತೆಯನ್ನು ಹೆಚ್ಚಿಸಿ ಈ ಬಗ್ಗೆ ತನಿಖೆ ನಡೆಸಿದರು. ಈ ಬೆದರಿಕೆಗಳು ನಕಲಿ ಎಂದು ವರದಿಯೊಂದು ತಿಳಿಸಿದೆ. ದಿ ಹಿಂದೂ ವರದಿಯ ಪ್ರಕಾರ, ಕೆಲವು ಅಪರಿಚಿತ ವ್ಯಕ್ತಿಗಳು ಡಿಜಿಪಿಗೆ ಇಮೇಲ್ ಮೂಲಕ ಬೆದರಿಕೆ ಹಾಕಿದ್ದಾರೆ. ಧನುಷ್ ಮತ್ತು ರಜನಿಕಾಂತ್ ಅವರ ಮನೆಗಳಲ್ಲಿ ಬಾಂಬ್‌ಗಳನ್ನು ಇಡಲಾಗಿದೆ ಎಂದು ಅವರು ಹೇಳಿದ್ದಾರೆ. ಈ ಮೇಲ್ ನಂತರ, ಪೊಲೀಶರು ತಕ್ಷಣವೇ ಇವರ ಮನೆಗಳಿಗೆ ನುಗ್ಗಿ ಪರಿಶೀಲನೆ ಮಾಡಿ ಭದ್ರತೆ ಖಚಿತಪಡಿಸಿದ್ದಾರೆ.

ರಜನಿಕಾಂತ್ ಮತ್ತು ಧನುಷ್ ಮನೆಯಲ್ಲಿ ಬಾಂಬ್?

ಈ ಬೆದರಿಕೆ ಇಮೇಲ್ ನಂತರ, ಬಾಂಬ್ ನಿಷ್ಕ್ರಿಯ ದಳದ ಜೊತೆಗೆ ಪೊಲೀಸರು ರಜನಿಕಾಂತ್ ಅವರ ಮನೆಗೆ ತಲುಪಿ ಪರಿಶೀಲನೆ ನಡೆಸಿದರು. ಅದೇ ರೀತಿ, ಧನುಷ್ ಅವರ ಮನೆಯನ್ನೂ ಪರಿಶೀಲಿಸಲಾಯಿತು. ನಂತರ ಇದು ನಕಲಿ ಇಮೇಲ್ ಎಂದು ಕಂಡುಬಂದಿದೆ.

ಇನ್ನೂ ಕೆಲವರಿಗೆ ಬಂದಿದ್ದ ಬೆದರಿಕೆ ಕರೆ

ಇದಕ್ಕೂ ಮೊದಲು, ಅಕ್ಟೋಬರ್ 2 ರಂದು, ಇಮೇಲ್ ಮೂಲಕ ಬೆದರಿಕೆ ಹಾಕಲಾಗಿತ್ತು. ಅದರಲ್ಲಿ ರಾಜ್ಯದ ಅನೇಕ ವಿಐಪಿ ಕಚೇರಿಗಳು ಮತ್ತು ಮನೆಗಳಲ್ಲಿ ಬಾಂಬ್‌ಗಳನ್ನು ಇಡಲಾಗಿದೆ ಎಂದು ಹೇಳಲಾಗಿತ್ತು. ಪಟ್ಟಿಯಲ್ಲಿ ನಟಿ ತ್ರಿಶಾ ಕೃಷ್ಣನ್ ಮತ್ತು ಇತರರ ಹೆಸರೂ ಸೇರಿತ್ತು. ನಂತರ ಅಕ್ಟೋಬರ್ 9 ರಂದು, ನಟ ಮತ್ತು ನಾಯಕ ವಿಜಯ್ ಅವರ ಮನೆಯಲ್ಲಿ ಬಾಂಬ್ ಇಡುವುದಾಗಿ ಬೆದರಿಕೆ ಹಾಕಿದ ಆರೋಪಿಯನ್ನು ಪೊಲೀಸರು ಬಂಧಿಸಿದರು. ಆತ ವಿಜಯ್‌ ಮನೆಗೆ ನಕಲಿ ಕರೆ ಮಾಡಿದ್ದ.

ಇಳಯರಾಜಾಗೂ ಬಂದಿದ್ದ ಬೆದರಿಕೆ ಕರೆ

ಇಷ್ಟು ಮಾತ್ರವಲ್ಲದೆ, ಅಕ್ಟೋಬರ್ 14 ರಂದು ಪ್ರಸಿದ್ಧ ಸಂಗೀತಗಾರ ಇಳಯರಾಜ ಅವರ ಸ್ಟುಡಿಯೋಗೆ ಇದೇ ರೀತಿಯ ನಕಲಿ ಮೇಲ್ ಬಂದಿತ್ತು. ಪೊಲೀಸ್ ತನಿಖೆಯಲ್ಲಿ ಆ ಮೇಲ್ ನಕಲಿ ಎಂದು ಕಂಡುಬಂದಿದೆ.



Source link

Leave a Reply

Your email address will not be published. Required fields are marked *