ರೇಣುಕಾ ಸ್ವಾಮಿ (ರೇಣುಕಾ ಸ್ವಾಮಿ) ಕೊಲೆ ಪ್ರಕರಣದ ಎಲ್ಲ ಆರೋಪಿಗಳ ಮೇಲೆ ದೋಷಾರೋಪ ನಿಗದಿ ಇಂದು (ಅಕ್ಟೋಭರ್ 31) ಆಗಲಿದೆ. ಆದರೆ ದೋಷಾರೋಪ ನಿಗದಿಯನ್ನು ನ್ಯಾಯಾಲಯವು ನವೆಂಬರ್ 3ಕ್ಕೆ ಮುಂದೂಡಲಾಗಿದೆ. ಇಂದು ದರ್ಶನ್ ಹಾಗೂ ಇತರ ಆರೋಪಿಗಳ ವಿಡಿಯೋ ಕಾನ್ಫರೆನ್ಸ್ ಮೂಲಕ ವಿಚಾರಣೆಗೆ ಹಾಜರಾಗಿದ್ದರು. ಆದರೆ ಕೆಲವೇ ನಿಮಿಷಕ್ಕೆ ವಿಚಾರಣೆ ಮುಗಿದಿದೆ, ದೋಷಾರೋಪ ನಿಗದಿಯನ್ನು ಮುಂದೂಡಲಾಗಿದೆ. ಜೊತೆಗೆ ದೋಷಾರೋಪ ನಿಗದಿ ಮಾಡುವ ದಿನದಂದು ಕಡ್ಡಾಯವಾಗಿ ಎಲ್ಲ ಆರೋಪಿಗಳು ಹಾಜರಿರಬೇಕು ಎಂದು ನ್ಯಾಯಾಧೀಶರು ಹೇಳಿದ್ದಾರೆ.
ರೇಣುಕಾ ಸ್ವಾಮಿ ನಿಧನ ಸುಮಾರು ಒಂದೂವರೆ ವರ್ಷದ ಬಳಿಕ ಇದೀಗ ದೋಷಾರೋಪ ನಿಗದಿ ಆಗಲಿದೆ. ನವೆಂಬರ್ 3 ರಂದು ದರ್ಶನ್ ಹಾಗೂ ಇತರ ಆರೋಪಿಗಳ ಮೇಲೆ ಆರೋಪ ಹೊರಿಸಲಾಗಿದ್ದು, ಆರೋಪಿಗಳಿಗೆ ಓದಿ ಹೇಳಲಾಗಿದೆ. ಬಳಿಕ ನ್ಯಾಯಾಧೀಶರು ಈ ಆರೋಪಗಳನ್ನು ಒಪ್ಪಿಕೊಳ್ಳುತ್ತೀರೆಯೇ ಎಂದು ಆರೋಪಿಗಳಿಗೆ ಕೇಳುತ್ತಾರೆ. ಒಂದು ವೇಳೆ ಆರೋಪಿಗಳು ತಮ್ಮ ಮೇಲಿರುವ ಆರೋಪಗಳನ್ನು ಒಪ್ಪಿಕೊಂಡರೆ ಶಿಕ್ಷೆ ಪ್ರಕಟ.
ಒಂದೊಮ್ಮೆ ಆರೋಪಿಗಳ ಆರೋಪಗಳನ್ನು ನಿರಾಕರಿಸಿದರೆ ಸಾಕ್ಷ್ಯಗಳ ವಿಚಾರಣೆ. ಸಾಕ್ಷ್ಯಗಳ ವಿಚಾರಣೆಗೆ ದಿನಾಂಕವನ್ನು ನಿಗದಿ ಪಡಿಸದಿದ್ದರೆ. ಈ ಪ್ರಕರಣದಲ್ಲಿ ಸಾಕಷ್ಟು ಸಂಖ್ಯೆಯ ಸಾಕ್ಷ್ಯಗಳು ಇರುವ ಕಾರಣ ಸಹಜವಾಗಿಯೇ ಎಲ್ಲರ ವಿಚಾರಣೆ, ಮರು ವಿಚಾರಣೆಗಳಿಗೆ ಸುಮಾರು ಒಂದರಿಂದ ಎರಡು ವರ್ಷ ಸಮಯ ಹಿಡಿಯುವ ಸಾಧ್ಯತೆಯಿದೆ.
ಇದನ್ನೂ ಓದಿ:ರೇಣುಕಾ ಸ್ವಾಮಿ ಕೊಲೆ ಆರೋಪಿಗೆ ಮಧ್ಯಂತರ ಜಾಮೀನು ಮಂಜೂರು
ನವೆಂಬರ್ 3 ರಂದು ದರ್ಶನ್ ಹಾಗೂ ಇತರ ಆರೋಪಿಗಳ ಪಾಲಿಗೆ ಅತ್ಯಂತ ಮಹತ್ವದ ದಿನ ಆಗಲಿದೆ. ಅಂದು ನಿಗದಿ ಆಗುವ ಆರೋಪಗಳ ಮೇಲೆಯೇ ಮುಂದಿನ ವಿಚಾರಣೆ. ವೈದ್ಯರು ಅಥವಾ ತನಿಖಾಧಿಕಾರಿಗಳು ಈ ದೋಷಾರೋಪವನ್ನು ನಿಗದಿ ಮಾಡಲಿದ್ದಾರೆ. ದರ್ಶನ್ ವಿರುದ್ಧ ಯಾವ ಆರೋಪಗಳನ್ನು ಹೊರಿಸಲಿದ್ದಾರೆ ಎಂಬುದು ಕುತೂಹಲಕಾರಿ ವಿಷಯವಾಗಿದೆ. ಈಗ ಜೈಲಿನಲ್ಲಿರುವ ಏಳು ಜನರು ಮಾತ್ರವೇ ಪ್ರಕರಣದ ಎಲ್ಲ ಆರೋಪಿಗಳ ಮೇಲೂ ದೋಷಾರೋಪದ ನಿಗದಿ ಆಗಲಿದೆ. ಇವರಲ್ಲಿ ಕೆಲವರ ಹೆಸರನ್ನು ಕೈಬಿಡುವ ಸಾಧ್ಯತೆಯೂ ಇದೆ.
ದರ್ಶನ್ ಪರ ವಕೀಲರು ಈ ಹಿಂದೆಯೇ ವಿಚಾರಣೆ ವೇಳೆ ಶೀಘ್ರವಾಗಿ ದೋಷಾರೋಪ ನಿಗದಿ ಮಾಡಿ ಸಾಕ್ಷ್ಯಗಳ ವಿಚಾರಣೆ ನಡೆಸುವಂತೆ ಒತ್ತಾಯಿಸಿದರು. ಆದರೆ ಸರ್ಕಾರಿ ವಕೀಲರು ದೋಷಾರೋಪ ನಿಗದಿಗೆ ಸಮುಯ ಕೇಳಿದ್ದರು. ದರ್ಶನ್ ಪರ ವಕೀಲರು, ತಾವು ವಿಚಾರಣೆ ಎದುರಿಸಿಯೇ ನ್ಯಾಯಾಲಯದಿಂದ ಹೊರಬರುವುದಾಗಿ ಹೇಳಿದ್ದಾರೆ. ಜೊತೆಗೆ, ನ್ಯಾಯಾಧೀಶರು ಸಹ, ಎರಡೂ ಕಡೆಯವರು ಸಾಕ್ಷ್ಯಗಳ ವಿಚಾರಣೆಗೆ ಸಹಕರಿಸಬೇಕು ಎಂದು ಮನವಿಯನ್ನು ಸಹ ಮಾಡಿದರು.
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ರಂದು ಪ್ರಕಟಿಸಲಾಗಿದೆ – 12:31 pm, ಶುಕ್ರ, 31 ಅಕ್ಟೋಬರ್ 25