ರೇಣುಕಾಸ್ವಾಮಿ ಕೊಲೆ ಪ್ರಕರಣ (ರೇಣುಕಾಸ್ವಾಮಿ ಕೇಸ್ ಕೇಸ್) ಎಲ್ಲ ಆರೋಪಿಗಳ ದೋಷಾರೋಪಣೆ ನಿಗದಿ ಪ್ರಕ್ರಿಯೆ ನಡೆದಿದೆ. ಬೆಂಗಳೂರಿನ 64ನೇ ಸಿಸಿಹೆಚ್ ನ್ಯಾಯಾಲಯಕ್ಕೆ ಎಲ್ಲ ಆರೋಪಿಗಳು ಇಂದು (ನವೆಂಬರ್ 3) ಹಾಜರಾದರು. ದರ್ಶನ್ (ದರ್ಶನ್)ಪವಿತ್ರಾ ಗೌಡ ಸೇರಿದಂತೆ ಎಲ್ಲ ಆರೋಪಿಗಳು ಕೂಡ ತಮ್ಮ ಮೇಲಿನ ಆರೋಪಗಳನ್ನು ನಿರಾಕರಿಸಿದ್ದಾರೆ. ಮುಂದಿನ ಸಾಕ್ಷಿಗಳ ವಿಚಾರಣೆಗೆ ನ್ಯಾಯಾಲಯ ದಿನಾಂಕ ನಿಗದಿ ಮಾಡಿದೆ. ನವೆಂಬರ್ 10 ರಂದು ವಿಚಾರಣೆಗೆ ದಿನಾಂಕ ನಿಗದಿಯಾಗಿದೆ.
ಇದು ಹೈಪ್ರೊಫೈಲ್ ಕೇಸ್ ಆದ್ದರಿಂದ ಕೋರ್ಟ್ ಹಾಲ್ನಲ್ಲಿ ಅನೇಕ ವಕೀಲರು ಕಿಕ್ಕಿರಿದಿದ್ದರು. ಜನದಟ್ಟಣೆಯನ್ನು ನೋಡಿ ನ್ಯಾಯಾಧೀಶರು ನಕ್ಕರು. ಪ್ರಕರಣಕ್ಕೆ ಸಂಬಂಧಿಸಿ ಎಲ್ಲರೂ ಹೊರಗೆ ಹೋಗುವಂತೆ ಸೂಚಿಸಲಾಗಿದೆ. ಆದರೂ ಕೂಡ ಗದ್ದಲ ನಿಲ್ಲಲಿಲ್ಲ. ಬಳಿಕ ಮುಚ್ಚಿದ ಕೊಠಡಿಯಲ್ಲಿ ವಿಚಾರಣೆ ನಡೆಸಲು ಜಡ್ಜ್ ನಿರ್ಧರಿಸಿದರು. ಜನರನ್ನು ಕದಲಿಸಿದ ನಂತರ ದೋಷಾರೋಷಣೆ ನಿಗದಿ ಪ್ರಕ್ರಿಯೆ ಪ್ರಾರಂಭ.
ಇದನ್ನೂ ಓದಿ: ಹಣೆಗೆ ಕುಂಕುಮ ಇಟ್ಟುಕೊಂಡು ಕೋರ್ಟ್ ವಿಚಾರಣೆಗೆ ದರ್ಶನ್ ಹಾಜರು; ಕಿಕ್ಕಿರಿದ ವಕೀಲರು
ಜಡ್ಜ್ ಸಮ್ಮುಖದಲ್ಲಿ ಆರೋಪಿಗಳನ್ನು ಬಂಧಿಸಿದರು. ಪವಿತ್ರಾ ಗೌಡ, ದರ್ಶನ್ ಸೇರಿದಂತೆ ಒಬ್ಬೊಬ್ಬರ ಹೆಸರನ್ನೇ ಬೆಂಚ್ ಕ್ಲರ್ಕ್ ಕರೆದರು. ಪ್ರಮುಖ ಆರೋಪಿ ಪವಿತ್ರಾ ಗೌಡಗೆ ಒಂದಷ್ಟು ಪ್ರಶ್ನೆಗಳನ್ನು ಜಡ್ಜ್ ಕೇಳಿದರು. ಕೊಲೆ, ಅಪಹರಣ, ಸಾಕ್ಷಿನಾಶ, ಅಕ್ರಮ ಕೂಟ, ಕ್ರಿಮಿನಲ್ ಒಳಸಂಚು ಸೇರಿದಂತೆ ಹಲವು ಆರೋಪಗಳನ್ನು ದರ್ಶನ್ ಮೇಲೆ ಹೊರಿಸಲಾಗಿದೆ. ಎಲ್ಲ ಆರೋಪಿಗಳ ಎದುರು ದೋಷಾರೋಪಗಳನ್ನು ಓದಿ ಹೇಳಲಾಗಿದೆ. ಒಪ್ಪಿಕೊಂಡರೆ ಶಿಕ್ಷೆ ಪ್ರಕಟವಾಗುತ್ತಿತ್ತು. ಆರೋಪಗಳನ್ನು ಒಪ್ಪಿಕೊಂಡ ಕಾರಣ ಸಾಕ್ಷ್ಯಗಳ ವಿಚಾರಣೆಗೆ ದಿನಾಂಕ ನಿಗದಿಯಾಗಿದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.