
<p>’ಬ್ರಹ್ಮಗಂಟು’ ಮತ್ತು ‘ನಾ ನಿನ್ನ ಬಿಡಲಾರೆ’ ಧಾರಾವಾಹಿಗಳ ಮಹಾಸಂಗಮದಲ್ಲಿ, ದೀಪಾ ಮತ್ತು ಚಿರು ಅವರ ಪ್ರವೇಶದಿಂದ ದುರ್ಗಾ ಮತ್ತು ಶರತ್ ಮದುವೆಗೆ ಇದ್ದ ಅಡ್ಡಿ ನಿವಾರಣೆಯಾಗುತ್ತದೆ. ದುರ್ಗಾಳ ಮಹತ್ವವನ್ನು ಮಗಳು ಹಿತಾಗೆ ಮನವರಿಕೆ ಮಾಡಲು ದೀಪಾ ಮಾಡಿದ ಯೋಜನೆ ಎನಾಗತ್ತೆ? ಕುತೂಹಲದ ತಿರುವು…</p><img><p>ಒಂದೆಡೆ ಬ್ರಹ್ಮಗಂಟು, ಇನ್ನೊಂದೆಡೆ ನಾ ನಿನ್ನ ಬಿಡಲಾರೆ. ಎರಡೂ ಸೀರಿಯಲ್ಗಳು ಭಿನ್ನ ಭಿನ್ನ ಕಥಾ ಹಂದರ ಹೊಂದಿದ್ದರೂ ಇಲ್ಲಿ ದೀಪಾ ಮತ್ತು ಅಲ್ಲಿ ದುರ್ಗಾ ಪಾಡು ಒಂದರ್ಥದಲ್ಲಿ ಒಂದೇ. ಮದುವೆಯಾದರೂ ಗಂಡನ ಜೊತೆ ಸಂಬಂಧ ಬೆಳೆಸಿಕೊಳ್ಳದ ನಾಯಕಿಯರು ಇವರು.</p><img><p>ಇತ್ತ ದೀಪಾ ಚಿರುವನ್ನು ಒಲಿಸಿಕೊಳ್ಳಲು ನೋಡುತ್ತಿದ್ದರೆ, ಅತ್ತ ದುರ್ಗಾಳಿಗೆ ಅಂಬಿಕಾ ಮಗಳು ಹಿತಾನೇ ಪ್ರಪಂಚ. ಆದರೆ ಹಿತಾಗೆ ದುರ್ಗಾ ಬೇಕಾದರೂ ಆಕೆಯನ್ನು ಅಮ್ಮ ಎಂದು ಒಪ್ಪಿಕೊಳ್ಳಲು ಆಕೆ ತಯಾರಿಲ್ಲ. ಅವಳು ಫ್ರೆಂಡ್ ಅಷ್ಟೇ ಹಿತಾಗೆ.</p><img><p>ಇದೀಗ ಶರತ್ ಮತ್ತು ದುರ್ಗಾ ಮರು ಮದುವೆಯ ಬಗ್ಗೆ ಮಾತುಕತೆ ನಡೆಯುತ್ತಿದ್ದರೂ ಹಿತಾ ಅದನ್ನು ಒಪ್ಪುತ್ತಿಲ್ಲ. ಇದೇ ವೇಳೆ Naa Ninna Bidalaare ಸೀರಿಯಲ್ಗೆ ಬ್ರಹ್ಮಗಂಟು ದೀಪಾ ಮತ್ತು ಚಿರು ಎಂಟ್ರಿಯಾಗಿದೆ.</p><img><p>ಸುಕನ್ಯಾಳ ಕುತಂತ್ರದಿಂದ ಚಿರು ಮತ್ತು ದೀಪಾಳ ಜೀವಕ್ಕೆ ಅಪಾಯವಿದ್ದಾಗ, ಶರತ್ ಬಂದು ರಕ್ಷಿಸಿದ್ದಾನೆ. ಈ ಮೂಲಕ ಎರಡೂ ಸೀರಿಯಲ್ನ ಮಹಾಸಂಗಮ ನಡೆಯುತ್ತಿದೆ.</p><img><p>ಇದೀಗ ಹಿತಾಳ ಬಾಳಿನಲ್ಲಿ ದುರ್ಗಾ ಎಷ್ಟು ಮಹತ್ವದ ಪಾತ್ರ ವಹಿಸುತ್ತಾಳೆ ಎಂದು ತಿಳಿಸಲು ದೀಪಾ ಮಾಡಿದ ಪ್ಲ್ಯಾನ್ ಸಕ್ಸಸ್ ಆಗಿದೆ. ದುರ್ಗಾ ಮನೆ ಬಿಟ್ಟು ಹೋಗುತ್ತಿದ್ದಾಳೆ. ಅವಳು ಈ ಮನೆಯಲ್ಲಿ ಇರಬೇಕು ಎಂದರೆ ನಿನ್ನ ಅಪ್ಪನನ್ನು ಮದುವೆಯಾಗಬೇಕು. ಆದರೆ ನಿನಗೆ ಅದು ಇಷ್ಟವಿಲ್ಲವಲ್ಲ. ಅದಕ್ಕಾಗಿಯೇ ಮನೆ ಬಿಟ್ಟು ಹೋಗುತ್ತಾಳೆ ಎಂದಿದ್ದಾಳೆ ದೀಪಾ.</p><img><p>ಇದನ್ನು ಕೇಳಿ ಹಿತಾಗೆ ಶಾಕ್ ಆಗಿದೆ. ತಮ್ಮ ಅಮ್ಮ ಅಂಬಿಕಾ ಮಾಡುವ ಎಲ್ಲಾ ಕಾರ್ಯಗಳನ್ನೂ ದುರ್ಗಾ ಮಾಡುತ್ತಿರುವುದನ್ನು ನೆನಪಿಸಿಕೊಂಡ ಆಕೆ ದುರ್ಗಾ ಬೇಕು ಎಂದು ಓಡಿ ಹೋಗಿ ಆಕೆಯನ್ನು ತಬ್ಬಿಕೊಂಡಿದ್ದಾಳೆ. ಶರತ್ ಮತ್ತು ದುರ್ಗಾಳ ಮದುವೆಗೆ ಒಪ್ಪಿಗೆ ಕೊಟ್ಟಿದ್ದಾಳೆ.</p><img><p>ಈ ರೀತಿಯಲ್ಲಿ ದೀಪಾ ಮತ್ತು ಚಿರು ಸೇರಿ ಪವಾಡವನ್ನೇ ಮಾಡಿದ್ದಾರೆ. ಎರಡೂ ಸೀರಿಯಲ್ಗಳ ಮಹಾಸಂಗಮ ವೀಕ್ಷಕರಿಗೆ ಆನಂದವನ್ನು ನೀಡುತ್ತಿದೆ.</p><p>ಪ್ರೊಮೋ ನೋಡಲು ಇದರ ಮೇಲೆ ಕ್ಲಿಕ್ ಮಾಡಿ</p>
Source link
Brahmagantu ಬಿಟ್ಟು 'ನಾ ನಿನ್ನ ಬಿಡಲಾರೆ'ಗೆ ಎಂಟ್ರಿ ಕೊಟ್ಟ ದೀಪಾ-ಚಿರು: ಊಹಿಸಲಾಗದ ಪವಾಡ ನಡೆದೇ ಹೋಯ್ತು!