Headlines

ಕುಡಿದು ಬರ್ತಿದ್ದ ಡ್ರೈವರ್​ಗಳಿಗೆ ಲಂಚ ಪಡೆದು ಡ್ಯೂಟಿ: ಅಧಿಕಾರಿಗಳಿಗೆ ಶಾಕ್​ಕೊಟ್ಟ BMTC

ಕುಡಿದು ಬರ್ತಿದ್ದ ಡ್ರೈವರ್​ಗಳಿಗೆ ಲಂಚ ಪಡೆದು ಡ್ಯೂಟಿ: ಅಧಿಕಾರಿಗಳಿಗೆ ಶಾಕ್​ಕೊಟ್ಟ BMTC


ಬೆಂಗಳೂರು, ನವೆಂಬರ್ 05: ಕುಡಿದು ಕೆಲಸಕ್ಕೆ ಬರ್ತಿದ್ದ ಡ್ರೈವರ್ ಗಳ ಬಳಿ ಲಂಚ ಪಡೆದು ಬಿಎಂಟಿಸಿ ಅಧಿಕಾರಿಗಳು ಡ್ಯೂಟಿ ನೀಡಿದ್ದ ಪ್ರಕರಣ ಸಂಬಂಧ ಡಿಪೋ ಮ್ಯಾನೇಜರ್ ಸೇರಿದಂತೆ 9 ಜನರನ್ನು ಅಮಾನತುಗೊಳಿಸಲಾಗಿದೆ. ಅಕ್ಟೋಬರ್ 13ರಂದು ಈ ಬಗ್ಗೆ TV9 ಕನ್ನಡ ವರದಿ ಮಾಡಿತ್ತು. ಆಲ್ಲೇ ಎಚ್ಚೆತ್ತುಕೊಂಡ ಬಿಎಂಟಿಸಿ, ಕಠಿಣ ಕ್ರಮಕ್ಕೆ ಮುಂದಾಗಿದೆ.

ಡಿಪೋ- 3ರ (ಕನ್ನಹಳ್ಳಿ) 5 ಎಟಿಕ್ ಬಸ್‌ಗಳನ್ನು ಚಾಲನೆ ಮಾಡಲು ಬರುವ ಕೆಲ ಚಾಲಕರು ಮದ್ಯ ಸೇವಿಸಿ ಬರುತ್ತಿದ್ದರು. ಹೀಗಿದ್ದರೂ ಸುಮಾರು 150ಕ್ಕೂ ಹೆಚ್ಚು ಡ್ರೈವರ್ ಗಳ ಬಳಿ ಅಧಿಕಾರಿಗಳು ಸಾವಿರಾರು ರೂ. ಲಂಚ ಪಡೆದು ಬಸ್ ಓಡಿಸಲು ಅವಕಾಶ ನೀಡಿದ್ದರು. ರೂಲ್ಸ್ ಪ್ರಕಾರ ಬಸ್ ಡ್ರೈವಿಂಗ್ ಮಾಡಲು ಡಿಪೋಗೆ ಬರುವ ಪ್ರತಿ ಚಾಲಕನನ್ನು ಆತ ಮದ್ಯಸೇವಿಸಿದ್ದಾನಾ ಅಥವಾ ಇಲ್ಲವಾ ಎಂದು ಅಧಿಕಾರಿಗಳು ಪರೀಕ್ಷಿಸಬೇಕು. ಕುಡಿದು ಬಂದಿದ್ದರೆ ಅಂತವರ ವಿರುದ್ಧ ಕ್ರಮ ಕೈಗೊಳ್ಳಬೇಕು. ಹೀಗಿದ್ದರೂ ಲಂಚದ ಹಣಕ್ಕಾಗಿ ಪ್ರಯಾಣಿಕರ ಜೀವದ ಜೊತೆ ಅಧಿಕಾರಿಗಳು ಚೆಲ್ಲಾಟ ಆಡಿದ್ದು ಬೆಳಕಿಗೆ ಬಂದಿತ್ತು.

ಇದನ್ನೂ ಓದಿ: ಬೆಂಗಳೂರಿನ ಸುತ್ತಮುತ್ತಲಿನ ಜನರಿಗೆ ಬಿಎಂಟಿಸಿ ಗುಡ್ ನ್ಯೂಸ್: ಇನ್ಮುಂದೆ ಅಕ್ಕಪಕ್ಕದ ಜಿಲ್ಲೆಗಳಿಗೆ ಬಸ್ ಸಂಚಾರ

ಯಾರೆಲ್ಲ ಸಸ್ಪೆಂಡ್?

ಘಟಕ ವ್ಯವಸ್ಥಾಪಕ ಎಂ.ಜಿ ಕೃಷ್ಣ, ಸಂಚಾರ ನಿರೀಕ್ಷಕ ಶ್ರೀನಿವಾಸ ಡಿ., ಇ.ಎಸ್. ಅರುಣ್ ಕುಮಾರ್, ಕಿರಿಯ ಸಹಾಯಕಿ ಪ್ರತಿಭಾ ಕೆ.ಎಸ್., ಕ.ರಾ.ಸಾ.ಹವಲ್ದಾರ್ ಮಂಜುನಾಥ ಎಂ., ಕ.ರಾ.ಸಾ. ಪೇದೆಗಳಾದ ಮಂಜುನಾಥ ಎಸ್.ಜಿ., ಚೇತನಕುಮಾರ್, ಪುನೀತ್ ಕುಮಾರ್, ಲಕ್ಷ್ಮೀ ಕೆ. ಅವರನ್ನು ಅಮಾನತು ಮಾಡಿ ಬಿಎಂಟಿಸಿ ಆದೇಶಿಸಿದೆ.

ಕಠಿಣ ಕ್ರಮ ಯಾಕೆ?

ಬೆಂಗಳೂರಿನಿಂದ ಮೇಲಿಂದ ಮೇಲೆ ಬಿಎಂಟಿಸಿ ಬಸ್ಸುಗಳು ಅಪಘಾತಕ್ಕೀಡಾಗುತ್ತಿವೆ. ಈ ಹಿನ್ನಲೆಯಲ್ಲಿ ಇಂತಹ ಪ್ರಕರಣಗಳ ತಡೆಗೆ ಬಿಎಂಟಿಸಿ ಸಾಕಷ್ಟು ಕ್ರಮಗಳನ್ನು ಕೈಗೊಳ್ಳುತ್ತಿರುವ ನಡುವೆ, ಅದೇ ಸಂಸ್ಥೆಯ ಅಧಿಕಾರಿಗಳು ಈ ನಡೆ ಕಪ್ಪು ಚುಕ್ಕೆಯಾಗಿ ಪರಿಣಮಿಸಿದೆ. ಅಪಘಾತದಲ್ಲಿ 33 ಜನರು ಪ್ರಾಣ ಕಳೆದುಕೊಂಡಿದ್ದಾರೆ. ಹೀಗಿದ್ದರೂ ಅಧಿಕಾರಿಗಳು ಬುದ್ಧಿ ಕಲಿಯದ ಹಿನ್ನಲೆಯಲ್ಲಿ ಕಠಿಣ ಕ್ರಮಕ್ಕೆ ಮುಂದಾಗಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *