
‘ಅಮೃತಧಾರೆ’ ಧಾರಾವಾಹಿಯಲ್ಲಿ, ಗೌತಮ್ ಮತ್ತು ಭೂಮಿಕಾಳ ಮದುವೆಯ ವಾರ್ಷಿಕೋತ್ಸವದಂದು ಅವರನ್ನು ಒಂದು ಮಾಡಲು ಮಲ್ಲಿ ಮತ್ತು ಆನಂದ್ ಹೋಟೆಲ್ಗೆ ಕರೆದೊಯ್ಯುತ್ತಾರೆ. ಅಲ್ಲಿ ಗೌತಮ್-ಭೂಮಿಕಾ ಹುಸಿ ಮುನಿಸು ತೋರಿದರೆ, ಇನ್ನೊಂದೆಡೆ ಆಕಾಶ್ ಮತ್ತು ಮಿಂಚು ನಡುವೆ ಮುದ್ದಾದ ಜಗಳ ನಡೆಯುತ್ತದೆ.<img><p>ಅಮೃತಧಾರೆಯಲ್ಲಿ (Amruthadhaare) ಗೌತಮ್ ಮತ್ತು ಭೂಮಿಕಾಳನ್ನು ಒಂದು ಮಾಡಲು ಮಲ್ಲಿ, ಆನಂದ್ ಎಲ್ಲಾ ಪ್ರಯತ್ನಿಸುತ್ತಿದ್ದಾರೆ. ಇಬ್ಬರನ್ನೂ ಒಂದೇ ಕಡೆ ಹೋಟೆಲ್ಗೆ ಕರೆದುಕೊಂಡು ಹೋಗುವಲ್ಲಿ ಇಬ್ಬರೂ ಯಶಸ್ವಿಯಾಗಿದ್ದಾರೆ.</p><img><p>ಮದುವೆಯ ವಾರ್ಷಿಕೋತ್ಸವದ ನಿಮಿತ್ತ ಹೋಟೆಲ್ಗೆ ಕರೆದುಕೊಂಡು ಹೋಗಲಾಗಿದೆ. ಅಲ್ಲಿ ಆಕಾಶ್ ತಿನ್ನುವ ಪರಿ ನೋಡಿ ಮಿಂಚುಗೆ ವಿಪರೀತ ಕೋಪ ಬಂದಿದೆ. ಎಷ್ಟೆಂದ್ರೂ ಅವಳು ಸಕತ್ ಕ್ಲೀನ್ ಅಲ್ಲವೆ?</p><img><p>ಅಲ್ಲಿ ಹೇಗೆ ಬೇಕೋ ತಿನ್ನುತ್ತಿದ್ದಾನೆ ಆಕಾಶ್. ಇದನ್ನು ನೋಡಿ ಮಿಂಚು ಅಹಸ್ಯ ಪಟ್ಟುಕೊಂಡಿದ್ದಾಳೆ. ಅಷ್ಟರಲ್ಲಿ ಆನಂದ್ ಪತ್ನಿ ಹೋಗಿ ಆಕಾಶ್ಗೆ ಮುದ್ದು ಮಾಡುತ್ತಾಳೆ.</p><img><p>ಇದನ್ನು ನೋಡಿ ಮಿಂಚುಗೆ ವಿಪರೀತ ಕೋಪ ಬರುತ್ತದೆ. ನೀವ್ಯಾಕೆ ಅವನನ್ನು ಮುದ್ದು ಮಾಡಿದ್ರಿ ಎಂದು ಕೇಳುತ್ತಾಳೆ. ಅದಕ್ಕೆ ಆಕೆ ಅವನು ನಿನ್ನ ಹಾಗೆ ಮುದ್ದು ಮುದ್ದು ಇದ್ದಾನಲ್ವಾ ಅದಕ್ಕೇ ಎನ್ನುತ್ತಾಳೆ.</p><img><p>ಅವನೇನು ಮುದ್ದು ಇದ್ದಾನೆ, ಮುದ್ದೆ ಹಾಗೆ ಇದ್ದಾನೆ ಎಂದು ಕೋಪ ಮಾಡಿಕೊಳ್ಳುತ್ತಾಳೆ. ತನಗೆ ಮಿಂಚು ಏನೋ ಹೇಳುತ್ತಿದ್ದಾಳೆ ಎನ್ನುವುದನ್ನು ಅತ್ತ ಕಡೆಯಿಂದಲೇ ನೋಡುವ ತಿಂಡಿ ಪೋತ ಆಕಾಶ್, ನಿನಗೂ ಬೇಕಾ ಎಂದು ಕೇಳುತ್ತಾನೆ.</p><img><p>ಒಟ್ಟಿನಲ್ಲಿ ಅಕ್ಕ-ತಮ್ಮನ ಕ್ಯೂಟ್ ಮುದ್ದು ಮುದ್ದು ಜಗಳ ವೀಕ್ಷಕರ ಮನಸ್ಸನ್ನು ಗೆದ್ದಿದೆ. ಅದೇ ಇನ್ನೊಂದೆಡೆ, ಭೂಮಿಕಾ ಮತ್ತು ಗೌತಮ್ ಕಣ್ಸನ್ನೆಲ್ಲಿಯೇ ಮಾತನಾಡಿಕೊಳ್ಳುತ್ತಿದ್ದಾರೆ. ಆದರೆ ಹುಸಿ ಮುನಿಸು ತೋರುತ್ತಿದ್ದಾರೆ.</p>
Source link
Amruthadhaare: ತಮ್ಮಂಗೆ ಮುದ್ದು ಮಾಡಿದ್ರೆ ಈ ಅಕ್ಕಂಗೆ ಸಿಕ್ಕಾಪಟ್ಟೆ ಕೋಪ- ಒಂದಾಗೋ ಕಾಲ ಬಂದೇ ಬಿಡ್ತಾ?