![]()
<p>ಆಸ್ಟ್ರೇಲಿಯಾ ವಿರುದ್ಧದ ಮೊದಲ ಎರಡು ಟಿ20 ಪಂದ್ಯಗಳಿಗೆ ಅರ್ಷ್ದೀಪ್ ಸಿಂಗ್ ಅವರನ್ನು ಹೊರಗಿಟ್ಟಿದ್ದಕ್ಕೆ ಭಾರತದ ಬೌಲಿಂಗ್ ಕೋಚ್ ಮಾರ್ನೆ ಮಾರ್ಕೆಲ್ ಸ್ಪಷ್ಟನೆ ನೀಡಿದ್ದಾರೆ. </p><img><p>ಆಸ್ಟ್ರೇಲಿಯಾ ವಿರುದ್ಧದ ಮೊದಲ ಎರಡು ಟಿ20 ಪಂದ್ಯಗಳಿಗೆ ಅರ್ಷ್ದೀಪ್ ಸಿಂಗ್ ಅವರನ್ನು ಹೊರಗಿಟ್ಟಿದ್ದಕ್ಕೆ ಎನ್ನುವುದಕ್ಕೆ ಬೌಲಿಂಗ್ ಕೋಚ್ ಮಾರ್ನೆ ಮಾರ್ಕೆಲ್ ಕಾರಣ ನೀಡಿದ್ದಾರೆ. ಟಿ20 ವಿಶ್ವಕಪ್ಗೂ ಮುನ್ನ ಬೇರೆ ಬೇರೆ ಕಾಂಬಿನೇಷನ್ ಪ್ರಯತ್ನಿಸಲು ಈ ನಿರ್ಧಾರ ಎಂದರು.</p><img><p>ಅರ್ಷ್ದೀಪ್ ಸಿಂಗ್ ಅನುಭವಿ ಆಟಗಾರ, ತಂಡದ ಸಂಯೋಜನೆಗಳ ಬಗ್ಗೆ ಅವರಿಗೆ ಸಂಪೂರ್ಣವಾಗಿ ತಿಳಿದಿದೆ. ಅವರು ವಿಶ್ವದರ್ಜೆಯ ಬೌಲರ್, ಪವರ್ಪ್ಲೇನಲ್ಲಿ ಅತಿ ಹೆಚ್ಚು ವಿಕೆಟ್ ಪಡೆದಿದ್ದಾರೆ. ತಂಡಕ್ಕೆ ಅವರ ಮೌಲ್ಯ ಗೊತ್ತಿದೆ, ಆದರೆ ನಾವು ಬೇರೆ ಕಾಂಬಿನೇಷನ್ ಪ್ರಯತ್ನಿಸುತ್ತಿದ್ದೇವೆ.</p><img><p>ಟಿ20 ವಿಶ್ವಕಪ್ಗೂ ಮುನ್ನ ನಾವು ವಿಭಿನ್ನ ಸಂಯೋಜನೆಗಳನ್ನು ಪ್ರಯತ್ನಿಸುತ್ತಿದ್ದೇವೆ. ಅವಕಾಶ ಸಿಗದಿದ್ದಾಗ ಆಟಗಾರರು ನಿರಾಶೆಗೊಳ್ಳುವುದು ಸಹಜ. ಆದರೆ, ಅವರನ್ನು ಇನ್ನಷ್ಟು ಶ್ರಮಿಸಲು ಪ್ರೋತ್ಸಾಹಿಸುವುದು ನಮ್ಮ ಗುರಿ.</p><img><p>ಮುಂದಿನ ಟಿ20 ವಿಶ್ವಕಪ್ಗೂ ಮುನ್ನ ಕೆಲವೇ ಪಂದ್ಯಗಳಿವೆ. ಈ ಒತ್ತಡದ ಸಮಯದಲ್ಲಿ ಆಟಗಾರರು ಹೇಗೆ ಆಡುತ್ತಾರೆ ಎಂಬುದನ್ನು ಪರೀಕ್ಷಿಸುತ್ತಿದ್ದೇವೆ. ಆಟಗಾರರ ಸಾಮರ್ಥ್ಯದ ಬಗ್ಗೆ ನಮಗೆ ಯಾವುದೇ ಅನುಮಾನವಿಲ್ಲ, ಪಂದ್ಯ ಗೆಲ್ಲುವುದಷ್ಟೇ ನಮ್ಮ ಗುರಿ ಎಂದರು.</p><img><p>ಆಸ್ಟ್ರೇಲಿಯಾ ವಿರುದ್ಧದ ಮೊದಲ ಎರಡು ಟಿ20 ಪಂದ್ಯಗಳಿಗೆ ಭಾರತದ ಸ್ಟಾರ್ ವೇಗಿ ಅರ್ಷ್ದೀಪ್ ಸಿಂಗ್ ಅವರನ್ನು ತಂಡದ ಮ್ಯಾನೇಜ್ಮೆಂಟ್ ಬೆಂಚ್ ಕಾಯಿಸಿತ್ತು. 100ಕ್ಕೂ ಹೆಚ್ಚು ಟಿ20 ವಿಕೆಟ್ ಪಡೆದ ಬೌಲರ್ ಅನ್ನು ಹೊರಗಿಟ್ಟಿದ್ದಕ್ಕೆ ಟೀಕೆಗಳು ವ್ಯಕ್ತವಾಗಿದ್ದವು.</p>
Source link