ಜೀ ಕನ್ನಡ ವಾಹಿನಿಯು ಹಲವು ವರ್ಷಗಳಿಂದ ಕನ್ನಡಿಗರನ್ನು ರಂಜಿಸುತ್ತಾ ಬರುತ್ತಿದೆ. ವಿವಿಧ ರೀತಿಯ ಧಾರಾವಾಹಿಗಳು ಹಾಗೂ ರಿಯಾಲಿಟಿ ಶೋಗಳನ್ನು ನೀಡುತ್ತಾ ಬರುತ್ತಿದೆ. ಈಗ ಜೀ ಕನ್ನಡ ವಾಹಿನಿಯು ಸೋಶಿಯಲ್ ಮೀಡಿಯಾದಲ್ಲಿ ಒಂದು ಪೋಸ್ಟ್ ಅನ್ನು ಹಂಚಿಕೊಂಡಿದೆ. ಈ ಪೋಸ್ಟ್ ನಲ್ಲಿ ಜೀ ವಾಹಿನಿ ಕ್ಷಮೆ ಕೇಳಿದೆ. ಅಷ್ಟಕ್ಕೂ ಕ್ಷಮೆ ಕೇಳಲು ಅವರು ಮಾಡಿದ ತಪ್ಪೇನು? ಆ ಬಗ್ಗೆ ಇಲ್ಲಿದೆ ತಿಳಿದುಕೊಳ್ಳೋಣ.
ಜೀ ಕನ್ನಡ ವಾಹಿನಿ ಸೋಶಿಯಲ್ ಮೀಡಿಯಾದಲ್ಲಿ ಆಯಕ್ಟೀವ್ ಆಗಿದೆ. ಧಾರಾವಾಹಿಗಳ ವಿವಿಧ ಪ್ರೋಮೋ ಮತ್ತು ರಿಯಾಲಿಟಿ ಶೋಗಳ ಪ್ರೋಮೋಗಳನ್ನು ಇಲ್ಲಿ ಹಂಚಿಕೊಳ್ಳಲಾಗಿದೆ. ಆದರೆ, ಈಗ ಒಂದು ಪೋಸ್ಟ್ನ ಜೀ ಕನ್ನಡ ಹೊಸ ಹಂಚಿಕೊಂಡಿದೆ. ಇದು ಕ್ಷಮೆ ಪೋಸ್ಟ್ ಆದರೂ ಇದನ್ನು ಟಾಂಟ್ ಎಂದು ಕರೆದಿದ್ದಾರೆ.
‘ವೈವಿಧ್ಯಮಯ, ವಿಶೇಷ, ವಿಭಿನ್ನ ಕಾರ್ಯಕ್ರಮಗಳ ಮೂಲಕ ಮನರಂಜನಾ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿರುವ ನಿಮ್ಮ ಹೆಮ್ಮೆಯ ಜೀ ಕನ್ನಡ ಚಾನೆಲ್ ನಮ್ಮೆಲ್ಲರ ಮನಗೆದ್ದಿರುವುದು ಗೊತ್ತೇ ಇದೆ. ನಿಮ್ಮ ಪ್ರಶಂಸೆಯ ಜೊತೆಗೆ ಜೀ ಕನ್ನಡ ಚಾನೆಲ್ ಶುರುವಾದ ನಂತರ ಮನೋರಂಜನೆಯಲ್ಲೇ ಮುಳುಗುವ ನಾವು ರಿಮೋಟ್ ಅನ್ನು ಮರೆತು ಬಿಡುತ್ತೀವಿ, ಚಾನೆಲ್ ಬದಲಾಯಿಸುವುದೇ ಇಲ್ಲ ಎಂಬ ಪ್ರೀತಿಯ ಆರೋಪ ಕೇಳಿಬಂದಿದೆ’ ಎಂದು ಪೋಸ್ಟ್ ಮಾಡಲಾಗಿದೆ.
‘ನಮ್ಮ ಅದ್ಭುತ ಮನರಂಜನಾ ಕಾರ್ಯಕ್ರಮಗಳ ಮೂಲಕ ನಿಮಗೆ ಬೇರೆ ಚಾನೆಲ್ಗಳನ್ನು ಮರೆಯುವಂತೆ ಮಾಡಲು ದಯವಿಟ್ಟು ಕ್ಷಮೆಯಿರಲಿ. ನಿಮ್ಮ ಕ್ಷಮೆಯ ಜೊತೆಜೊತೆಗೇ ನಿಮ್ಮ ಪ್ರೀತಿಯ ಆರೋಪವನ್ನು ನಾವು ಇನ್ನೂ ಹೆಚ್ಚು ಮಾಡುತ್ತೇವೆ ಎಂಬ ಭರವಸೆ ನೀಡುತ್ತೇವೆ. ಧನ್ಯವಾದಗಳು’ ಎಂದು ಬರೆಯಲಾಗಿದೆ. ಇದು ಅವರ ಪ್ರತಿ ಸ್ಪರ್ಧಿ ಚಾನೆಲ್ಗಳಿಗೆ ನೀಡಿದ ಟಾಂಟ್ ಎಂದು ಅನೇಕರು ಹೇಳಿದ್ದಾರೆ.
ಇದನ್ನೂ ಓದಿ: ‘ಅರ್ಜುನ್ ಜನ್ಯ ಗತಿ ಏನು’; ಅಭಿಮಾನಿಯ ನೇರ ಪ್ರಶ್ನೆಗೆ ಉತ್ತರಿಸಿದ ಅನುಶ್ರೀ
ಜೀ ಕನ್ನಡ ವಾಹಿನಿಯು ಟಿಆರ್ ಪಿಯಲ್ಲಿ ಮುನ್ನಡೆ ಸಾಧಿಸುತ್ತಾ ಇದೆ. ಕನ್ನಡದ ಟಾಪ್ ಐದರಲ್ಲಿ ಇರುವ ಧಾರಾವಾಹಿಗಳ ಮೇಲೆ ಎಲ್ಲವೂ ಜೀ ಕನ್ನಡ ವಾಹನಿಯದ್ದೇ ಆಗಿದ್ದು ವಿಶೇಷವಾಗಿದೆ. ಈಗ ವಾಹಿನಿಯಲ್ಲಿ ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ ಹಾಗೂ ಕಾಮಿಡಿ ಕಿಲಾಡಿಗಳು ಶೋಗೆ ಹೊಸ ಸೀಸನ್ ಬರುತ್ತಾ ಇದೆ. ‘ಮಹಾನಟಿ ಶೋ’ಗೆ ಇಂದು (ನವೆಂಬರ್ 8) ಹಾಗೂ ನಾಳೆ (ನವೆಂಬರ್ 9) ಫಿನಾಲೆ ನಡೆಯುತ್ತಿದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ಮಾಡಿ.