ಸಿಎಂ ಆಗಿ ಸಿದ್ದರಾಮಯ್ಯ ಮುಂದುವರಿಯದಿದ್ರೆ ಸರ್ಕಾರವೇ ಪತನ: ಜಗದೀಶ್ ಶೆಟ್ಟರ್ ಸ್ಫೋಟಕ ಹೇಳಿಕೆ | Bjp Mp Jagadish Shettar On Siddaramaiah Leadership Crisis At Hubballi Rav

ಸಿಎಂ ಆಗಿ ಸಿದ್ದರಾಮಯ್ಯ ಮುಂದುವರಿಯದಿದ್ರೆ ಸರ್ಕಾರವೇ ಪತನ: ಜಗದೀಶ್ ಶೆಟ್ಟರ್ ಸ್ಫೋಟಕ ಹೇಳಿಕೆ | Bjp Mp Jagadish Shettar On Siddaramaiah Leadership Crisis At Hubballi Rav



ಸಿಎಂ ಆಗಿ ಸಿದ್ದರಾಮಯ್ಯ ಮುಂದುವರಿಯದಿದ್ರೆ ಸರ್ಕಾರವೇ ಪತನ: ಜಗದೀಶ್ ಶೆಟ್ಟರ್ ಸ್ಫೋಟಕ ಹೇಳಿಕೆ | Bjp Mp Jagadish Shettar On Siddaramaiah Leadership Crisis At Hubballi Rav

ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರು ಕಾಂಗ್ರೆಸ್ ಸರ್ಕಾರದ ಸ್ಥಿರತೆಯ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ್ದಾರೆ. ಸಿದ್ದರಾಮಯ್ಯನವರು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿದರೆ ಸರ್ಕಾರ ಪತನವಾಗುವುದು ಖಚಿತ ಎಂದು ಅವರು ಭವಿಷ್ಯ ನುಡಿದಿದ್ದಾರೆ. ಡಿಕೆ ಶಿವಕುಮಾರ್ ಅವರ ಸಿಎಂ ಆಗುವ ಆಸೆ ಕಷ್ಟಸಾಧ್ಯ ಎಂದಿದ್ದಾರೆ.

ಹುಬ್ಬಳ್ಳಿ (ನ.8): ಕಾಂಗ್ರೆಸ್ ನಲ್ಲಿ ಸಿದ್ದರಾಮಯ್ಯ ಅವರೇ ಸಿಎಂ ಆಗಿ ಮುಂದುವರೆಯಬೇಕು. ಇಲ್ಲದಿದ್ದರೆ ಸರ್ಕಾರವೇ ಪತನವಾಗುತ್ತೆ ಎಂದು ಮಾಜಿ ಸಿಎಂ, ಹಾಲಿ ಸಂಸದ ಜಗದೀಶ್ ಶೆಟ್ಟರ್ ಸ್ಫೋಟಕ ಹೇಳಿಕೆ ನೀಡಿದ್ದಾರೆ.

ಇಂದು ಹುಬ್ಬಳ್ಳಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು,ರಾಜಣ್ಣ ನಿವಾಸದಲ್ಲಿನ ಔತಣ ಕೂಟ ಏರ್ಪಡಿಸಿರುವುದು ರಾಜಕಾರಣ ಹಿನ್ನೆಲೆಯದ್ದು. ಇತ್ತ ಕಬ್ಬಿನ ದರಕ್ಕಾಗಿ ಸಭೆ, ಅತ್ತ ಔತಣಕೂಟ ಮಾಡ್ತಾರೆ ಎಂದು ಟೀಕಿಸಿದರು.

ರಾಜಣ್ಣ ಔತಣಕೂಟ ರದ್ದು ಮಾಡಿದ್ದು ಯಾಕೆ?

ಸಿಎಂ ಸಿದ್ದರಾಮಯ್ಯ ರೈತರು, ಶುಗರ್ ಫ್ಯಾಕ್ಟರಿ ಮಾಲೀಕರನ್ನ ಸಭೆಗೆ ಕರೀತಿರಿ. ಆದರೆ ಕೇವಲ ಅರ್ಧ ಗಂಟೆ ಸಭೆ ಮಾಡಲು ಆಗುತ್ತಾ? ರಾಜಣ್ಣ ಅವರಿಗೆ ಮೊದಲೇ ಬರಲು ಆಗೋಲ್ಲ ಅಂತಾ ಹೇಳಬೇಕಿತ್ತು. ಸಭೆ ನಡೆಸಬೇಕಿದೆ ಅಂತಾ ಗಟ್ಟಿಯಾಗಿ ಹೇಳಬೇಕಿತ್ತು. ಅದನ್ನು ಬಿಟ್ಟು ಈಗ ಕೊನೆ ಗಳಿಗೆಯಲ್ಲಿ ಔತಣಕೂಟ ರದ್ದು ಮಾಡಿದ್ದಾರೆ ಎಂದರು.

ಇನ್ನು ನವೆಂಬರ್ ಕ್ರಾಂತಿ ಅನ್ನೋದು ಬಿಜೆಪಿಯವರ ಅಪಪ್ರಚಾರ ಎಂಬ ಆರೋಪಕ್ಕೆ ತಿರುಗೇಟು ನೀಡಿದ ಜಗದೀಶ್ ಶೆಟ್ಟರ್. ನವೆಂಬರ್ ಕ್ರಾಂತಿ ಬಗ್ಗೆ ಬಿಜೆಪಿ ನಾಯಕರು ಹೇಳಿಲ್ಲ. ನಿನ್ನೆ ಔತಣ ಕೂಟ ಕರೆದವರೇ ಹೇಳಿದ್ದು. ಕ್ರಾಂತಿ ಆಗುತ್ತೋ, ಭ್ರಾಂತಿ ಆಗುತ್ತೋ ಗೊತ್ತಿಲ್ಲ. ಆದರೆ ಏನೋ ಒಂದು ಆಗೇ ಆಗುತ್ತೆ. ನವೆಂಬರ್ ಅಂತ್ಯದಲ್ಲಿ ರಾಜಕೀಯ ಬದಲಾವಣೆ ಆಗುತ್ತೆ ಎಂದರು.

ಡಿಕೆ ಶಿವಕುಮಾರ್ ಸಿಎಂ ಆಗಲ್ಲ?

ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಆಗ್ತಾರೆ ಅನ್ನೋ ಮನೋಭಾವದಲ್ಲಿ ಅವರ ಹಿಂಬಾಲಕರು ಇದ್ದಾರೆ

ಆದರೆ ಕಷ್ಟಸಾಧ್ಯ. ಸಿಎಂ ಆಗಿ ಸಿದ್ದರಾಮಯ್ಯ 5 ವರ್ಷ ಮುಂದುವರಿಯುತ್ತಾರೆ. ಸಿದ್ದರಾಮಯ್ಯ ಕೆಳಗಿಳಿದರೆ ಈ ಸರ್ಕಾರವೇ ಪತನವಾಗೋದು ಖಚಿತ ಎಂದರು. ಇದೇ ವೇಳೆ ಡಿಕೆ ಶಿವಕುಮಾರ ಎಲ್ಲಿಯೂ ಸಿಎಂ ಆಗಿ ಸಿದ್ದರಾಮಯ್ಯ ಅವರೇ ಐದು ವರ್ಷ ಇರುತ್ತಾರೆ ಎಂದು ಹೇಳಿಲ್ಲ. ಡಿಕೆಶಿ ಬಹಿರಂಗವಾಗಿ ಹೇಳಲಿ ನೋಡೋಣ. ಹೇಳಿಲ್ಲ ಅಂದ್ರೆ ನಾಯಕತ್ವ ಬದಲಾವಣೆಯ ಕೆಲಸ ನಡೀತಾ ಇದೆ ಅಂತ ಅರ್ಥ ಇದೆ ರೀತಿ ಮುಂದುವರೆದರೆ ಸರ್ಕಾರ ಪತನ ಆಗೋದು ಖಚಿತ ಎಂದರು.



Source link

Leave a Reply

Your email address will not be published. Required fields are marked *