‘ಟನ್ ಕಬ್ಬಿಗೆ 3,500 ಬೆಲೆ ಬೇಕು’ ಮುಧೋಳ ರೈತರ ಪಟ್ಟು
ಬಾಗಲಕೋಟೆ,ನವೆಂಬರ್ 10: ಬಾಗಲಕೋಟೆ (ಬಾಗಲಕೋಟೆ) ಜಿಲ್ಲೆಯ ಮುಧೋಳದಲ್ಲಿ 3,300 ರೂ. ಬೆಂಬಲ ಬೆಲೆಗೆ ಒಪ್ಪದ ಕಬ್ಬು ಬೆಳೆಗಾರರು, ಒಂದು ಟನ್ ಕಬ್ಬಿಗೆ 3,500 ರೂ. ಬೆಲೆ ನಿಗದಿಪಡಿಸುವಂತೆ ಹಾಗೂ ಹಿಂದಿನ ಬಾಕಿ ಹಣ ಪಾವತಿಸುವಂತೆ ಪ್ರತಿಭಟನೆ ನಡೆಸಿದ್ದರು. ಈ ಕುರಿತು ಸಕ್ಕರೆ ಕಾರ್ಖಾನೆ ಸಭೆ ನಡೆಸಿ ಚರ್ಚಿಸಿದ್ದು, ಸುಮಾರು ಹದಿಮೂರು ಕಾರ್ಖಾನೆಗಳ ಜೊತೆ ಭಾಗವಹಿಸಿದ್ದರು. ಇದೀಗ ಮುಧೋಳ ರೈತರು ಹೋರಾಟ ತೀವ್ರಗೊಳಿಸಿದ್ದು, ಟನ್ ಕಬ್ಬಿಗೆ 3,500 ಬೆಲೆ ಬೇಕು ಎಂದು ಪಟ್ಟು ಹಿಡಿದು ಕೂತಿದ್ದಾರೆ.
ರೈತರ ಸಂಧಾನ ಸಭೆ ವಿಫಲವಾಗಿದೆ
ನಿರಂತರ ಹೋರಾಟದ ಫಲವಾಗಿ ಕಬ್ಬು ಬೆಳೆಗೆ ಸಿಎಂ ಘೋಷಣೆ ಮಾಡಿದ್ದಾರೆ. ರಾಜ್ಯಾದ್ಯಂತ ರೈತರು ಸಂಭ್ರಮಿಸಿದರೂ ಬಾಗಲಕೋಟೆಯ ರೈತರು ಮಾತ್ರ ಸಿಎಂ ಆದೇಶವನ್ನು ಒಪ್ಪುತ್ತಿಲ್ಲ. ರೈತರ ಮನವೊಲಿಸಲು ನಡೆದ ಸಂಧಾನ ಸಭೆ ವಿಫಲವಾಗಿದ್ದು, ಹೋರಾಟ ತೀವ್ರಗೊಂಡಿದೆ. ಕಬ್ಬು ಬೆಳೆಗಾರರ ಹೋರಾಟದಿಂದ ಎಚ್ಚೆತ್ತ ಜಿಲ್ಲಾಧಿಕಾರಿ, ಬಾಗಲಕೋಟೆ ಡಿಸಿ ಕಛೇರಿಯಲ್ಲಿ ಕಾರ್ಖಾನೆ ಜಲಾಶಯದೊಂದಿಗೆ ಸಭೆ ನಡೆಸಿದರು. ಸರ್ಕಾರದ ಆದೇಶವನ್ನು ಕಾರ್ಖಾನೆ ಒಪ್ಪಿಸಿದರೂ ರೈತರು ಮಾತ್ರ ಒಪ್ಪಲಿಲ್ಲ.
ರೈತರ ಹೋರಾಟದ ಕಿಚ್ಚು ಹೆಚ್ಚಾದ ಕೂಡಲೇ ಮುಧೋಳ ಐಬಿಯಲ್ಲಿ ಉಸ್ತುವಾರಿ ಸಚಿವ ಆರ್.ಬಿ.ತಿಮ್ಮಾಪುರ ರೈತರೊಂದಿಗೆ ಮಾಜಿ ಸಚಿವ ಎಸ್.ಆರ್. ಪಾಟೀಲ್ ಒಡೆತನದ ಬೀಳಗಿ ಶುಗರ್ಸ್, ನಿರಾಣಿ ಶುಗರ್ಸ್, ಪ್ರಭುಲಿಂಗೇಶ್ವರ ಸಕ್ಕರೆ ಕಾರ್ಖಾನೆ ಸೇರಿದಂತೆ ಹದಿಮೂರು ಕಾರ್ಖಾನೆಗಳ ಜೊತೆ ಸಭೆ ನಡೆಸಿದರು. ಸಿಎಂ ಘೋಷಿಸಿದ ಬೆಲೆ ಒಪ್ಪಿಕೊಳ್ಳಿ ಎಂದು ರೈತರ ಮನವೊಲಿಸಲು ಪ್ರಯತ್ನಿಸಿದರು. ಆದರೆ ರೈತರು, ಟನ್ ಕಬ್ಬಿಗೆ 3,500 ರೂಪಾಯಿ ಬೇಕೆ ಬೇಕು ಹಾಗೂ ಹೆಚ್ಚುವರಿ 500 ರೂ. ನೀಡಬೇಕೆಂದು ಪಟ್ಟು ಹಿಡಿದಿರುವ ಸಂಧಾನ ಸಭೆ ವಿಫಲವಾಗಿದೆ, ಸಿಡಿದೆದ್ದ ರೈತರು ಮಧ್ಯರಾತ್ರಿಯವರೆಗೂ ರಸ್ತೆಯಲ್ಲಿಯೇ ಧರಣಿ ಮಾಡಿದ್ದಾರೆ. ಅದರೊದಿಗೆ ಮುಧೋಳದಲ್ಲಿ ರಸ್ತೆ ಬಂದ್ ಮಾಡಿ ಆಕ್ರೋಶ ಹೊರಹಾಕಿದ್ದಾರೆ.
ಇದನ್ನೂ ಓದಿ ಕಬ್ಬು ರೈತರ ಪ್ರತಿಭಟನೆ: 3,300 ರೂ ಬೆಂಬಲ ಬೆಲೆಗೆ ಒಪ್ಪದ ರೈತರ ಹೋರಾಟ
ಹಾವೇರಿಯಲ್ಲಿಯೂ ರೈತರ ಪ್ರತಿಭಟನೆ
ಹಾವೇರಿ ಜಿಲ್ಲೆಯಲ್ಲೂ ಕಬ್ಬು ಬೆಳೆಗಾರರ ಹೋರಾಟದ ಕಿಚ್ಚು. ಸರ್ಕಾರ ಆದೇಶ ನೀಡಿದರೂ ಬೆಲೆ ಕೊಡಲು ಹಿಂದೇಟು ಹಾಕುತ್ತಿದ್ದಾರೆ ಎಂದು ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಎಚ್ಚೆತ್ತ ಡಿಸಿ, ಕಾರ್ಖಾನೆ ನೇಮಕ, ರೈತರ ಜೊತೆ ಸಭೆ ನಡೆಸಿದ್ದು, ಒಮ್ಮತಕ್ಕೆ ಬಾರದ ಸಭೆ ಧಿಕ್ಕರಿಸಿದ ರೈತರು ಡಿಸಿ ಕಚೇರಿ ಬಳಿಯೇ ಪ್ರತಿಭಟನೆ ನಡೆಸಿದರು. ಹೋರಾಟವನ್ನು ತೀವ್ರಗೊಳಿಸುವ ಎಚ್ಚರಿಕೆಯನ್ನೂ ನೀಡಿದೆ.
ಮೆಕ್ಕೆಜೋಳ ಬೆಳೆಗಾರರ ಆಕ್ರೋಶ
ಧಾರವಾಡ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಸಾವಿರಾರು ಹೆಕ್ಟೇರ್ ಪ್ರದೇಶದಲ್ಲಿನ ಬೆಳೆ ನೀರು ಪಾಲಾಗಿದೆ. ಆದಾಗ್ಯೂ ರೈತರು ಮೆಕ್ಕೆಜೋಳ ಬೆಳೆಯನ್ನು ರಕ್ಷಿಸಿದ್ದಾರೆ.ಆದರೀಗ ಮೆಕ್ಕೆಜೋಳದ ದರ ಕುಸಿತ ಕಂಡಿದೆ. ದಲ್ಲಾಳಿಗಳು ಬಾಯಿಗೆ ಬಂದ ದರಕ್ಕೆ ಕೇಳುತ್ತಿದ್ದಾರೆ ಮುಂದೇನು ಮಾಡಬೇಕೆಂದು ತಿಳಿಯದ ರೈತರು ಕಂಗಾಲಾಗಿದ್ದಾರೆ.
ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
ರಂದು ಪ್ರಕಟಿಸಲಾಗಿದೆ – 8:39 am, ಸೋಮ, 10 ನವೆಂಬರ್ 25