ಬೆಂಗಳೂರು, ನವೆಂಬರ್ 10: ದೆಹಲಿಯ ಕೆಂಪುಕೋಟೆಯ (ಕೆಂಪು ಕೋಟೆ) ಮೆಟ್ರೋ ನಿಲ್ದಾಣದ ಗೇಟ್ ಸಂಖ್ಯೆ 1ರ ಬಳಿ ಭಯಾನಕ ಕಾರು ಸ್ಫೋಟ ಸಂಭವಿಸಿದೆ. ಈ ದುರಂತದಲ್ಲಿ ರೋಗಿಗಳ ಸಂಖ್ಯೆ 10ಕ್ಕೆ ಏರಿದ್ದು, 15ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯ. ಸದ್ಯಕ್ಕೆ ಹೈಅಲರ್ಟ್ ಘೋಷಿಸಿದ್ದು ಇತ್ತ ಕರ್ನಾಟಕದಲ್ಲೂ (ಕರ್ನಾಟಕ) ಕಟ್ಟೆಚ್ಚರ ವಹಿಸುವಂತೆ ಪೊಲೀಸರಿಗೆ ಡಿಜಿ&ಐಜಿಪಿ ಸೂಚನೆ ನೀಡಲಾಗಿದೆ.
ರಾಜ್ಯದಲ್ಲಿ ಕಟ್ಟೆಚ್ಚರ
ಕಾರು ಸ್ಫೋಟ ಬೆನ್ನಲ್ಲೇ ಬೆಂಗಳೂರು ಸೇರಿದಂತೆ ಜಿಲ್ಲಾ ಕೇಂದ್ರಗಳಲ್ಲಿ ಕಟ್ಟೆಚ್ಚರ ವಹಿಸುವಂತೆ ರಾಜ್ಯ ಪೊಲೀಸ್ ಮಹಾನಿರ್ದೇಶಕ ಡಾ.ಎಂ.ಸಲೀಂ ದೆಹಲಿ ಆದೇಶ ಹೊರಡಿಸಿದ್ದಾರೆ. ವಿಮಾನ ನಿಲ್ದಾಣ, ಬಂದರು, ರೈಲು ನಿಲ್ದಾಣ, ಬಸ್ ನಿಲ್ದಾಣಗಳು, ಮಾರುಕಟ್ಟೆಗಳು ಸೇರಿದಂತೆ ಜನನಿಬಿಡ ಪ್ರದೇಶಗಳಲ್ಲಿ, ಜಿಲ್ಲೆ ನಿಗಾವಹಿಸುವಂತೆ ಎಸ್ಪಿಗಳಿಗೆ ಡಿಜಿ&ಐಪಿ ಆದೇಶ ನೀಡಲಾಗಿದೆ.
ಇದನ್ನೂ ಓದಿ: ದೆಹಲಿ ಬ್ಲಾಸ್ಟ್: ದಿಲ್ಲಿ ಕೆಂಪುಕೋಟೆ ಬಳಿ ಸ್ಫೋಟ: ಕನಿಷ್ಠ 9 ಜನ ಸಾವು, ಹೈಅಲರ್ಟ್
ಬೆಂಗಳೂರಿನಲ್ಲಿ ಕಟ್ಟೆಚ್ಚರ ವಹಿಸುವಂತೆ ಪೊಲೀಸ್ ಕಮಿಷನರ್ ಸೂಚಿಸಿದ್ದಾರೆ. ಕೂಡಲೇ ಠಾಣಾ ನಿರ್ಮಾಣ ಗಸ್ತು ಮಾಡಬೇಕು. ಲಾಡ್ಜ್ಗಳನ್ನು ತಪಾಸಣೆ ಮಾಡಿ, ಲಾಡ್ಜ್ನಲ್ಲಿ ತಂಗಿರುವ ಹೊರ ರಾಜ್ಯದವರ ವಿಚಾರಣೆ ಮಾಡಬೇಕು. ರಾತ್ರಿ ವೇಳೆ ಗಸ್ತು ಮಾಡುವಂತೆ ಡಿಸಿಪಿ, ಎಸ್ಸಿಪಿ, ಇನ್ಸ್ ಪೆಕ್ಟರ್ ಗಳಿಗೆ ಬೆಂಗಳೂರು ನಗರ ಪೊಲೀಸ್ ಕಮಿಷನರ್ ಸೀಮಂತ್ ಕುಮಾರ್ ಸಿಂಗ್ ಸೂಚನೆ ನೀಡಿದ್ದಾರೆ.
ನಡೆದದ್ದೇನು?
ಸೋಮವಾರ ಸಂಜೆ 6 ಗಂಟೆ 50 ನಿಮಿಷದ ಸುಮಾರಿಗೆ ದೆಹಲಿಯ ಕೆಂಪುಕೋಟೆಯ ಮೆಟ್ರೋ ನಿಲ್ದಾಣದ ಗೇಟ್ ನಂಬರ್ 1 ರ ಬಳಿ ಪಾರ್ಕಿಂಗ್ನಲ್ಲಿ ಮಾರುತಿ ಇಕೋ ವ್ಯಾನ್ ಸ್ಫೋಟಗೊಂಡಿದೆ. ಸ್ಫೋಟದ ತೀವ್ರತೆ ಎಷ್ಟರ ಮಟ್ಟಿಗೆ ಇತ್ತೆಂದರೆ, ಸ್ಥಳದಲ್ಲಿ ಮಲಗುತ್ತಿದ್ದ ಹಲವರ ದೇಹಗಳು ಛಿದ್ರಛಿದ್ರವಾಗುತ್ತಿವೆ. ರಸ್ತೆಯಲ್ಲಿ, ಕಾರಿನ ಮೇಲೆ ಮೃತದೇಹಗಳು ಪೀಸ್ ಪೀಸ್ ಆಗಿ ರಕ್ತ ಸಿಕ್ತವಾಗಿ ಬಿದ್ದಿವೆ.
ಇದನ್ನೂ ಓದಿ: ಕೆಂಪು ಕೋಟೆ ಬಳಿ ಕಾರು ಸ್ಫೋಟವಾಗಿ 8 ಜನ ಸಾವು; ದೆಹಲಿಯಲ್ಲಿ ಹೈ ಅಲರ್ಟ್
ಇನ್ನು ಬೆಂಕಿ ಎಷ್ಟರ ಮಟ್ಟಿಗೆ ವ್ಯಾಪಿಸಿತು ಅಂದರೆ ನೋಡುತ್ತಲೇ ಅಲ್ಲೇ ನಿಂತಿದ್ದ ಹಲವು ವಾಹನಗಳಿಗೆ ಬೆಂಕಿಯ ಜ್ವಾಲೆ ವ್ಯಾಪಿಸಿದೆ. ಸ್ಫೋಟದಲ್ಲಿ ಒಟ್ಟು 9ಕ್ಕೂ ಹೆಚ್ಚು ವಾಹನಗಳೂ ಸಹ ಹೊತ್ತಿ ಉರಿದಿವೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.