ಕಾರು ಬಾಂಬ್‌ ಸ್ಪೋಟದ ಸಾವಿನ ಸಂಖ್ಯೆ 12ಕ್ಕೆ ಏರಿಕೆ, ಮೃತರ ಕುಟುಂಬಕ್ಕೆ 10 ಲಕ್ಷ ಪರಿಹಾರ | Delhi Car Blast Death Toll Rises To 12 Rs 10 Lakh Compensation San

ಕಾರು ಬಾಂಬ್‌ ಸ್ಪೋಟದ ಸಾವಿನ ಸಂಖ್ಯೆ 12ಕ್ಕೆ ಏರಿಕೆ, ಮೃತರ ಕುಟುಂಬಕ್ಕೆ 10 ಲಕ್ಷ ಪರಿಹಾರ | Delhi Car Blast Death Toll Rises To 12 Rs 10 Lakh Compensation San



ಕಾರು ಬಾಂಬ್‌ ಸ್ಪೋಟದ ಸಾವಿನ ಸಂಖ್ಯೆ 12ಕ್ಕೆ ಏರಿಕೆ, ಮೃತರ ಕುಟುಂಬಕ್ಕೆ 10 ಲಕ್ಷ ಪರಿಹಾರ | Delhi Car Blast Death Toll Rises To 12 Rs 10 Lakh Compensation San

ದೆಹಲಿಯ ಕೆಂಪುಕೋಟೆ ಬಳಿ ಸಂಭವಿಸಿದ ಕಾರು ಸ್ಫೋಟದಲ್ಲಿ ಮೃತಪಟ್ಟವರ ಸಂಖ್ಯೆ 12ಕ್ಕೆ ಏರಿಕೆಯಾಗಿದೆ. ಈ ದುರಂತದಲ್ಲಿ ಮೃತರ ಕುಟುಂಬಕ್ಕೆ ದೆಹಲಿ ಸರ್ಕಾರವು ತಲಾ 10 ಲಕ್ಷ ರೂಪಾಯಿ ಪರಿಹಾರವನ್ನು ಘೋಷಿಸಿದ್ದು, ಗಾಯಾಳುಗಳಿಗೆ ಉತ್ತಮ ಚಿಕಿತ್ಸೆ ನೀಡುವ ಭರವಸೆ ನೀಡಿದೆ.

ನವದೆಹಲಿ (ನ.12): ಸೋಮವಾರ ಸಂಜೆ ರಾಷ್ಟ್ರ ರಾಾಜಧಾನಿ ದೆಹಲಿಯ ಕೆಂಪುಕೋಟೆ ಬಳಿ ಸಂಭವಿಸಿದ ಕಾರು ಸ್ಫೋಟದಲ್ಲಿ ಸಾವನ್ನಪ್ಪಿದ್ದವರ ಸಂಖ್ಯೆ 12ಕ್ಕೇರಿಕೆಯಾಗಿದೆ. ಸೋಮವಾರ ತಡರಾತ್ರಿ ತನಕ 9 ಜನ ಸಾವನ್ನಪ್ಪಿದ್ದು, 20ಕ್ಕೂ ಹೆಚ್ಚು ಮಂದಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆ ಯುತ್ತಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿತ್ತು. ಈ ಪೈಕಿ ಮತ್ತೆ ಮೂವರು ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.

ಮೃತರ ಕುಟುಂಬಕ್ಕೆ ₹10 ಲಕ್ಷ, ಗಾಯಾಳುಗಳಿಗೆ ₹5 ಲಕ್ಷ ಪರಿಹಾರ ಪ್ರಕಟ

ಕೆಂಪುಕೋಟೆ ಬಳಿ ನಡೆದ ಕಾರು ಸ್ಫೋಟದಲ್ಲಿ ಮೃತಪಟ್ಟವರ ಕುಟುಂಬಕ್ಕೆ ತಲಾ 10 ಲಕ್ಷ ರು. ಪರಿಹಾರಧನ ನೀಡುವುದಾಗಿ ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಮಂಗಳವಾರ ಘೋಷಿಸಿದ್ದಾರೆ. ಎಕ್ಸ್‌ನಲ್ಲಿ ಮಾಹಿತಿ ನೀಡಿರುವ ಅವರು, ಮೃತರ ಕುಟುಂಬಕ್ಕೆ ತಲಾ 10 ಲಕ್ಷ ರು., ಶಾಶ್ವತ ಅಂಗವೈಕಲ್ಯಕ್ಕೆ ತುತ್ತಾದವರಿಗೆ 5 ಲಕ್ಷ ರು., ಗಂಭೀರವಾಗಿ ಗಾಯಗೊಂಡವರಿಗೆ 2 ಲಕ್ಷ ರು. ಪರಿಹಾರಧನ ನೀಡಲಾಗುತ್ತದೆ. ಎಲ್ಲಾ ಗಾಯಾಳುಗಳಿಗೆ ಗುಣಮಟ್ಟದ ವೈದ್ಯಕೀಯ ಚಿಕಿತ್ಸೆಯನ್ನು ನೀಡಲು ಸರ್ಕಾರ ಬದ್ಧವಾಗಿದೆ ಎಂದು ತಿಳಿಸಿದ್ದಾರೆ.

ಇದು ಕೆಂಪುಕೋಟೆ ಬಳಿ ಸಂಭವಿಸಿದ 3ನೇ ಸ್ಫೋಟ

ನ.10ರ ಸಂಜೆ ದೆಹಲಿಯ ಕೆಂಪುಕೋಟೆ ಬಳಿ ನಡೆದ ಭೀಕರ ಸ್ಪೋಟ, 12 ಜನರ ಸಾವು ಎಲ್ಲರನ್ನೂ ಬೆಚ್ಚಿ ಬೀಳಿಸಿದೆ. ಬಿಗಿ ಭದ್ರತೆಯಿರುವ ಈ ಸ್ಥಳ ಹಿಂದೆಯೂ 2 ಸಲ ಭೀಕರ ದುರಂತಕ್ಕೆ ಸಾಕ್ಷಿಯಾಗಿತ್ತು. 1997ರ ನ.30ರಂದು ಅವಳಿ ಸ್ಫೋಟ ಸಂಭವಿಸಿತ್ತು. ಆಗ ಮೂವರು ಮೃತಪಟ್ಟಿದ್ದು, 70 ಮಂದಿ ಗಾಯಗೊಂಡಿದ್ದರು. ಅದಾಗಿ ಮೂರು ವರ್ಷಗಳ ಬಳಿಕ ಅಂದರೆ 2000ರ ಜೂ.18 ರಂದು ಎರಡು ಪ್ರಬಲ ಬಾಂಬ್ ಸ್ಫೋಟ ಸಂಭವಿಸಿತ್ತು. ಘಟನೆಯಲ್ಲಿ ಎಂಟು ವರ್ಷದ ಬಾಲಕಿ ಸೇರಿ ಇಬ್ಬರು ಸಾವನ್ನಪ್ಪಿದ್ದರು. 12 ಮಂದಿ ಗಾಯಗೊಂಡಿದರು.

ಸ್ಫೋಟ ಬೆನ್ನಲ್ಲೇ ಶಂಕಿತ ಉಗ್ರಗೆ ಜಾಮೀನು ನಕಾರ

ಸುಪ್ರೀಂ ಕೋರ್ಟ್ ಮಂಗಳವಾರ ನಿಷೇಧಿತ ಐಸಿಸ್ ಜತೆಗೆ ನಂಟಿದ್ದ ವ್ಯಕ್ತಿಯೊಬ್ಬನ ಜಾಮೀನು ಅರ್ಜಿಯನ್ನು ತಿರಸ್ಕರಿಸಿದೆ. ಈ ವೇಳೆ ‘ಉಗ್ರವಾದದ ವಿರುದ್ಧ ಸಂದೇಶ ಕಳುಹಿಸಲು ಇದು ಸುಸಂದರ್ಭ’ ಎಂದು ಕೆಂಪುಕೋಟೆ ಸ್ಪೋಟ ಉಲ್ಲೇಖಿಸಿ ಉಗ್ರರಿಗೆ ಎಚ್ಚರಿಕೆ ನೀಡಿದೆ. ಮಂಗಳವಾರ ನ್ಯಾ । ವಿಕ್ರಮ್ ನಾಥ್ ಮತ್ತು ನ್ಯಾ| ಸಂದೀಪ್ ಮೆಹ್ರಾ ಅವರಿದ್ದ ದ್ವಿಸದಸ್ಯ ಪೀಠದ ಮುಂದೆ ಐಸಿಸ್ ನಂಟಿನ ಆರೋಪ ಹೊತ್ತಿದ್ದಹಾಗೂ ಯುಎಪಿಎ, ಭಾರತೀಯ ದಂಡ ಸಂಹಿತೆ ಸೇರಿದಂತೆ ವಿವಿಧ ಪ್ರಕರಣಗಳಲ್ಲಿ 2023ರಲ್ಲಿ ಜೈಲು ಸೇರಿದ್ದು ಸೈಯ್ಯದ್ ಮಾಮೂರ್ ಎಂಬಾತನ ಜಾಮೀನು ಅರ್ಜಿ ವಿಚಾರಣೆಗೆ ಬಂದಿತ್ತು. ಈ ವೇಳೆ, ‘ದೇಶದಲ್ಲಿ ಭಯೋತ್ಪಾದಕ ಜಾಲ ವಿಸ್ತರಿಸುತ್ತಿರುವ ಅರೋಪ ನಿಮ್ಮ ಮೇಲಿದೆ’ ಎಂದು ಹೇಳಿದ ಪೀಠ ಅರ್ಜಿ ವಜಾ ಮಾಡಿತು.

ಸಚಿವ ಅಮಿತ್ ಶಾ ವಿರುದ್ಧ ವಿಪಕ್ಷ ನಾಯಕರ ವಾಗ್ದಾಳಿ

ಕೆಂಪುಕೋಟೆ ಬಳಿಯ ಸ್ಫೋಟಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಮಂಗಳವಾರ ಟಿಎಂಸಿ ಸಂಸದರಾದ ಮಹುವಾ ಮೊಯಿತ್ರಾ ಹಾಗೂ ಅಭಿಷೇಕ್ ಬ್ಯಾನರ್ಜಿ ಸೇರಿ ಹಲವರು ಕಿಡಿಕಾರಿದ್ದಾರೆ. ‘ದೇಶಕ್ಕೆ ಸಮರ್ಥ ಗೃಹ ಸಚಿವರ ಅಗತ್ಯವಿದೆ’ ಎಂದು ಹೇಳಿದ್ದಾರೆ. ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಮಹುವಾ, ‘ದೇಶಕ್ಕೆ ಪೂರ್ಣಪ್ರಮಾಣದ ದ್ವೇಷ ಅಭಿ ಯಾನ ನಡೆಸುವ ಗೃಹಮಂತ್ರಿ ಬೇಕಿಲ್ಲ. ದೇಶದ ಗಡಿಗಳು, ನಗರಗಳು ಎರಡನ್ನೂ ರಕ್ಷಿಸುವುದು ಅಮಿತ್ ಶಾ ಕರ್ತವ್ಯವಲ್ಲವೇ? ಅವರೇಕೆ ಎಲ್ಲ ವಿಷಯಗಳಲ್ಲಿ ಅದ್ಭುತ ವಾಗಿ ವಿಫಲರಾಗುತ್ತಿದ್ದಾರೆ’ ಎಂದು ವ್ಯಂಗ್ಯವಾಡಿದ್ದಾರೆ.

ಖೇರಾ ಕಿಡಿ: ಇದೇ ವೇಳೆ, ಕಾಂಗ್ರೆಸ್ ವಕ್ತಾರ ಪವನ್ ಖೇರಾ ಕೂಡ ಕೇಂದ್ರ ಸರ್ಕಾರದ ಬಗ್ಗೆ ಕಿಡಿಕಾರಿದ್ದಾರೆ. ‘ಸ್ಫೋಟ ಸಂಭವಿಸಿ 1 ದಿನವಾದರೂ ಯಾವುದೇ ಸ್ಪಷ್ಟತೆ ಹೊರಬಿದ್ದಿಲ್ಲ. ಕೇಂದ್ರ ಗೃಹ ಸಚಿವರು, ದಿಲ್ಲಿ ಪೊಲೀಸರು, ಗೃಹ ಕಾರ್ಯದರ್ಶಿಗಳು ಪತ್ರಿಕಾಗೋಷ್ಠಿ ಕರೆದು ಎಲ್ಲ ಸಂದೇಹ ಪರಿಹರಿಸಬೇಕು’ ಎಂದಿದ್ದಾರೆ.



Source link

Leave a Reply

Your email address will not be published. Required fields are marked *